ಆನೆಯಿಂದ ಮಾಲಾರ್ಪಣೆ: ಇನ್ನು ಕುಮಾರಸ್ವಾಮಿಯನ್ನು ತಡೆಯುವವರು ಯಾರು?
Recommended Video
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ದೊರೆ ಆಗಮಿಸಿದಾಗ, ಅಲ್ಲಿ ಅಕ್ಷರಸಃ ಹಬ್ಬದ ವಾತಾವರಣ. ಚಿಕ್ಕವರು, ದೊಡ್ಡವರು ಎನ್ನದೇ, ಎಲ್ಲರೂ ನಾಡಿನ ಮುಖ್ಯಮಂತ್ರಿಯನ್ನು ನೋಡಲು ಆಗಮಿಸಿದ್ದರು.
ಹಳ್ಳಿಯ ಪ್ರತೀ ಮನೆಯ ಮುಂದೆ ತಳಿರು ತೋರಣ, ರಂಗೋಲಿ. ಉಜಳಂಬ ಗ್ರಾಮದವರಲ್ಲದೇ ಪಕ್ಕದ ಊರಿನವರೂ ತಂಡೋಪತಂಡವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಕಣ್ತುಂಬಿಸಿಕೊಳ್ಳಲು ಬಂದಿದ್ದರು.
ಒಂದು ಕಡೆ ಡೊಳ್ಳು ಕುಣಿತ, ಭಜನೆ, ನಾನಾ ಕಲಾಪ್ರಕಾರದ ಮೆರವಣಿಗೆ, ಇನ್ನೊಂದೆಡೆ ಬಂದ ಜನರಿಗಾಗಿ ತಯಾರು ಮಾಡಲಾಗಿದ್ದ ಗೋದಿ ಹುಗ್ಗಿ, ಅನ್ನಸಾರು ಪರಿಮಳ. ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಉಜಳಂಬ ಗ್ರಾಮಕ್ಕೆ ಕರೆದುಕೊಂಡು ಬರಲಾಯಿತು.

ಉಜಳಂಬ ಗ್ರಾಮಕ್ಕೆ ಆಗಮಿಸದ ಕೂಡಲೇ, ಮೊದಲು ಕಲಬುರಗಿ ಜಿಲ್ಲೆಯ ಕಡಗಂಚಿ ಮಠದ ಆನೆ ಗಜಲಕ್ಷ್ಮೀ ಮುಖ್ಯಮಂತ್ರಿಗಳಿಗೆ ಮಾಲಾರ್ಪಣೆ ಮಾಡಿತು. ಈ ಆನೆಯಿಂದ ಹಾರ ಹಾಕಿಸಿಕೊಂಡರೆ ಅದಕ್ಕೆ ವಿಶೇಷ ಶಕ್ತಿಯಿದೆ ಎನ್ನುವುದು ಇಲ್ಲಿನ ಜನರ ನಂಬಿಕೆ.
ಮುಖ್ಯಮಂತ್ರಿಗಳಿಗೆ ಈ ಮಠದ ಆನೆ ಹಾರ ಹಾಕಿ ಸ್ವಾಗತಿಸುವುದು ಇದೇನು ಹೊಸದಲ್ಲ. ಹಿಂದೆ ಕೂಡಾ, ಎಸ್ ಎಂ ಕೃಷ್ಣ ಮತ್ತು ಸಿದ್ದರಾಮಯ್ಯನವರಿಗೆ ಆನೆ ಮಾಲಾರ್ಪಣೆ ಮಾಡಿತ್ತಂತೆ. ಅಲ್ಲಿಂದ, ಇಬ್ಬರೂ ಯಾವುದೇ ಆತಂಕವಿಲ್ಲದೇ, ತಮ್ಮ ಮುಖ್ಯಮಂತ್ರಿ ಅವಧಿಯನ್ನು ಮುಗಿಸಿದ್ದರಂತೆ!

ಹಿಂದಿನ ಇಬ್ಬರೂ ಮುಖ್ಯಮಂತ್ರಿಗಳಿಗೆ ಒಳ್ಳೆದಾದಂತೆ, ಕುಮಾರಸ್ವಾಮಿಗೂ ಒಳಿತಾಗಲಿ ಎನ್ನುವ ಕಾರಣಕ್ಕಾಗಿ ಈ ಆನೆಯನ್ನು ಕಲಬುರಗಿ ಕಡಗಂಚಿ ಮಠದಿಂದ ಕರೆಸಲಾಗಿತ್ತು ಎನ್ನುವುದು ವಿಶೇಷ.
ಉಜಳಂಬ ಗ್ರಾಮದ ಜನತೆ ತೋರಿದ ಪ್ರೀತಿ, ಆತಿಥ್ಯಕ್ಕೆ ಮನಸೋತೋ ಏನೋ ಮುಖ್ಯಮಂತ್ರಿಗಳು 32.10ಕೊಟಿ ರೂಪಾಯಿಯನ್ನು ವಿವಿಧ ಕಾಮಗಾರಿಗಳಿಗಾಗಿ ಘೋಷಿಸಿದರು. ಕೆಲವೊಂದಕ್ಕೆ ಆನ್ ದಿ ಸ್ಪಾಟ್ ಚಾಲನೆ ನೀಡಿದರು. ಅಲ್ಲಿಗೆ, ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಒಂದು ರೀತಿಯಲ್ಲಿ ಸಾರ್ಥಕತೆಯನ್ನು ಪಡೆಯಿತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications