ಮಕ್ಕಳ ಹಾಸಿಗೆ ದಿಂಬಿನಲ್ಲಿ ಲೂಟಿ ಹೊಡೆದವರು ಲೆಕ್ಕ ಕೇಳುತ್ತಿದ್ದಾರೆ
ಬೆಂಗಳೂರು, ಜು, 23: ಕಾಂಗ್ರೆಸ್ ಪಕ್ಷದ ಲೆಕ್ಕ ಕೊಡಿ ಬಿಜೆಪಿ ಅಭಿಯಾನಕ್ಕೆ ಬಿಜೆಪಿ ನಾಯಕರೂ ಕೂಡ ಪ್ರತ್ಯುತ್ತರ ಕೊಡುತ್ತಿದ್ದಾರೆ. ಜಂಟಿ ಸುದ್ದಿಗೋಷ್ಠಿಯಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋವಿಡ್ ಸಮಯದಲ್ಲಿ ಸರ್ಕಾರ 4,167 ರೂಪಾಯಿಗಳ ಖರೀದಿ ಹಗರಣ ಮಾಡಿದೆ ಎಂಬ ಆರೋಪಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿಧಾನಸೌಧದಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಕ್ಕಳು ಬಳಸುವ ಹಾಸಿಗೆ ದಿಂಬಿನಲ್ಲಿ ಲೂಟಿ ಹೊಡೆದವರು ಈಗ ಲೆಕ್ಕ ಕೇಳುತ್ತಿದ್ದಾರೆ ಎಂದು ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಮಕ್ಕಳು ಬಳಸುವ ಹಾಸಿಗೆ ದಿಂಬಿನಲ್ಲಿ ಲೂಟಿ ಮಾಡಿದ್ದರು. ಈಗ ಕೋವಿಡ್-19 ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಂಕಷ್ಟ ಕಾಲದಲ್ಲಿಯ ಖರೀದಿಗೆ ಸರ್ಕಾರ ಎಲ್ಲ ದಾಖಲೆಗಳನ್ನೂ ಇಟ್ಟಿದೆ.
ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಯಾವುದೇ ವಿಚಾರಗಳು ಇಲ್ಲ. ಅದಕ್ಕೆ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ. ಸರ್ಕಾರದ ಮೇಲೆ ದಿನನಿತ್ಯ ಆರೋಪಗಳನ್ನು ಮಾಡಲೇಬೇಕು ಎಂದು ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವಿರೋಧ ಪಕ್ಷ ನಾಯಕರಾಗಿ ಸರ್ಕಾರಕ್ಕೆ ಕ್ರಿಯಾತ್ಮಕ ಸಲಹೆಗಳನ್ನು ಕೊಡುವ ಕೆಲಸ ಮಾಡಿ ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡುತ್ತಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ ಕೊಟ್ಟಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications