ಸಚಿವ ಸ್ಥಾನಕ್ಕಾಗಿ ಪ್ರಯತ್ನ: ಅರುಣ್ ಸಿಂಗ್ ಭೇಟಿಯಾದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
ನವದೆಹಲಿ, ಫೆ.9: ಸಚಿವ ಸ್ಥಾನಕ್ಕಾಗಿ ತೀವ್ರ ಪ್ರಯತ್ನ ಆರಂಭಿಸಿರುವ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡು ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯ ಎರಡು ದಿನ ದೆಹಲಿ ಪ್ರವಾಸದ ವೇಳೆ ಬಸವರಾಜ ಬೊಮ್ಮಾಯಿ ಅವರೊಂದಿಗೆ ತೆರಳಿದ್ದ ರೇಣುಕಾಚಾರ್ಯ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಸದ್ಯದಲ್ಲಿಯೇ ಉತ್ತಮ ಸ್ಥಾನ ಸಿಗಲಿದೆ ಎಂಬ ಆಶ್ವಾಸನೆಯನ್ನು ಅರುಣ್ ಸಿಂಗ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಪುಟದ ಸಚಿವರ ಬಗ್ಗೆ ರೇಣುಕಾಚಾರ್ಯ ಇತ್ತೀಚೆಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಕೆಲವು ಸಚಿವರು ಶಾಸಕರ ದೂರವಾಣಿ ಕರೆಯ ಸ್ವೀಕರಿಸುವುದಿಲ್ಲ. ಅಲ್ಲದೆ, ನಮ್ಮ ಕ್ಷೇತ್ರಗಳಲ್ಲಿ ಕೆಲಸ ಕಾರ್ಯಗಳನ್ನೂ ಮಾಡಿ ಕೊಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಮಾತುಕತೆಯ ಸಂದರ್ಭದಲ್ಲಿ ಅರುಣ್ ಸಿಂಗ್ ಅವರು ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾದಂತೆ ಯಾರೆಲ್ಲ ಸಚಿವರು ಶಾಸಕರ
ಕೆಲಸ ಕಾರ್ಯಗಳನ್ನು ಮಾಡಿಕೊಡುತ್ತಿಲ್ಲ ಎಂಬುದರ ಕುರಿತು ವಿವರ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ತಾಳ್ಮೆಯಿಂದ ಇರಿ
ಇನ್ನು ಮಾತುಕತೆಯ ವೇಳೆ ಅರುಣ್ ಸಿಂಗ್ ಅವರು ರೇಣುಕಾಚಾರ್ಯ ಅವರಿಗೆ ಸಂಯಮದಿಂದ ಇರುವಂತೆ ಕಿವಿಮಾತು ಹೇಳಿದ್ದಾರೆ.

ನಿಮಗೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಕೊರೊನಾ ಸಂದರ್ಭದಲ್ಲಿ ನೀವು ಮಾಡಿರುವ ಕೆಲಸಗಳನ್ನು ವರಿಷ್ಟರು ಗಮನಿಸಿದ್ದಾರೆ. ಸಚಿವ ಸ್ಥಾನ ನಿಮಗೆ ಹಿಂದೆಯೇ ಸಿಗಬೇಕಿತ್ತು. ಕೆಲವು ಕಾರಣಗಳಿಂದ ಕೈ ತಪ್ಪಿ ಹೋಗಿದೆ. ಪಕ್ಷವು ನೀವು ಮಾಡುತ್ತಿರುವ ಕೆಲಸ ಕಾರ್ಯಗಳನ್ನು ಮೆಚ್ಚಿಕೊಂಡಿದೆ. ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ನಿಮಗೆ ಉತ್ತಮ ಭವಿಷ್ಯ ಇದೆ ಭರವಸೆ ಕೊಟ್ಟಿದ್ದಾರೆ.ಸೂಕ್ತ ಕಾಲದಲ್ಲಿ ಪಕ್ಷವು ನಿಮಗೆ ಮಹತ್ವದ ಜವಾಬ್ದಾರಿ ನೀಡಲಿದೆ ಎಂಬ ಅಭಯ ನೀಡಿದ್ದಾರೆ ಎನ್ನಲಾಗುತ್ತಿದೆ.
ನಿಮ್ಮ ಬಗ್ಗೆ ವೈಯಕ್ತಿಕವಾಗಿ ನನಗೆ ಬಹಳಷ್ಟು ಗೌರವವಿದೆ. ರಾಜಕೀಯದಲ್ಲಿ ಸಹನೆ ಮತ್ತು ತಾಳ್ಮೆ ಮುಖ್ಯ.ಶೀಘ್ರದಲ್ಲೇ ನಿಮ್ಮ ಭವಿಷ್ಯವು ಉಜ್ವಲವಾಗಲಿದೆ ಎಂದು ಅರುಣ್ ಸಿಂಗ್ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ರೇಣುಕಾಚಾರ್ಯ ಎಂ.ಪಿ.ಕುಮಾರಸ್ವಾಮಿ, ಶಿವರಾಜ್ ಪಾಟೀಲ್ ಅವರುಗಳು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications