ವಿಧಾನಸಭೆಯಲ್ಲಿ ಸಿದ್ದರಾಮಯ್ಯ, ಬೊಮ್ಮಾಯಿ ನಡುವೆ ಕಾಲೆಳೆದಾಟ
ಬೆಂಗಳೂರು, ಮೇ 24: ಸಚಿವರಿಗೆ ಖಾತೆ ಹಂಚಿಕೆ ವಿಳಂಬದ ಕುರಿತು ಮಾಜಿ ಮುಖ್ಯಮಂತ್ರಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಲ್ಲಿರುವ ಸಚಿವರಿಗೆ ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಬುಧವಾರ ಹೇಳಿದ್ದಾರೆ.
ಈಗ ಪ್ರತಿಪಕ್ಷವಾಗಿರುವ ಬಿಜೆಪಿಯಿಂದ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಿಲ್ಲ. ಬುಧವಾರ ಇಂದು ರಾಜ್ಯ ವಿಧಾನಸಭೆಯಲ್ಲಿ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯವನ್ನು ಪ್ರಸ್ತಾಪಿಸಿದ ನಂತರ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಡುವೆ ಕಾಲೆಳೆದಾಟ ನಡೆಯಿತು.

ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಮೇ 20 ರಂದು ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನಂತರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿರಲಿಲ್ಲ.
ಸಿಎಂ ತಮ್ಮ ಸಂಪುಟದ ಸಚಿವರನ್ನು ವಿಧಾನಸಭೆಯಲ್ಲಿ ಪರಿಚಯಿಸಿದ ತಕ್ಷಣ ಮಧ್ಯಪ್ರವೇಶಿಸಿದ ಬೊಮ್ಮಾಯಿ, ''ಮುಖ್ಯಮಂತ್ರಿ ಅವರು ಸಚಿವರನ್ನು ಸದನಕ್ಕೆ ಪರಿಚಯಿಸಿದ್ದಕ್ಕೆ ಖುಷಿಯಾಗಿದೆ, ಅವರೆಲ್ಲರೂ ಈ ಹಿಂದೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿಗಳಿಗೆ ಮತ್ತು ಎಲ್ಲಾ ಸಚಿವರಿಗೆ ಅಭಿನಂದನೆಗಳು, ಆದರೆ ಅವರಿಗೆ ಖಾತೆ ಹಂಚಿಕೆ ನಂತರ ಮುಖ್ಯಮಂತ್ರಿಗಳು ಮಂತ್ರಿಗಳನ್ನು ಪರಿಚಯಿಸಿದರೆ ಸೂಕ್ತವಾಗಿತ್ತು.
ಡಿ ಕೆ ಶಿವಕುಮಾರ್ ಇದಕ್ಕೆ ಮಂತ್ರಿ, ಜಿ ಪರಮೇಶ್ವರ ಹಿಂದೆ ಮಂತ್ರಿಯಾಗಿದ್ದರು. ಇದನ್ನು ಆದಷ್ಟು ಬೇಗ ಮಾಡಬೇಕು, ನನ್ನ ಅಭಿಪ್ರಾಯದಲ್ಲಿ, ಅದನ್ನು ಬೇಗನೆ ಮಾಡಿದರೆ ಅದು ಒಳ್ಳೆಯದು ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶೀಘ್ರದಲ್ಲಿಯೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಮೊದಲು ಸಚಿವ ಸಂಪುಟದ ಏಕಾಂಗಿ ಸದಸ್ಯರಾಗಿ ಸಾಕಷ್ಟು ಸಮಯ ಸೇವೆ ಸಲ್ಲಿಸಿದ್ದರು. ನಾವು ನಮ್ಮವರಿಗೆ ಆದಷ್ಟು ಬೇಗ ಜವಾಬ್ದಾರಿಯನ್ನು ನೀಡುತ್ತೇವೆ.
ಬಿ ಎಸ್ ಯಡಿಯೂರಪ್ಪ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿ ಸಂಪುಟದಲ್ಲಿ ಇದ್ದರು? ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ, ನಿಮಗೆ ಯಾವುದೇ ಅನುಮಾನ ಬೇಡ, ನಮ್ಮ ಸಚಿವರಿಗೆ ಜವಾಬ್ದಾರಿಯನ್ನು ನೀಡಲಾಗುತ್ತದೆ ಅವರು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಡಿಯೂರಪ್ಪ ಆಗ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗಾಗಿ ಒಬ್ಬರೇ ಇದ್ದರು, ಆದರೆ ಈ ವೇಳೆ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದೀರಿ, ಅವರನ್ನು ಸಚಿವರನ್ನಾಗಿ ಮಾಡಿ, ಜವಾಬ್ದಾರಿ ನೀಡಿ, ಇಲ್ಲದಿದ್ದ ಜನ ಏನನ್ನುತ್ತಾರೆ? ಎಂದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಈ ಬಗ್ಗ ಪ್ರತಿಪಕ್ಷದವರು ಯೋಚಿಸದಿದ್ದರೆ ಸಾಕು, ಯಾರೂ ಏನೂ ಯೋಚಿಸುವುದಿಲ್ಲ ಎಂದರು.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಂದು ಪ್ರತ್ಯೇಕವಾಗಿ ನವದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ, ಹಾಲಿ ಸಚಿವರಿಗೆ ಖಾತೆ ಹಂಚಿಕೆ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ.












Click it and Unblock the Notifications