Karnataka Budget 2024: ವಕ್ಫ್ ಆಸ್ತಿ ರಕ್ಷಣೆ, ಅಲ್ಪಸಂಖ್ಯಾತರಿಗೆ ಭಾರೀ ಅನುದಾನ ಘೋಷಣೆ: ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 16: ವಕ್ಫ್ ಆಸ್ತಿಗಳ ಸಂರಕ್ಷಣೆಗೆ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ 35 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದ ಬೆನ್ನಲ್ಲೆ ಕರ್ನಾಟಕ ಬಜೆಟ್ನಲ್ಲಿ ಭಾರೀ ಅನುದಾನ ಘೋಷಣೆ ಮಾಡುವ ಮೂಲಕ ಮುಸ್ಲಿಮರಿಗೆ ಸಿಹಿ ಸುದ್ದಿ ನೀಡಿದೆ.
ವಕ್ಫ್ ಆಸ್ತಿಗಳ ಅಭಿವೃದ್ಧಿ ಮತ್ತು ರಕ್ಷಣೆಗಾಗಿ ಅಂದರೆ, ತಂತಿ ಬೇಲಿ ಹಾಗೂ ಕಾಂಪೌಂಡ್ ನಿರ್ಮಿಸುವುದು ಸೇರಿದಂತೆ ರಕ್ಷಣೆ ಒದಗಿಸಲು ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಒದಗಿಸುವುದಾಗಿ ಘೋಷಿಸಿದ್ದಾರೆ.

ಇದಷ್ಟೇ ಅಲ್ಲದೇ ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ಜತೆಗೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಬಜೆಟ್ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಆದೇಶ ಹಿಂಪಡೆಯಲು ಹಿಂದು ಸಮಿತಿ ಆಗ್ರಹ
ಇತ್ತೀಚೆಗಷ್ಟೇ ವಕ್ಫ್ ಆಸ್ತಿಗಳ ರಕ್ಷಣೆಗೆ ಬಿಡುಗಡೆ ಮಾಡಿದ ಅನುದಾನ ಆದೇಶ ಹಿಂಪಡೆಯುವಂತೆ ಹಿಂದು ಜನಜಾಗೃತಿ ಸಮಿತಿಯ ಮುಖ್ಯಸ್ಥರು ಆಗ್ರಹಿಸಿದ್ದರು. ಸರ್ಕಾರದ ನಿರ್ಧಾರವನ್ನು ಸಮಿತಿ ವಕ್ತಾರ ಮೋಹನ್ ಗೌಡ ಅವರು ಖಂಡಿಸಿದ್ದರು. ಅಲ್ಪಸಂಖ್ಯಾತರ ಓಲೈಕೆಗಾಗಿ ಬಜೆಟ್ ಹಣ ಖಾಲಿ ಮಾಡುವ ಪ್ರಯತ್ನ ಇದಾಗಿದೆ ಎಂದು ಅವರು ಆರೋಪಿಸಿದ್ದರು.
ಈ ಹಿಂದೆ ಮುಖ್ಯಮಂತ್ರಿಗಳು 10,000 ಕೋಟಿ ರೂಪಾಯಿ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತೇವೆ ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ರೋಶಗಳು, ಖಂಡನೆಗಳು ವ್ಯಕ್ತವಾದ ಬೆನ್ನಲ್ಲೆ ಮತ್ತೆ 100 ಅನುದಾನ ಘೋಷಣೆ ಮಾಡಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications