ಬಾದಾಮಿ ಚಾಲುಕ್ಯ ಉತ್ಸವಕ್ಕೆ ₹1 ಕೋಟಿ ಹೆಚ್ಚುವರಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ
ಬಾಗಲಕೋಟೆ: ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪ, ಸಂಸ್ಕೃತಿ ಹಾಗೂ ಆಡಳಿತ ವೈಖರಿಯ ಮಹತ್ವವನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಚಾಲುಕ್ಯ ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ₹1 ಕೋಟಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬಾದಾಮಿಯ ಇಮ್ಮಡಿ ಪುಲಿಕೇಶಿ ವೇದಿಕೆಯಲ್ಲಿ ಬುಧವಾರ ಸಂಜೆ ನಡೆದ ಚಾಲುಕ್ಯ ಉತ್ಸವ-2026ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಬಜೆಟ್ನಲ್ಲಿ ಘೋಷಿಸಲಾದ ₹3 ಕೋಟಿ ಅನುದಾನಕ್ಕೆ ಹೆಚ್ಚುವರಿಯಾಗಿ ₹1 ಕೋಟಿ ನೀಡಲಾಗುವುದು ಎಂದು ತಿಳಿಸಿದರು. ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವವನ್ನು ಅರಿಯುವ ಹಾಗೂ ಬಾದಾಮಿ, ಐಹೊಳೆ, ಪಟ್ಟದಕಲ್ಲುಗಳ ವೈಭವವನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶ ಈ ಉತ್ಸವಕ್ಕಿದೆ. ದೇಶ-ವಿದೇಶಗಳಿಂದ ಪ್ರವಾಸಿಗರು ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಚಾಲುಕ್ಯರ ಆಡಳಿತದಂತೆ ನಮ್ಮ ಸರ್ಕಾರವೂ ಸರ್ವಧರ್ಮ ಸಮನ್ವಯತೆಯನ್ನು ಪಾಲಿಸುತ್ತದೆ" ಎಂದರು.

ಬಾದಾಮಿಗೆ ₹2,000 ಕೋಟಿ ಅನುದಾನ
ತಮ್ಮ ಆಡಳಿತಾವಧಿಯಲ್ಲಿ ಬಾದಾಮಿ ಕ್ಷೇತ್ರಕ್ಕೆ ನೀಡಿರುವ ಅನುದಾನ ಕುರಿತು ವಿವರಿಸಿದ ಸಿದ್ದರಾಮಯ್ಯ, "ನಾನು ಮುಖ್ಯಮಂತ್ರಿ ಆಗಿರುವ ಈ ಎರಡು ವರ್ಷಗಳಲ್ಲಿ ಬಾದಾಮಿ ಕ್ಷೇತ್ರಕ್ಕೆ ಸುಮಾರು ₹2,000 ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ ₹1,400 ಕೋಟಿ ಏತನೀರಾವರಿ ಯೋಜನೆ, ₹400 ಕೋಟಿ ಕುಡಿಯುವ ನೀರಿನ ಯೋಜನೆ, ₹50 ಕೋಟಿ ರಸ್ತೆ ಅಭಿವೃದ್ಧಿ ಯೋಜನೆ ಸೇರಿದಂತೆ ಹಲವು ಮಹತ್ವದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ" ಎಂದು ಹೇಳಿದರು.
ತಮ್ಮ ರಾಜಕೀಯ ಜೀವನದ ಸ್ಮರಣೆಯನ್ನು ಹಂಚಿಕೊಂಡ ಸಿಎಂ, "ನಾನು ಐದು ವರ್ಷಗಳ ಕಾಲ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೆ. 2018ರಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾಗ, ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ, ಬಾದಾಮಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದರು. ಇಲ್ಲಿನ ಜನರ ದೊಡ್ಡ ಮನಸ್ಸಿನಿಂದಲೇ ನಾನು ಮತ್ತೆ ವಿಧಾನಸಭೆಗೆ ಪ್ರವೇಶಿಸಿ, ಇಂದು ವರುಣಾ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಬಾದಾಮಿ ಜನರ ಉಪಕಾರವನ್ನು ನಾನು ಎಂದಿಗೂ ಮರೆಯುವುದಿಲ್ಲ" ಎಂದು ಭಾವುಕವಾಗಿ ಹೇಳಿದರು.
ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆ
ಬಾದಾಮಿ ಶಾಸಕನಾಗಿದ್ದ ಸಂದರ್ಭದಲ್ಲೇ ಚಾಲುಕ್ಯ ಉತ್ಸವ ಹಾಗೂ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆ ಸಾಧ್ಯವಾಗದಿರುವುದು ನೋವಿನ ಸಂಗತಿ ಎಂದು ಹೇಳಿದ ಸಿಎಂ, "ಇಂದು ಭೀಮಸೇನಾ ಚಿಮ್ಮನಕಟ್ಟಿ ಅವರ ಒತ್ತಾಸೆಯಿಂದ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಪ್ರತಿಮೆ ಅನಾವರಣಕ್ಕೂ ಸರ್ಕಾರ ಸಂಪೂರ್ಣ ನೆರವು ನೀಡಲಿದೆ" ಎಂದು ಭರವಸೆ ನೀಡಿದರು. ಚಾಲುಕ್ಯ ಉತ್ಸವ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದಲೂ ನೆರವು ನೀಡುವುದಾಗಿ ಸಂಸದರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಈ ಬಗ್ಗೆ ನಾಳೆಯೇ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ನೀಡಲಾಗುವುದು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಅನುದಾನವನ್ನು ಪಡೆಯಲು ಬಿಜೆಪಿ ಸಂಸದರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications