Get Updates
Get notified of breaking news, exclusive insights, and must-see stories!

ಭ್ರಷ್ಟಾಚಾರ ಆರೋಪ ಹೊತ್ತವರಿಗೆ ಪಟ್ಟ: ನಂಬಿಕೆಗೆ ಚ್ಯುತಿ ತಂದರೇ ಸಿಎಂ ಸಿದ್ದರಾಮಯ್ಯ?: ಆಕ್ರೋಶ

ಬೆಂಗಳೂರು, ನವೆಂಬರ್ 28: ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದನ್ನು ಆಮ್‌ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನತೆ ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಬದಲಾವಣೆ ಬಯಸಿದ್ದರು. ಆದರೆ ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಎಂಬ ವಿವಾದಾತ್ಮಕ ವ್ಯಕ್ತಿಯನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯನನ್ನಾಗಿ ನೇಮಕ ಮಾಡಲಾಗಿದೆ.

 CM Siddaramaiah appoint Sham Bhat as Member of Human Rights who face Corruption allegations

ಈ ಮೂಲಕ ರಾಜ್ಯದ ಜನತೆಯ ನಂಬಿಕೆಗೆ ಚ್ಯುತಿ ತರುವಂತಹ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರಂಭಿಸಿದೆ ಎಂದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಮಂಗಳವಾರ ಬೆಂಗಳೂರಿನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಬಿಡಿಎ ನಲ್ಲಿ ನಕ್ಷೆ ತಿದ್ದುಪಡಿ: ಭ್ರಷ್ಟಾಚಾರ

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಈ ಹಿಂದೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ) ಆಯುಕ್ತರಾಗಿದ್ದ ಶ್ಯಾಮ್ ಭಟ್‌ ವಿರುದ್ಧ, ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಮಾಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

ಬಿಡಿಎ ನಲ್ಲಿ ಸಾವಿರಾರು ಕೋಟಿಗಳ ಹಗರಣವನ್ನು ಮಾಡಿರುವ ಕುಖ್ಯಾತಿ ಇವರ ಮೇಲಿದೆ. ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯನ್ನು ಸಹ ತನ್ನ ಆಡುಂಬೋಲವನ್ನಾಗಿಸಿಕೊಂಡಿದ್ದರು. ಮನಸೋ ಇಚ್ಛೆ ಬ್ರಷ್ಟಾಚಾರವೆಸಗಿದ ಅನೇಕ ಪ್ರಕರಣಗಳನ್ನು ಆ ಸಂದರ್ಭದಲ್ಲಿ ಕಾಣಬಹುದಾಗಿತ್ತು. ಇಂತಹ ಅತಿ ಹೀನ ಕಳಂಕಿತ ಹಿನ್ನೆಲೆಯುಳ್ಳ ಅಧಿಕಾರಿಗೆ ಈಗ ಸರ್ಕಾರ ಹೊಸ ಜವಾಬ್ದಾರಿ ನೀಡಿರುವುದು ಸ್ವಾಗತಾರ್ಹವಲ್ಲ ಎಂದು ಸರ್ಕಾರ ನಡೆ, ನಿರ್ಧಾರವನ್ನು ಅವರ ಖಂಡಿಸಿದರು.

 CM Siddaramaiah appoint Sham Bhat as Member of Human Rights who face Corruption allegations

KPSC ಅಧ್ಯಕ್ಷರನ್ನಾಗಿ ನೇಮಕ:ಭಾರೀ ಭ್ರಷ್ಟಾಚಾರ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಅವರ ಅಧಿಕಾರವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಕೆಪಿಎಸ್‌ಸಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದ ಆರೋಪಗಳು ಕೇಳಿ ಬಂದಿತ್ತು. ಇದೀಗ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವಾಗ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಶ್ಯಾಮ್ ಭಟ್‌ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ ಎಂದು ವಿವರಿಸಿದರು.

ಇವರು ಮಾನವ ಹಕ್ಕು ರಕ್ಷಿಸುತ್ತಾರಾ?

ರಾಜ್ಯದ ಜನತೆ ಯಾವ ಮಾನವ ಹಕ್ಕುಗಳನ್ನು ಈ ವ್ಯಕ್ತಿ ರಕ್ಷಿಸುತ್ತಾನೆಂಬುದೇ ಯಕ್ಷ ಪ್ರಶ್ನೆ? ಆಗಿದೆ. ಈತ ಮಾನವ ಹಕ್ಕು ಆಯೋಗವನ್ನು ಸಹ ತನ್ನ ಭ್ರಷ್ಟಾಚಾರಗಳಿಗೆ ಉಪಯೋಗಿಸಿಕೊಳ್ಳಲು ಹೇಸದ ವ್ಯಕ್ತಿ ಎಂದು ಮುಖ್ಯಮಂತ್ರಿ ಚಂದ್ರು ಅವರು ಗಂಭೀರ ಆರೋಪ ಮಾಡಿದರು.

ಈ ಮೂಲಕ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಯಾವ ಸಂದೇಶವನ್ನು ನೀಡಲು ಹೊರಟಿದ್ದಾರೆ? ಸಿದ್ದರಾಮಯ್ಯನವರು ಭ್ರಷ್ಟಾಚಾರದ ಪರವಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+