ಒಳಮೀಸಲಾತಿ ವರ್ಗೀಕರಣಕ್ಕೆ ಹೊಸ ಸಮೀಕ್ಷೆ: ನಾಗಮೋಹನ್ ದಾಸ್ ಸಮಿತಿಗೆ ಮತ್ತೆ ಜವಾಬ್ದಾರಿ
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಅಂಗೀಕರಿಸಿದೆ. ಈ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಒಳಮೀಸಲಾತಿ ವರ್ಗೀಕರಣಕ್ಕೆ ಹೊಸ ಸಮೀಕ್ಷೆ ನಡೆಸಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.
ನಾಗಮೋಹನ್ ದಾಸ್ ಆಯೋಗವು ಈ ಸಂಬಂಧ ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ. ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು ಎಂದು ಹೇಳಿದೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 40 ದಿನದೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತ ಎಂದು ಆಯೋಗವು ಅಭಿಪ್ರಾಯಪಟ್ಟಿದೆ. ಈ ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆಯೇ ಈ ವರದಿಯಲ್ಲಿ ತಿಳಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಲಾಗುವುದು. ಬಳಿಲ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇರೆಗೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ ಎಂದು ವಿವರಿಸಿದ್ದಾರೆ.
ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಈಗಾಗಲೇ ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರವಾಗಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಜವಾಬ್ದಾರಿಯನ್ನು ಕೂಡ ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಮತ್ತೆ ಮುಂದಿನ ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಠ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸಂಪುಟ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆಯೂ ಸಿಎಂ ಸಿದ್ದರಾಮಯ್ಯ ಅವರು ಸುದೀರ್ಘ ಸಮಾಲೋಚನೆ ನಡೆಸಿದರು. ಹೆಚ್ಚಿನ ಕಾಲಾವಕಾಶ ತೆಗೆದುಕೊಳ್ಳದೆ ಒಳಮೀಸಲಾತಿ ಅನುಷ್ಠಾನ ಅತಿ ಶೀಘ್ರದಲ್ಲಿ ಆಗಲಿದ್ದು, ಕೊಟ್ಟ ಮಾತಿನಂತೆ ನಡೆಯುತ್ತೇವೆ. ನಮ್ಮ ಸರ್ಕಾರ ಒಳಮೀಸಲಾತಿ ಅನುಷ್ಠಾನದಲ್ಲಿ ಬದ್ಧವಾಗಿದೆ ಎಂದಿದ್ದಾರೆ.
ಸಾಮಾಜಿಕ ನ್ಯಾಯದ ಅನುಷ್ಠಾನದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿಯ ಪರವಾಗಿ ನಿರ್ಣಯ ಕೈಗೊಂಡಿದ್ದೇವೆ. ಸಾಮಾಜಿಕ ನ್ಯಾಯವು ಹಾಗೆಯೇ ಬರುವುದಿಲ್ಲ, ಇಂತಹ ನಿರ್ಣಯಗಳನ್ನು ಕೈಗೊಳ್ಳಬೇಕು. ಅಲ್ಲದೆ ಒಳಮೀಸಲಾತಿ ವಿಷಯವು ಬಹಳ ಸೂಕ್ಷ್ಮವಾಗಿದ್ದು, ಈ ವರದಿಯ ಮೇಲೆ ಕೋರ್ಟ್ಗೆ ಹೋಗಬಾರದು ಎಂಬ ಉದ್ದೇಶದಿಂದ ನಾವು ಸರಿಯಾದ ಮಾಹಿತಿ ಸಂಗ್ರಹಿಸಿ ನಂತರ ಅನುಷ್ಠಾನ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications