ನಿರ್ಬಂಧ ಹೇರಲು ಹೊರಟಿರುವ 'ಅದ್ದೂರಿ ಮದುವೆ'ಯಲ್ಲಿ ಸಿದ್ದರಾಮಯ್ಯ
ಅದ್ದೂರಿ ಮದುವೆ ನಿಷೇಧಿಸಿ ಸದನದಲ್ಲಿ ಖಾಸಗಿ ವಿಧೇಯಕ ಮಂಡನೆಯಾಗಿರುವ ಮಧ್ಯೆ, ಚಳ್ಳಕೆರೆಯಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.
ಅದ್ದೂರಿ ಮದುವೆಯಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರು ಸಾಲಗಾರರಾಗುತ್ತಿದ್ದಾರೆ. ತೋರಿಕೆಗಾಗಿ ಅಡುಗೆ ಮಾಡಿಸಿ ಬೀದಿಗೆ ಚೆಲ್ಲುತ್ತಾರೆ, ಈ ರೀತಿಯ ಹಲವು ಕಾರಣಗಳನ್ನು ನೀಡಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ವಿಧೇಯಕ ಮಂಡಿಸಿದ್ದರು. (ಅದ್ದೂರಿ ಮದುವೆಗೆ ಬ್ರೇಕ್: ಸರಕಾರಕ್ಕೆ 6 ಪ್ರಶ್ನೆಗಳು)
ಜೊತೆಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಂದ ಈ ಖಾಸಗಿ ಮಂಡನೆ ಚರ್ಚೆಗೆ ಸಮಾಯಾವಕಾಶ ಸಿಗುವ ಭರವಸೆಯೂ ಸಿಕ್ಕಿದೆ. ಈ ಮಧ್ಯೆ, ಸೋಮವಾರ (ನ 30) ಸ್ವಪಕ್ಷೀಯ ಶಾಸಕರ ಮಗಳ ಮದುವೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ.
ಸಿದ್ದರಾಮಯ್ಯ ಜೊತೆ ಪ್ರಮುಖ ಕ್ಯಾಬಿನೆಟ್ ಸಚಿವರು ಮದುವೆಯಲ್ಲಿ ಭಾಗವಹಿಸಿದ್ದು, ಸಿದ್ದರಾಮಯ್ಯ ಸರಕಾರ ನಿಷೇಧಿಸಲು ಹೊರಟಿರುವ ಅದ್ದೂರಿ ಮದುವೆ ಕಾನೂನು ಎಷ್ಟರ ಮಟ್ಟಿಗೆ ಪ್ರಯೋಜನಕ್ಕೆ ಬರಬಹುದು ಎನ್ನುವುದರ ಬಗ್ಗೆ ಅನುಮಾನ ಹುಟ್ಟಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರ ಪ್ರತಿನಿಧಿಸುವ ಹಿರಿಯ ಕಾಂಗ್ರೆಸ್ ಶಾಸಕ ಡಿ ಸುಧಾಕರ್ ಅವರ ಪುತ್ರಿಯ ಅದ್ದೂರಿ ಮದುವೆ/ಆರತಕ್ಷತೆ ಚಳ್ಳಕೆರೆಯಲ್ಲಿ ಸೋಮವಾರ ವೈಭವೋಪಿತವಾಗಿ ನಡೆದಿದೆ.
ಮದುವೆಗೆ ಪಾಲ್ಗೊಂಡಿದ್ದನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ, ಮುಂದೆ ಓದಿ..

ವೇದಿಕೆಗೆ ಕೋಟಿ ಕೋಟಿ
ಚಳ್ಳಕೆರೆಯ ಇತಿಹಾಸದಲ್ಲೇ ಅದ್ದೂರಿ ಮದುವೆಯೆಂದೇ ಹೇಳಲಾಗುತ್ತಿರುವ ಸುಧಾಕರ್ ಪುತ್ರಿಯ ಮದುವೆಯ ವೇದಿಕೆ, ಆಸನ ಮುಂತಾದ ವ್ಯವಸ್ಥೆಗೆ ಮೂರು ಕೋಟಿ ರೂಪಾಯಿ ವೆಚ್ಚವಾಗಿದೆ ಎನ್ನಲಾಗುತ್ತಿದೆ. ಅರಮನೆ ಮಾದರಿಯಲ್ಲಿ, ಬಂಗಾರದ ಬಣ್ಣದಲ್ಲಿ ಮೂರು ಎಕರೆ ಪ್ರದೇಶದಲ್ಲಿ ಇದನ್ನು ನಿರ್ಮಿಸಲಾಗಿತ್ತು.

ಏಳರಿಂದ ಎಂಟು ಕೋಟಿ
ಚಳ್ಳಕೆರೆಯ ಎಚ್ಪಿಪಿಸಿ ಕಾಲೇಜು ಮೈದಾನದಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಸುಧಾಕರ್ ಪುತ್ರಿ ಸ್ಪೂರ್ತಿ ಮತ್ತು ತುಮಕೂರಿನ ನಿತೀಶ್ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ. ಅದ್ದೂರಿ ಮದುವೆ ಸಭಾಂಗಣ ಮಾತ್ರವಲ್ಲದೇ, ಚಳ್ಳಕೆರೆಯ ಪ್ರಮುಖ ಬೀದಿಗಳನ್ನೂ ವಿದ್ಯುತ್ ದೀಪದಿಂದ ಅಲಂಕರಿಸಲಾಗಿತ್ತು.

ಸಿಎಂ ಸಮರ್ಥನೆ
ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಿದ್ದರಾಮಯ್ಯ, ಅದ್ಧೂರಿ ಮದುವೆ ನಿಗ್ರಹಕ್ಕೆ ಖಾಸಗಿ ವಿಧೇಯಕ ಮಂಡಿಸಲಾಗಿದೆ. ಅದಿನ್ನೂ ಚರ್ಚೆಗೆ ಬಂದಿಲ್ಲ ಎಂದು ಅದ್ಧೂರಿ ಮದುವೆಯಲ್ಲಿ ತಾವು ಪಾಲ್ಗೊಂಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ನಾನೂ ಸರಳ ಮದುವೆ ಪರ
ಮಗಳ ಅದ್ದೂರಿ ಮದುವೆ ನಡೆಸಿದ ಸುಧಾಕರ್, ನಾನೂ ಕೂಡಾ ಸರಳ ಮದುವೆಯ ಪರ. ಆದರೆ ಊರಿನ ಜನರ ಒತ್ತಾಯದಿಂದಾಗಿ ಅದ್ದೂರಿ ಮದುವೆ ನಡೆಸಬೇಕಾಯಿತು ಎಂದು ಹೇಳಿದ್ದಾರೆ.

ಅದ್ದೂರಿ ಮದುವೆ
ಮುನ್ನೂರು ಜನರಿಗಿಂತ ಹೆಚ್ಚಿನ ಜನರನ್ನು ಮದುವೆಗೆ ಆಮಂತ್ರಿಸಿದರೆ ತೆರಿಗೆ ವಿಧಿಸುವ ಬಗ್ಗೆ, ಕಲ್ಯಾಣ ಮಂಟಪಗಳ ಬಾಡಿಗೆಗಳನ್ನೂ ನಿಯಂತ್ರಿಸುವ ಬಗ್ಗೆ ರಮೇಶ್ ಕುಮಾರ್ ಮಂಡಿಸಿದ್ದ ಖಾಸಗಿ ಮಸೂದೆಯಲ್ಲಿ ಉಲ್ಲೇಖವಾಗಿದೆ.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Monalisa: ಕುಂಭಮೇಳ ವೈರಲ್ ಸುಂದರಿ ಮೊನಾಲಿಸಾ ದಂಪತಿಗೆ ಬಿಗ್ ರಿಲೀಫ್: ಬಂಧನಕ್ಕೆ ತಡೆ ನೀಡಿದ ಕೇರಳ ಹೈಕೋರ್ಟ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Mrunal Thakur: ತೆಲುಗು ಹುಡುಗನನ್ನೇ ಮದುವೆಯಾಗಿ ಇಲ್ಲೇ ಸೆಟಲ್ ಆಗಿ: ನಟಿ ಮೃಣಾಲ್ ಠಾಕೂರ್ಗೆ ಅಲ್ಲು ಅರವಿಂದ್ ಸಲಹೆ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications