ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​​ ನೀಡಲು ನಿರ್ಧಾರ: ಸಿದ್ದರಾಮಯ್ಯ

ದಾವಣಗೆರೆ, ಫೆಬ್ರವರಿ 02: ರಾಜ್ಯದ ಎಲ್ಲಾ ಪತ್ರಕರ್ತರಿಗೆ ಮುಂದಿನ ಬಜೆಟ್​ನಲ್ಲೇ ಉಚಿತ ಬಸ್​ ಪಾಸ್​​ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಶನಿವಾರ ದಾವಣಗೆರೆಯಲ್ಲಿ ರಾಜ್ಯ ಮಟ್ಟದ 37 ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾವಿರುತ್ತೇವೆ. ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ, ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.

CM Siddaramaiah Decision To Give Free Bus Pass To All Journalists Of The State

ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ , ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು.

CM Siddaramaiah Decision To Give Free Bus Pass To All Journalists Of The State

ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ. ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಆಶಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+