ಅಶೋಕ್ ಖೇಣಿ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ
ನವ ದೆಹಲಿ, ಮಾರ್ಚ್ 06: ನೈಸ್ ಸಂಸ್ಥೆ ಮಾಲೀಕ, ಬೀದರ್ ದಕ್ಷಿಣ ಕ್ಷೇತ್ರ ಶಾಸಕ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆಗೊಳಿಸಿಕೊಂಡಿರುವುದಕ್ಕೆ ಕಾಂಗ್ರೆಸ್ನಲ್ಲೇ ಅಪಸ್ವರ ಕೇಳಿಬಂದಿದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಶೋಕ್ ಖೇಣಿ ಬೆನ್ನಿಗೆ ನಿಂತಿದ್ದಾರೆ.
ದಿಡೀರ್ನೆ ಇಂದು ಹೈಕಮಾಂಡ್ ಭೇಟಿಗೆ ತೆರಳಿದ ಸಿದ್ದರಾಮಯ್ಯ ಅವರು ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರೈತರಿಗೆ ಭೂಮಿ ವಿಷಯದಲ್ಲಿ ಮೋಸ ಮಾಡಿರುವ ಆರೋಪ ಹೊತ್ತಿರುವ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆಗೊಳಿಸಿಕೊಂಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಭ್ರಷ್ಟಾಚಾರದ ಆರೋಪ ಹೊತ್ತಿರುವವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು 'ಅಶೋಕ್ ಖೇಣಿ ಏನು ಯಡಿಯೂರಪ್ಪ ರೀತಿ ಜೈಲಿಗೆ ಹೋಗಿದ್ದಾರಾ?' ಎಂದು ಪ್ರಶ್ನಿಸಿದರು.

ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೇ ಜೈಲಿಗೆ ಹೋಗಿದ್ದಾರೆ, ಸಾಮಾನ್ಯ ಶಾಸಕನಿಗೂ ಮುಖ್ಯಮಂತ್ರಿ ಅಭ್ಯರ್ಥಿಗೂ ಒಂದೇ ಹೋಲಿಕೆಯಾ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯವರೇ ಭ್ರಷ್ಟರು ಎಂದ ಅವರು ಜನಾರ್ಧನ ರೆಡ್ಡಿ ಅವರಿಗಿಂತಲೂ ದೊಡ್ಡ ಭ್ರಷ್ಟ ರಾಜ್ಯದಲ್ಲಿ ಯಾರೂ ಇಲ್ಲ ಎಂದಿದ್ದಾರೆ. ಆ ಮೂಲಕ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡಿರುವುದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.
ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಹಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಖೇಣಿ ಅವರನ್ನು ಸೇರಿಸಿಕೊಳ್ಳುವುದು ಬೇಡ ಎಂದು ಪರಮೇಶ್ವರ ಅವರಿಗೆ ದೂರು ನೀಡಿದ್ದರು. ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಪುತ್ರ ಅಜಯ್ ಸಿಂಗ್ ಸಹ ಖೇಣಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದರು. ಧರಂ ಸಿಂಗ್ ಅವರ ಅಳಿಯ ಚಂದ್ರಸಿಂಗ್ ಈ ಬಾರಿಯ ಚುನಾವಣೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications