ಸಿದ್ದರಾಮಯ್ಯ ಮೇಲೆ 300 ಕೋಟಿ ರು ಭೂಹಗರಣ ಹೊರಿಸಿದ ಬಿಜೆಪಿ
ಬೆಂಗಳೂರು, ಅಕ್ಟೋಬರ್ 11 : ಬಿಜೆಪಿ ಎಂಎಲ್ಸಿ ಬಿ.ಜೆ ಪುಟ್ಟಸ್ವಾಮಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗನ ವಿರುದ್ಧ ಮಾಡಿದ ಭೂಹಗರಣ ಆರೋಪ ಠುಸ್ ಆದ ಬೆನ್ನಲ್ಲಿಯೇ ಇದೀಗ ಮತ್ತೊಂದು ಭೂಹಗರಣದ ಪ್ರಕರಣವನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ.
300 ಕೋಟಿ ರು. ಭೂಹಗರಣ ಮಾಡಿದ್ದಾರೆಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಿಸಿದ್ದಾರೆ. ಬೆಂಗಳೂರಿನ ಭೂಪಸಂದ್ರದಲ್ಲಿ ಸರ್ವೇ ನಂಬರ್ 20ರಲ್ಲಿ 6.26 ಎರಕೆಯನ್ನು ಜಮೀನನ್ನು ಸಿದ್ದರಾಮಯ್ಯ ಅವರು 2016ರ ಜೂನ್ ನಲ್ಲಿ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಹಗರಣ ಸಂಬಂಧ ಎಸಿಬಿಗೆ ದೂರು ನೀಡುವುದಾಗಿ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ನಾನು ನ್ಯಾಯಯುತವಾಗಿ ಇದ್ದೇನೆ ಎಂದೆಲ್ಲಾ ಹೇಳುತ್ತಾರೆ. ಆದರೆ, ಅವರು ಮಾಡಿರುವ ಹಗರಣ ಅವರು ಎಷ್ಟು ನ್ಯಾಯಯುತವಾಗಿದ್ದಾರೆ ಎನ್ನುವುದು ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆ ಸಮೀಪಿಸುತ್ತಿರುವ ಕಾರಣಕ್ಕೆ ನನ್ನ ಹೆಸರಿಗೆ ಕಳಂಕ ತರಲು ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಂದೆ ಅದೇ ಅವರಿಗೆ ತಿರುಗುಬಾಣವಾಗಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಮಗನ ಒಡೆತನದ ಸಂಸ್ಥೆಗೆ ಭೂಮಿ ನೀಡಿದ್ದಾರೆ ಎಂಬ ಬಿಜೆ ಪುಟ್ಟಸ್ವಾಮಿ ಅವರ ಆರೋಪವನ್ನು ತಳ್ಳಿ ಹಾಕಿದ ಸಿದ್ದರಾಮಯ್ಯ ಅವರು ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications