ಡಿಸಿಎಂ - ನನ್ನ ನಡುವೆ ಗೊಂದಲಕ್ಕೆ ಇದೇ ಕಾರಣ ಎಂದ ಸಿ.ಎಂ ಸಿದ್ದರಾಮಯ್ಯ!
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವು ಈ ರೀತಿ ಗೊಂದಲ ಸೃಷ್ಟಿಯಾಗುವುದಕ್ಕೆ ಕಾರಣವೇನು ಎನ್ನುವ ಬಗ್ಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನ ಮುರಿದಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸಿಎಂ ಹುದ್ದೆಯ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿತ್ತು. ಅಲ್ಲದೇ ಕೆಲವೊಂದು ಗೊಂದಲಗಳು ಸಹ ಸೃಷ್ಟಿಯಾಗಿತ್ತು. ಇದೀಗ ಸಿದ್ದರಾಮಯ್ಯ ಅವರೇ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ಜೊತೆಗಿನ ಉಪಹಾರ ಹಾಗೂ ಚರ್ಚೆಯ ನಂತರ ಕೆಲವೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ ಎಂದು ಅವರು ಹೇಳಿದ್ದಾರೆ.

ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್ನವರು ಸೂಚಿಸಿದ್ದಾರೆ. ಈಗಲೂ ಯಾವ ಗೊಂದಲ ಇಲ್ಲ, ನಾಳೆಯೂ ಯಾವುದೇ ಗೊಂದಲ ಇರುವುದಿಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು. ಆದರೆ, ಗೊಂದಲ ಸೃಷ್ಟಿಯಾಗಿರುವುದು ಕೆಲವು ಮಾಧ್ಯಮಗಳಿಂದ. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ನನ್ನ ಬಳಿ ತಾವು ಇಂತಹ ಕಾರಣಕ್ಕೆ ದೆಹಲಿಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.
ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಕಾರ್ಪೋರೇಷನ್, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028ರಲ್ಲಿ ಕಾಂಗ್ರೆಸ್ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ.
ಮಾಧ್ಯಮಗಳೇ ಇದಕ್ಕೆಲ್ಲಾ ಕಾರಣ ಎಂದ ಸಿದ್ದರಾಮಯ್ಯ
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಈ ವರೆಗೆ ಎದುರಿಸಿದ್ದೇವೆ, ಮುಂದೆಯೂ ಎದುರಿಸುತ್ತೇವೆ. ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ.
ಇತ್ತೀಚೆಗೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ. ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ. ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications