Karnataka Budget 2023: ದುಡ್ಡು ಹೊಡೆಯೋಕೆ ಎಲ್ಲಾ ಹಾಳು ಮಾಡಿದ್ದಾರೆ; ಬಿಜೆಪಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು, ಜುಲೈ 07: ಬಿಜೆಪಿಯವರು ಈ ಹಿಂದೆ ನೀರಾವರಿ 1.5 ಲಕ್ಷ ಕೋಟಿ ಇಡುತ್ತೇವೆ ಅಂತ ಅಂದ್ರು. ನಾಲ್ಕು ವರ್ಷದಲ್ಲಿ ಏನಾದ್ರು ಇಟ್ಟಿದ್ರಾ? ಆರ್ಥಿಕ ಶಿಸ್ತನ್ನೇ ಹಾಳು ಮಾಡಿ ಬಿಟ್ಟಿದ್ದಾರೆ. ದುಡ್ಡು ಹೊಡೆಯೋಕೆ ಎಲ್ಲ ಹಾಳು ಮಾಡಿ ಹೋಗಿ ಬಿಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು.

ಗ್ಯಾರಂಟಿ ಯೋಜನೆಗಳಿಗೆ 13,500 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹೆಚ್ಚಳ ಹಾಗೂ 8000 ಕೋಟಿ ರೂ. ಹೆಚ್ಚುವರಿ ಸಾಲದ ಮೂಲಕ ಮತ್ತು ಉಳಿದ ಸಂಪನ್ಮೂಲವನ್ನು ಯೋಜನೆಗಳ ಆದ್ಯತೆಯನ್ನು ನಿಗದಿಪಡಿಸುವ ಮೂಲಕ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್ ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ ಎಂದರು.
ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ 3 ಮಾನದಂಡಗಳನ್ನು ಪಾಲಿಸಬೇಕಿದ್ದು, ಈ ಪೈಕಿ 2023-24 ರ ಬಜೆಟ್ ನಲ್ಲಿ 2 ಮಾನದಂಡಗಳನ್ನು ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲಾಗಿದೆ ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ವಿತ್ತೀಯ ಕೊರತೆ ಶೇ.3 ರಷ್ಟಿರಬೇಕು , ಸಾಲದ ಪ್ರಮಾಣ ಜಿಡಿಪಿಯ ಶೇ.25 %ರ ಒಳಗೆ ಇರಬೇಕು. ಉಳಿತಾಯ ಬಜೆಟ್ (revenue surplus) ಇರಬೇಕು ಎನ್ನುವ ಮಾನದಂಡಗಳಿವೆ . ವಿತ್ತೀಯ ಕೊರತೆ ಶೇ. 2.6 ರಷ್ಟಿದ್ದು , ಸಾಲ ಜಿಡಿಪಿಯ ಶೇ. 22.3 % ರಷ್ಟಿದೆ. ಹೀಗೆ 2 ಮಾನದಂಡಗಳನ್ನು ಪಾಲಿಸಿ ವಿತ್ತೀಯ ಶಿಸ್ತನ್ನು ಕಾಯ್ದುಕೊಳ್ಳಲಾಗಿದೆ ಎಂದು ವಿವರಿಸಿದರು.
ಈ ಆಯವ್ಯಯಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ , ಬಂಡವಾಳ ವೆಚ್ಚ 54374 ಕೋಟಿ ರೂ.ಗಳಾಗಿದ್ದು, , 2022-23 ಹೋಲಿಸಿದರೆ ಶೇ,23 ರಷ್ಟು ರಾಜಸ್ವ ವೆಚ್ಚ ಹಾಗೂ ಶೇ.16 ರಷ್ಟು ಬಂಡವಾಳ ವೆಚ್ಚ ಹೆಚ್ಚಾಗುತ್ತದೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021-22 ರಲ್ಲಿ ವಿತ್ತೀಯ ಕೊರತೆ 14,699.14 ಕೋಟಿ ರೂ.ಗಳಷ್ಟಿತ್ತು. ನಮ್ಮ ಸರ್ಕಾರದ ರಾಜಸ್ವ ಕೊರತೆ 12,523 ಕೋಟಿ ರಷ್ಟಿದೆ , ವಿತ್ತೀಯ ಕೊರತೆ 66,646 ಕೋಟಿ ರೂ. ಇದು ಜಿಎಸ್ ಡಿಪಿಯ ಶೇ. 2.6 ರಷ್ಟಿದೆ. ರಾಜ್ಯದ ಹೊಣೆಗಾರಿಕೆ 5,71,665 ಕೋಟಿ ರೂ.ಗಳಷ್ಟಿದ್ದು, ಇದು ಜಿಎಸ್ ಡಿಪಿ ಶೇ. 22.3 ರಷ್ಟಿದೆ. 2023-24 ಕ್ಕೆ ರಾಜ್ಯವು ಪಡೆಯುವ ಸಾಲ 85818 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.
ವಾಣಿಜ್ಯ ತೆರಿಗೆ ಫೆಬ್ರವರಿ ಆಯವ್ಯಯಕ್ಕಿಂತ 4000 ಕೋಟಿ ರೂ. ಹೆಚ್ಚುವರಿ ಗುರಿ ನಿಗದಿಪಡಿಸಲಾಗಿದೆ. ಅಬಕಾರಿ ಸುಂಕ ಗುರಿ 1000 ಕೋಟಿ ರೂ. ಹೆಚ್ಚಳ ಮಾಡಿದೆ. ಇದನ್ನು ಸೇರಿದಂತೆ ತೆರಿಗೆ ಸಂಗ್ರಹದ ಒಟ್ಟಾರೆ ಗುರಿಯನ್ನು 13,500 ಕೋಟಿ ರೂ.ಗಳಷ್ಟು ಹೆಚ್ಚಳ ಮಾಡಿದೆ ಎಂದರು.
ಗಂಡಸ್ರು ಮಾತ್ರ ಕುಡಿಯೋದಾ?
ನೀವು ಮಹಿಳಾ ಪರ ಬಜೆಟ್ ಮಂಡಿಸಿ ಪುರುಷ ವಿರೋಧಿ ಆಗ್ತಿದ್ದೀರಾ. ವ್ಹಿಸ್ಕಿ ಮತ್ತು ಬಿಯರ್ ಮೇಲೆ ತೆರಿಗೆ ಹೆಚ್ಚಿಸಿದ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಹಾಸ್ಯದ ದಾಟಿಯಲ್ಲೇ ಉತ್ತರಿಸಿದ ಮುಖ್ಯಮಂತ್ರಿಗಳು ಗಂಡುಸ್ರು ಮಾತ್ರ ಕುಡಿಯೋದಾ ಎನ್ನುತ್ತಾ, ರಾಜ್ಯದ ಕಲ್ಯಾಣಕ್ಕಾಗಿ ಕುಡಿಯುವವರು ತಮ್ಮ ಪಾಲನ್ನೂ ಕೊಡಲಿ ಬಿಡಿ ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications