ಸಿದ್ದರಾಮಯ್ಯ vs ವಿಜಯೇಂದ್ರ: ಬಿಜೆಪಿಗರ ಮೇಲೆ ಐಟಿ ದಾಳಿ ಆದರೂ ಅಕ್ರಮ ಹಣ ಹೊರ ಬರುತ್ತೆ
ಬೆಂಗಳೂರು, ಡಿಸೆಂಬರ್ 11: ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಆರೋಪಿಸಿ ಐಟಿ ದಾಳಿ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಜಾರ್ಖಂಡ್ ಕಾಂಗ್ರೆಸ್ ಸಂಸದರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಈ ವೇಳೆ 225 ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ವಿಜಯೇಂದ್ರ ಪ್ರಶ್ನೆ ಮಾಡಿದ್ದರು. ಇದೀಗ ಅವರ ಮಾತಿಗೆ ತಿರುಗೇಟು ಕೊಡುವ ಮೂಲಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆ ದಾಳಿ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿಯ ನಾಯಕರ ಮೇಲೂ ಐಟಿ ದಾಳಿ ನಡೆಸಿದರೂ ಸಹಿತ ಅಪಾರ ಪ್ರಮಾಣದ ಹಣ ಸಿಗುತ್ತದೆ. ಬಿಜೆಪಿ ನಾಯಕರ ಮನೆ ಮೇಲೆ ದಾಳಿ ನಡೆದರೆ ಬೇನಾಮಿ ಹಣ ಸಿಗುತ್ತದೆ ಎನ್ನುವ ಮೂಲಕ ಬಿಜೆಪಿ ನಾಯಕರ ಮನೆಗಳಲ್ಲಿ ಅಪಾರವಾದ ಹಣ ಇದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಗುಡುಗಿದರು.
ಬೇನಾಮಿ ಹಣ ಯಾರ ಬಳಿ ದೊರೆತರೂ ಅದು ಕಾನೂನು ರೀತಿಯಲ್ಲಿ ತಪ್ಪು. ಅಂತವರು ಯಾರೆ ಆಗಿದ್ದರು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಐಟಿ ದಾಳಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?
ಜಾರ್ಖಂಡ್ ಕಾಂಗ್ರೆಸ್ ಸಂಸದರಾದ ಧೀರಜ್ ಸಾಹು ಮನೆ ಮೇಲೆ ಇತ್ತೀಚೆಗೆ ಐಟಿ ದಾಳಿ ನಡೆದಿದ್ದು, ಈ ವೇಳೆ 225 ಕೋಟಿ ರೂಪಾಯಿ ನಗದು ಪತ್ತೆಯಾಗಿತ್ತು. ಹೀಗೆ ಕಾಂಗ್ರೆಸ್ ನಾಯಕರು, ಏಜೆಂಟರ್ ಮೇಲೆ ದಾಳಿ ನಡೆದಷ್ಟು ಅಕ್ರಮ ಹಣ ಹೊರ ಬರುತ್ತದೆ ಎಂದು ವಿಜಯೇಂದ್ರ ಆರೋಪಿಸಿದ್ದರು.

ದೇಶದ ಹಣ ಮಾನವಾಗಿ ಹಂಚಿಕೆ ಆಗಿಲ್ಲ. ಮುಸ್ಲಿಂಮರಿಗೆ ರಾಷ್ಟ್ರ ಸಂಪತ್ತಿನ ಪಾಲು ಕೊಡುವುದಾಗಿ ಮಾತನಾಡಿದ್ದ, ಓಲೈಕೆ ಭಾಷಣ ಸಿಎಂ ಸಿದ್ದರಾಮಯ್ಯನವರೇ ಈ ದೇಶದ ಸಂಪತ್ತು ಯಾರ ಬಳಿ ಇದೆ? ಎಂದು ವಿಜಯೇಂದ್ರ ಪ್ರಶ್ನಿಸಿದ್ದರು. ದೇಶವನ್ನು ಲೂಟಿ ಹೊಡೆದವರು ಯಾರು. ನಿಮ್ಮ ಪ್ರಶ್ನೆಗಳಿಗೆ ಐಟಿ ಇಲಾಖೆ ದಾಳಿಯಿಂದ ಉತ್ತರ ಸಿಕ್ಕಿದೆಯೇ? ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಿಜಯೇಂದ್ರ ಆರೋಪಿಸಿದ್ದರು. ಇದೀಗ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಜಾರ್ಖಂಡ್ ನ ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಮೇಲೆ ಐಟಿ ದಾಳಿ ಆಗಿದ್ದು, ಒಟ್ಟು ಸುಮಾರು 156 ಚೀಲಗಳಲ್ಲಿ ಕಂತೆ ಕಂತೆ ನಗದು ಹಣ ಪತ್ತೆಯಾಗಿವೆ. ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನಗದು ಪತ್ತೆಯಾದ ಕೆಲವೇ ಪ್ರಕರಣಗಳಲ್ಲಿ ಇದು ಒಂದು.
ಸದ್ಯ ಈ ಐಟಿ ದಾಳಿ ಪ್ರಕರಣ ರಾಜಕೀಯ ನಾಯಕರ ಅದರಲ್ಲೂ ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications