ರಾಜ್ಯದಲ್ಲಿ ಸಚಿವ ಸಂಪುಟ ಸರ್ಜರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕೊಟ್ರು ಮಹತ್ವದ ಅಪ್ಡೇಟ್
ಬೆಂಗಳೂರು, ಡಿಸೆಂಬರ್, 04: ರಾಜ್ಯ ಸಚಿವ ಸಂಪುದಲ್ಲಿ ಮತ್ತೆ ಬದಲಾವಣೆಗಳಾಗಲಿವೆ ಎನ್ನವ ಮಾತುಗಳು ಜೋರಾಗಿ ಕೇಳಿಬಂದಿದ್ದವು. ಇದೀಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ಸಚಿವ ಸಂಪುಟ ಬಗ್ಗೆ ಯಾರು ಹೇಳುತ್ತಾರೆ ಎನ್ನುವುದು ಮುಖ್ಯವಲ್ಲ. ಹೈಕಮಾಂಡ್ ಅದಕ್ಕೆ ಸೂಚನೆ ನೀಡಬೇಕು. ಇನ್ನೂ ಹೈಕಮಾಂಡ್ ಏನು ಹೇಳಿಲ್ಲ, ನಾನು ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಡಿದ್ದರು. ಇದೇ ವೇಳೆ ಮುಡಾ ಹಗರಣದ ಬಗ್ಗೆ ಇ.ಡಿ ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳಿಗೆ ಪತ್ರ ಬಗ್ಗೆ ಪ್ರತಿಕ್ರಿಯಿಸಿ, ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದರು.

ಒಂದು ದಿನ ಮುಂಚಿತವಾಗಿ ಲೋಕಾಯುಕ್ತಕ್ಕೆ ಪತ್ರ ಬರೆದಿರುವುದರ ಉದ್ದೇಶ ಏನು? ಇ.ಡಿ ಅಧಿಕಾರಿಗಳು ದುರುದ್ದೇಶ ಪೂರಕವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಅವರಿಗೆ ತನಿಖೆ ಮಾಡುವ ಅಧಿಕಾರವೇ ಇಲ್ಲ ಎಂದು ಆಕ್ರೊಶ ಹೊರಹಾಕಿದರು.
ರಾಜ್ಯಾಪಾಲರು ತನಿಖೆ ಮಾಡಿ ಅಂತಾ ಲೋಕಾಯುಕ್ತಾಗೆ ಹೇಳಿರುವುದು. ಕೋರ್ಟ್ ಸಹ ಡಿಸೆಂಬರ್ 24ಕ್ಕೆ ತನಿಖೆ ವರದಿ ನೀಡಿ ಅಂತಾ ಹೇಳಿದ್ದಾರೆ. ಇದೀಗ ಇಡಿ ಯಾಕೆ ಲೆಟರ್ ಬರೆಯುತ್ತಾರೆ? ರಾಜಕೀಯವಾಗಿ ಇಡಿ ಈ ಕೇಸ್ ಮಾಡುತ್ತಿದೆ. ತನಿಖೆ ಮಾಡಿ ಈಗ ಯಾಕೆ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಪಿಟಿಐ ಹಾಗೂ ಮಾಧ್ಯಮಗಳಿಗೆ ರಿಲೀಜ್ ಮಾಡಿರುವುದು ಕಾನೂನು ಬಾಹಿರ ಎಂದು ವಿರೋಧ ವ್ಯಕ್ತಪಡಿಸಿದರು.
ಇನ್ನು ಡಿಸೆಂಬರ್ 5ರಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸ್ವಾಭಿಮಾನಿ ಒಕ್ಕೂಟದಲ್ಲಿ ಸಮಾವೇಶ ನಡೆಯುತ್ತಿದೆ. ಸ್ವಾಭಿಮಾನಿ ಒಕ್ಕೂಟದಿಂದ ಹೆಚ್ಚಾಗಿ ಜನರು ಕರೆದುಕೊಂಡು ಬರುತ್ತಾರೆ. ಹೆಸರು ಯಾವುದು ಬದಲಾವಣೆ ಆಗಿಲ್ಲ. ಕಾಂಗ್ರೆಸ್ ಪಕ್ಷವೂ ಸೇರಿಕೊಂಡು ಮಾಡುತ್ತಿದೆ ಎಂದು ಹೇಳಿದರು.
ಹಿಂದಿನ ಭೂಮಾಲಿಕ ದೇವರಾಜು ಕೂಡ ಮೇಲ್ಮನವಿ ಸಲ್ಲಿಸಿದ್ದಾರೆ. ದೇವರಾಜು ಪರ ವಕೀಲರು ಇಡಿ ಬರೆದಿರುವ ಪತ್ರವನ್ನು ಪ್ರಸ್ತಾಪಿಸಬಹುದು. ಆದರೆ ನಾಳೆ ವಿಚಾರಣೆ ಮುಖ್ಯವಾಗಿ ರಾಜ್ಯಪಾಲರ ಕ್ರಮವನ್ನೇ ಆಧರಿಸಿರುತ್ತದೆ. ರಾಜ್ಯಾಪಾಲರ ಅನುಮತಿ ನೀಡಿದ್ದು, ಸೂಕ್ತವೇ ಅಥವಾ ಅಲ್ಲವೇ ಎಂಬ ಬಗ್ಗೆ ವಾದ ಮಂಡನೆ ಆಗಲಿದೆ. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಏಕ ಸದಸ್ಯ ಪೀಠ ಎತ್ತಿ ಹಿಡಿದಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಕೂಡ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಮೇಲ್ಮನೆ ಸಲ್ಲಿಸಿದ್ದಾರೆ.
ಆದ್ದರಿಂದ ನಾಳಿನ ವಿಚಾರಣೆಯ ಮೇಲೆ ಅಷ್ಟೇನೂ ಪರಿಣಾಮ ಬೀರುವುದಿಲ್ಲ. ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ಆ ಪ್ರಕರಣದ ವಿಚಾರಣೆಯ ವೇಳೆ ಲೋಕಾಯುಕ್ತ ತನಿಖೆಯ ವರದಿಯನ್ನು ಸಲ್ಲಿಸಬೇಕು. ಆಗ ಇಡಿ ಬರೆದಿರುವ ಪತ್ರ ಮಹತ್ವ ಪಡೆಯುವ ಸಾಧ್ಯತೆಯಿದೆ. ಸಿಬಿಐ ತನಿಖೆಗೆ ವಹಿಸಬೇಕೆಂಬ ಪ್ರಶ್ನೆಗೆ ಇಡಿ ಬರೆದಿರುವ ಪತ್ರ ಉತ್ತರವಾಗಬಹುದು. ಆದ್ದರಿಂದ ಇಡಿ ಬರೆದಿರುವಂತಹ ಪತ್ರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications