ಮಂಡ್ಯದಿಂದ ವಿಜಯಪುರದವರೆಗೆ ನಿಮ್ಮೂರಲ್ಲೊಂದು ಸುತ್ತಾಟ
ಮಂಡ್ಯ ಜಿಲ್ಲೆಯ ಪೂರಿಗಾಲಿ ಏತ ನೀರಾವರಿ ಮತ್ತು ಹನಿ ನೀರಾವರಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿದರು.
ಮಂಡ್ಯ, ಏಪ್ರಿಲ್ 20: ಮಂಡ್ಯ ಜಿಲ್ಲೆಯ ಪೂರಿಗಾಲಿ ಏತ ನೀರಾವರಿ ಮತ್ತು ಹನಿ ನೀರಾವರಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿದರು. ಕಾವೇರಿ ನೀರಾವರಿ ನಿಗಮವು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲ್ಲಗಹಳ್ಳಿ ಬೋರೆ ಗ್ರಾಮದಲ್ಲಿ ಈ ಕಾರ್ಯಕ್ರಮನ್ನು ಆಯೋಜಿಸಿತ್ತು

ಮುಖ್ಯಮಂತ್ರಿಗಳ ಜೊತೆಯಲ್ಲಿ ಸಚಿವರುಗಳಾದ ಎಂ ಬಿ ಪಾಟೀಲ್, ಟಿ ಬಿ ಜಯಚಂದ್ರ, ಡಿ ಕೆ ಶಿವಕುಮಾರ್ ಮುಂತಾದವರು ಹಾಜರಿದ್ದರು.
ತಿಪಟೂರಿನಲ್ಲಿ ನಕಲಿ ವೈದ್ಯನಿದ್ದಾನೆ ಎಚ್ಚರ!
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಎಂಬಿಬಿಎಸ್ ಪದವಿಯನ್ನೇ ಪಡೆಯದೆ ಕ್ಲಿನಿಕ್ ತೆರೆದು ವೈದ್ಯವೃತ್ತಿ ನಡೆಸುತ್ತಿದ್ದ ನಕಲಿ ವೈದ್ಯ ಶಂಕರಯ್ಯ ಎಂಬುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಂಘಸ್ವಾಮಿ ಹೇಳಿದ್ದಾರೆ.
ನಕಲಿ ವೈದ್ಯ ಶಂಕರಯ್ಯ ತನ್ನ ಬಳಿ ಬರುವ ರೋಗಿಗಳಿಗೆ ಮನಸ್ಸಿಗೆ ಕಂಡ ಮಾತ್ರೆ ನೀಡಿ, ಇಂಜೆಕ್ಷನ್ ಕೊಟ್ಟು ಕಳಿಸುತ್ತಿದ್ದ. ಈತನ ಬಳಿ ಬರುತ್ತಿದ್ದ ರೋಗಿಗಳ ರೋಗ ಕಡಿಮೆಯಾಗುವ ಬದಲು ಹೊಸ ರೋಗವೇ ಹುಟ್ಟಿಕೊಳ್ಳುತ್ತಿತ್ತು. ಈ ಬಗ್ಗೆ ಕನ್ನಡ ವಾಹಿನಿಯೊಂದು ಮಾಡಿದ ವರದಿಯನ್ವಯ ಜಿಲ್ಲಾ ಆರೋಗ್ಯಾಧಿಕಾರಿಗಳು ನಕವಿ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ.
ಶಿವಮೊಗ್ಗದ ಮೇಳಿಗೆ ಗ್ರಾಮಕ್ಕೆ ರಾಷ್ಟ್ರೀಯ ಗೌರವ
ಅತ್ಯುತ್ತಮ ಅಭಿವೃದ್ಧಿ ಕಾರ್ಯಕ್ಕಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮಕ್ಕೆ ರಾಷ್ಟ್ರೀಯ ಗೌರವ ಗ್ರಾಮ ಪುರಸ್ಕಾರ ಪಡೆದಿದೆ. ಮಲೆನಾಡಿನ ಈ ಪುಟ್ಟ ಹಳ್ಳಿ ಈ ಗೌರವ ಪಡೆದು ಉಳಿದ ಹಳ್ಳಿಗಳಿಗೆ ಮಾದರಿಯಾಗಿದೆ.[ವಿಜಯಪುರ: ಆಸ್ತಿಗಾಗಿ ಪತ್ನಿ ಮೇಲೆ ಫೈರಿಂಗ್ ಮಾಡಿದ ಮಾಜಿ ಸೈನಿಕ]

ವಿಜಯಪುರ: ಪತ್ನಿ ಸಾವಿನಿಂದ ನೊಂದ ಪತಿ ಆತ್ಮಹತ್ಯೆ
ಪತಿಯ ಕುಡಿತದ ಚಟದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಮಾಡಿಕೊಂಡ ಪತ್ನಿ ಭೀಮವ್ವಳ ಸಾವಿನ ಸುದ್ದಿ ಕೇಳಿ, ಪತಿ ಜಗದೇವ್ (36) ಎಂಬುವವರು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಹೊಳೆಸಂಕ ಎಂಬ ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 16 ರಂದು ಭೀಮವ್ವ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದರು.[ಗರಿಷ್ಠ ತಾಪಮಾನದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಕಲಬುರಗಿ]
ಉತ್ತರ ಕನ್ನಡ: ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು
ಗೇರು ಬೀಜ ಕಾರ್ಖಾನೆಗೆ ನಿರ್ಮಾಣಕ್ಕೆ ಎನ್ ಒಸಿ ನೀಡಲು 15,000 ಲಂಚ ಕೇಳಿದ ಉತ್ತರ ಕನ್ನಡ ಜಿಲ್ಲಾ ಪರಿಸರ ಅಧಿಕಾರಿ ಸುಗಂಧ ಕುರಿ, ಜಿಲ್ಲಾ ಪರಿಸರ ಸಹಾಯಕ ಅಧಿಕಾರಿ ಕುಮಾರಸ್ವಾಮಿ, ಕಚೇರಿ ಸಹಾಯಕ ಚಂದ್ರಕಾಂತ್ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಚೇರಿಯಲ್ಲಿ ಸಹಾಯಕನ ಮೂಲಕ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಅವರು ಎಸಿಬಿ ಬಲೆಗೆ ಬಿದ್ದರು.
-
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ? -
ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಹಾಡು: ಬಿಗ್ಬಾಸ್ ಡಾಗ್ ಸತೀಶ್ ವಿರುದ್ಧ ರಜತ್ ದೂರು -
Donald Trump: ಅಮೆರಿಕ, ಇಸ್ರೇಲ್ Vs ಇರಾನ್ ಯುದ್ಧದ ಬಗ್ಗೆ ಬಿಗ್ ಅಪ್ಡೇಟ್ಸ್ ಕೊಟ್ಟ ಡೊನಾಲ್ಡ್ ಟ್ರಂಪ್, ಏನದು












Click it and Unblock the Notifications