Get Updates
Get notified of breaking news, exclusive insights, and must-see stories!

ಮನೆಗೊಂದು ಗ್ರಂಥಾಲಯ ಯೋಜನೆಗೆ ಸಿಎಂ ಚಾಲನೆ, ಇದು ಹೇಗೆ ಕಾರ್ಯನಿರ್ವಹಿಸಲಿದೆ?

ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ "ಮನೆಗೊಂದು ಗ್ರಂಥಾಲಯ" ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರವ್ಯಾಸ ಭಾರತ ಸಂಪುಟಗಳನ್ನು ಸಹ ಅವರು ಲೋಕಾರ್ಪಣೆಗೊಳಿಸಿದರು. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿಯೇ ಮನೆಗೊಂದು ಗ್ರಂಥಾಲಯ ಯೋಜನೆಯ ಮೊದಲ ಗ್ರಂಥಾಲಯವನ್ನು ಸ್ಥಾಪಿಸಲಾಗಿದೆ.

ಕೃಷ್ಣಾದಲ್ಲಿರುವ ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಗ್ರಂಥಾಲಯದ ಫಲಕವನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ಯೋಜನೆಯಡಿ ರಾಜ್ಯದಾದ್ಯಂತ ಪ್ರಸಕ್ತ ಸಮಿತಿಯ ಅವಧಿಯಲ್ಲಿ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

CM Siddaramaiah Inaugurates Library For Every Home Initiative By Kannada Book Authority

ಪುಸ್ತಕಾಭಿರುಚಿಯನ್ನು ಇಂದಿನ ಯುವಪೀಳಿಗೆಯಲ್ಲಿ ಬೆಳೆಸುವುದು ಇದರ ಮುಖ್ಯ ಉದ್ದೇಶ. ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸಾಗಿದೆ ಎಂದು ಹೇಳಿದರು. ಇನ್ನು ಈ "ಮನೆಗೊಂದು ಗ್ರಂಥಾಲಯ" ಯೋಜನೆಯ ಪ್ರಮುಖ ಅಂಶಗಳು ಹೀಗಿವೆ..

ಮನೆಗೊಂದು ಗ್ರಂಥಾಲಯ ಯೋಜನೆಯಡಿ ಮನೆಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಅಥವಾ ಕಚೇರಿಗಳಲ್ಲಿ ಗ್ರಂಥಾಲಯವನ್ನು ಸ್ಥಾಪನೆ ಮಾಡುವುದು ಮುಖ್ಯ ಉದ್ದೇಶ. ಮನೆಯ ಮಾಲೀಕರು 100 ಪುಸ್ತಕಗಳಿಂದ ಆರಂಭಿಸಿ ಗ್ರಂಥಾಲಯವನ್ನು ಸ್ಥಾಪನೆ ಮಾಡಬೇಕು. ಪುಸ್ತಕಗಳ ಖರೀದಿ ಹಾಗೂ ಅವುಗಳನ್ನು ಸುಸಜ್ಜಿತವಾಗಿ ಇಡುವ ಜವಾಬ್ದಾರಿ ಮನೆಯ ಮಾಲೀಕರದ್ದು ಎಂದು ವಿವರಿಸಿದರು.

CM Siddaramaiah Inaugurates Library For Every Home Initiative By Kannada Book Authority

ಈ ಗ್ರಂಥಾಲಯವನ್ನು ಗಣ್ಯರಿಂದ, ವಿದ್ವಾಂಸರುಗಳಿಂದ, ಕಲಾವಿದರುಗಳಿಂದ ಉದ್ಘಾಟನೆಯನ್ನು ಮಾಡಿಸುವ ಜವಾಬ್ದಾರಿ ಕನ್ನಡ ಪುಸ್ತಕ ಪ್ರಾಧಿಕಾರದದ್ದು. ಪ್ರಚಾರದ ಜವಾಬ್ದಾರಿಯನ್ನು ಪ್ರಾಧಿಕಾರವೇ ವಹಿಸಲಿದ್ದು, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಗ್ರಂಥಾಲಯ ಜಾಗೃತ ಸಮಿತಿ ರಚನೆಯನ್ನು ಮಾಡಲಾಗುತ್ತದೆ. ಗ್ರಂಥಾಲಯ ಸ್ಥಾಪಿಸಲು ಪ್ರೋತ್ಸಾಹ ನೀಡುವುದು, ಅದರ ಜೊತೆ ನಿಕಟ ಸಂಪರ್ಕ ಇಟ್ಟುಕೊಳ್ಳುವುದು ಸಮಿತಿಯ ಜವಾಬ್ದಾರಿ ಎಂದು ಹೇಳಿದರು.

ಕುಮಾರವ್ಯಾಸ ಭಾರತ ಕೃತಿಯ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ ಅವರು, ಆಡು ಭಾಷೆಯಲ್ಲಿ ಮಹಾಕಾವ್ಯ ಕಟ್ಟಿಕೊಟ್ಟ ಹಿರಿಮೆ ಗದುಗಿನ ನಾರಾಣಪ್ಪ ಅವರದ್ದು. ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ʼಕರ್ಣಾಟ ಭಾರತ ಕಥಾಮಂಜರಿ' ಕುಮಾರವ್ಯಾಸ ಭಾರತ ಎಂದೇ ಪ್ರಖ್ಯಾತವಾಗಿದೆ ಎಂದು ಕೊಂಡಾಡಿದರು.

CM Siddaramaiah Inaugurates Library For Every Home Initiative By Kannada Book Authority

ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸ ಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದೆಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು. ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸ ಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿಯನ್ನು ಪ್ರಕಟಿಸಿದೆ. ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸ ಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳಿಗೆ ಒಟ್ಟು ಬೆಲೆ 500 ರೂಪಾಯಿ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಇಲಾಖೆ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ ಹಾಗೂ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ, ಕನ್ನಡ ಸಾಹಿತ್ಯ ಅಧ್ಯಕ್ಷರಾದ ಮಹೇಶ್ ಜೋಶಿ, ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕಿರಣ್ ಸಿಂಗ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+