ಮಂಡ್ಯ: ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ 1146 ಕೋಟಿ ರೂಪಾಯಿ; 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿದ್ದರಾಮಯ್ಯ
ಮಂಡ್ಯ, ಜುಲೈ 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಪ್ರತಿಪಕ್ಷಗಳಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇನ್ನೂ ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಘೋಷಿಸಿದರು.
ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ನಾಲ್ಕು ವರ್ಷ ಅಧಿಕಾರದಲ್ಲಿದ್ದ ಪ್ರತಿಪಕ್ಷ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸವಾಲೆಸೆದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು. ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ವಿವರಿಸಿದರು. ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ಚುಗೆ ಸೂಚಿಸಿದರು.
ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸವಾಲು ಹಾಕಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳೀಗೌಡ ಸೇರಿ ಹಲವು ಪ್ರಮುಖರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಉದಯ್ ಅವರು ಅಧ್ಯಕ್ಷತೆ ವಹಿಸಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications