ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು:ಅರಿವು ಸಾಲ ಯೋಜನೆಗೆ ಹೆಚ್ಚುವರಿ ಅನುದಾನಕ್ಕೆ ಸಿಎಂ ಸೂಚನೆ
ಬೆಂಗಳೂರು, ಅಕ್ಟೋಬರ್ 10: ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.
ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.
ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ-ಪ್ರಸ್ತಾವನೆಗೆ ಸಿಎಂ ಸೂಚನೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೋಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications