ಮಾಧ್ಯಮದವರ ಮೇಲೆ ಹಲ್ಲೆ ಮಾಡಿದವರಿಗೆ ಶಿಕ್ಷೆ: ಸಿಎಂ
ಕೊಳ್ಳೇಗಾಲ, ಮಾ.16: ಟಿವಿ 9 ಸಂಸ್ಥೆ ನಡೆಸಿದ ಸ್ಟಿಂಗ್ ಅಪರೇಷನ್ ಪ್ರಕರಣದ ನಂತರ ವರದಿಗಾರರ ಮೇಲೆ ನಡೆದಿದೆ ಎನ್ನಲಾದ ಹಲ್ಲೆಗೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿ ಬಂದಿರುವುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಮೇಲೆ ಹಲ್ಲೆ ಮಾಡಿದವರಿಗೆ ಶಿಕ್ಷೆ ಖಚಿತ ಎಂದು ಭರವಸೆ ನೀಡಿದ್ದಾರೆ.
ಚಾಮರಾಜ ನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಭಾನುವಾರ ಮಾತನಾಡಿದ ಸಿದ್ದರಾಮಯ್ಯ ಅವರು, 'ಮಾಧ್ಯಮಗಳ ಮೇಲೆ ಹಲ್ಲೆ ಮಾಡುವುದು ತಪ್ಪು. ಹಲ್ಲೆ ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲೇಬೇಕು. ಮಾಧ್ಯಮಗಳು ಮುಕ್ತ, ನಿರ್ಭೀತರಾಗಿ ಕಾರ್ಯನಿರ್ವಹಿಸಬೇಕು. ಇದಕ್ಕೆ ಪೂರಕ ವಾತಾವರಣ ಸೃಷ್ಟಿಸುವುದು ನಮ್ಮ ಕರ್ತವ್ಯ ಎಂದು ಟಿವಿ 9 ವರದಿಗಾರರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕಳೆದ ಗುರುವಾರ ಸಂಜೆ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು. ಟಿವಿ 9 ಪ್ರತಿನಿಧಿ ನನ್ನ ಮಗಳಿದ್ದಂತೆ ಆಕೆ ಮೇಲೆ ಹಲ್ಲೆ ನಡೆಸಿಲ್ಲ. ನನ್ನನ್ನು ವ್ಯವಸ್ಥಿತವಾಗಿ ಮುಗಿಸಲು ಸಂಚು ರೂಪಿಸಲಾಗಿದೆ. ನನಗಾಗಿರುವ ಅನ್ಯಾಯಕ್ಕೆ ಮೊದಲು ನ್ಯಾಯ ಕೊಡಿ ಎಂದು ಡಿಕೆ ಶಿವಕುಮಾರ್ ಹೇಳಿಕೊಂಡಿದ್ದರು. [ವಿವರ ಇಲ್ಲಿ ಓದಿ]
ಇನ್ನೂ ಎಫ್ ಐಆರ್ ದಾಖಲಾಗಿಲ್ಲ: ಪ್ರಕರಣದಲ್ಲಿ ಜಾಮೀನು ಪಡೆದು ಹೊರಕ್ಕೆ ಬಂದಿರುವ ಇಬ್ಬರು ಪತ್ರಕರ್ತರಾದ ಶ್ವೇತಾ ಹಾಗೂ ಶ್ರೇಯಸ್ ಅವರು ಸುದ್ದಿಗೋಷ್ಠಿ ನಡೆಸಿ ಘಟನೆ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರು ಖುದ್ದಾಗಿ ಕೈ ಹಾಕಿ ಶ್ವೇತಾ ಅವರು ಹಾಕಿಕೊಂಡಿದ್ದ ಬಟನ್ ಕೆಮೆರಾ ಕಿತ್ತು ಹಾಕಿದರು. ನಂತರ ಅವರ ಬೆಂಬಲಿಗರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಇಬ್ಬರ ಮೇಲೆ ಹಲ್ಲೆ ನಡೆಸಿದರು. ಇಬ್ಬರ ಮುಖ ನೆನಪಿದೆ ನಿಮ್ಮ ಕಥೆ ಮುಗಿಯಿತು ಇನ್ನೂ ಅವಾಜ್ ಹಾಕಿದರು ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ, ನಮ್ಮ ಮೊಬೈಲ್, ಕೆಮೆರಾ ಎಲ್ಲಾ ಪಡೆದುಕೊಂಡಿದ್ದರೂ ಹಲ್ಲೆ ಪ್ರಕರಣಾದ ಬಗ್ಗೆ ದೂರು ಸ್ವೀಕರಿಸಲು ವಿಳಂಬ ಮಾಡಿದರು. ಎಫ್ ಐ ಆರ್ ದಾಖಲಿಸಿಲ್ಲ ಎಂದಿದ್ದಾರೆ. ವಿವರ ಮುಂದೆ ವಿಡಿಯೋದಲ್ಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications