ಕಾಂಗ್ರೆಸ್ ಶಾಸಕನಿಗೆ ಒಲಿಯಿತು ಸಚಿವ ಸ್ಥಾನ, ಸಿಎಂ ಭರವಸೆ ಕೊಟ್ಟಿದ್ದು ಯಾರಿಗೆ?
ರಾಜ್ಯದಲ್ಲಿ ಸಚಿವ ಸಂಪುಟ ಬದಲಾವಣೆ ವಿಚಾರವು ಇತ್ತೀಚೆಗೆ ದೊಡ್ಡದಾಗಿ ಸದ್ದು ಮಾಡಿ, ತಣ್ಣಗಾಗಿತ್ತು. ಹಲವು ಶಾಸಕರು ನಮಗೆ ಸಚಿವ ಸ್ಥಾನ ಬೇಕು ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಆದರೆ, ಸದ್ಯಕ್ಕೆ ಯಾವುದೇ ಸಚಿವ ಸಂಪುಟ ಬದಲಾವಣೆ ಇಲ್ಲ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಶಾಸಕರೊಬ್ಬರಿಗೆ ಸಚಿವ ಸ್ಥಾನದ ಬಗ್ಗೆ ವೇದಿಕೆಯಲ್ಲೇ ಭರವಸೆ ನೀಡಿದ್ದಾರೆ.
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ 200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ರೋಣ ಶಾಸಕರಾದ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡುವ ಸುಳಿವನ್ನು ಸಿಎಂ ಕೊಟ್ಟಿದ್ದಾರೆ.

ಶಾಸಕರಾದ ಜಿ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್ನಲ್ಲಿ ಈ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಜೊತೆಗೆ ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆಯೂ ಒತ್ತಾಯಿಸಿದ್ದಾರೆ. ಜಿ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲ ಅರ್ಹತೆಗಳಿವೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಬರೋಬ್ಬರಿ 1,20,000 ಕೋಟಿ ರೂಪಾಯಿಯನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ, ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಜನ ಜಾಗೃತರಾಗಬೇಕು. ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ ಎಂದಿದ್ದಾರೆ.
ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ. ಆದರೆ, ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ರಾಜಕಾರಣದಲ್ಲಿ ತೊಡಗಿದೆ ಎಂದು ಕಿಡಿಕಾರಿದ್ದಾರೆ.

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿ ಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಆದರೂ ಸಮಾನತೆಯ ವಿರೋಧಿಯಾಗಿದೆ ಎಂದು ದೂರಿದ್ದಾರೆ. ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶವಿರುವ ಸಿರಿಧಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೀನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿಧಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications