Get Updates
Get notified of breaking news, exclusive insights, and must-see stories!

Vande Bharat Express: ವಂದೇ ಭಾರತ್ ರೈಲು ಸೇವೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು, ಅಕ್ಟೋಬರ್ 30: ದೇಶದ ವಿವಿಧೆಡೆ ವೇಗದ ಮತ್ತು ಐಶಾರಾಮಿ ಪ್ರಯಾಣ ಸೇವೆ ನೀಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು (Vande Bharat Express) ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ ಧಾರವಾಡವರೆಗೆ ಸೇವೆ ನೀಡುತ್ತಿದೆ. ಈ ರೈಲನ್ನು ಕುಂದಾನಗರಿ ಬೆಳಗಾವಿಯವರೆಗೂ ವಿಸ್ತರಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

CM Siddaramaiah Request To Central Railway minister Vande bharat Express Train Extend to Belagavi

ಪತ್ರದಲ್ಲಿ ಸಿದ್ದರಾಮಯ್ಯ ಅವರು, 'ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿ ನಗರವರೆಗೆ ವಿಸ್ತರಿಸಲು ನಾನು ನಿಮ್ಮನ್ನು ಕೋರುತ್ತೇನೆ. ವಿಸ್ತರಣೆ ಆದಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಸಂಪರ್ಕ ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ವಿವರಿಸಿದ್ದಾರೆ.

ಪ್ರಮುಖ ತಾಣಕ್ಕೆ ರೈಲು ವಿಸ್ತರಣೆಗೆ ಕೋರಿಕೆ

ಬೆಳಗಾವಿ ಜಿಲ್ಲೆಯು ಕೈಗಾರಿಕೋದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರಿಗೆ ಪ್ರಮುಖ ತಾಣವು ಹೌದು. ರಾಜ್ಯದ ದೊಡ್ಡ ಜಿಲ್ಲೆಯಾಗಿರುವ ಈ ಬೆಳಗಾವಿಯಲ್ಲಿ ಸಕ್ಕರೆ, ಅಲ್ಯೂಮಿನಿಯಂ ಮತ್ತು ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ಪ್ರದೇಶವಾಗಿದೆ. ಬೆಳಗಾವಿಯು ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಪ್ರವಾಸಿ ತಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೂ ಮೊದಲು ಈ ಹಿಂದೆ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದರು. ಹಾಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕದ ಅವಳಿ ನಗರ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಕಾರ್ಯನಿರ್ವಹಿಸುತ್ತಿರುವ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸುವಂತೆ ಅವರು ಕೋರಿದ್ದರು.

CM Siddaramaiah Request To Central Railway minister Vande bharat Express Train Extend to Belagavi

ದಕ್ಷಿಣ-ಉತ್ತರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್

ಇದೇ ವರ್ಷ ಜೂನ್ 27ರಂದು ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗೆ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಇದು ಕರ್ನಾಟಕದ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡವರೆಗಿನ ಈ ವೇಗದ ರೈಲು ಸೇವೆಯಿಂದ ಕರ್ನಾಟಕದ ದಕ್ಷಿಣ ಮತ್ತು ಉತ್ತರಕ್ಕೆ ಕೇವಲ 6 ಗಂಟೆ 30 ನಿಮಿಷಗಳಲ್ಲಿ ಸಂಪರ್ಕ ಸಾಧಿಸಬಹುದಾಗಿದೆ.

ವಾರದಲ್ಲಿ ಮಂಗಳವಾರ ಹೊರತುಪಡಿಸಿ ಬೇರೆಲ್ಲ ಆರು ದಿನಗಳಲ್ಲಿ ಈ ವಂದೇ ಭಾರತ್ ರೈಲು ಸೇವೆ ಇರಲಿದೆ. ಬೆಳಗ್ಗೆ ಬೆಂಗಳೂರಿನಿಂದ ಹೊರಟರೆ ಮಧ್ಯಾಹ್ನ ಧಾರವಾಡದಿಂದ ಹೊರಟು ರಾತ್ರಿ ಬೆಂಗಳೂರಿಗೆ ಮರಳುತ್ತದೆ. KSR ಜಂಕ್ಷನ್‌ನಿಂದ ಯಶವಂತಪುರ ಜಂಕ್ಷನ್, ದಾವಣಗೆರೆ ಮೂಲಕ ಎಸ್‌ಎಸ್‌ಎಸ್ ಹುಬ್ಬಳ್ಳಿ ಜಂಕ್ಷನ್ ಹಾದು ಧಾರವಾಡ ತಲುಪುತ್ತದೆ. ಈ ಮೂಲಕ ಒಟ್ಟು 490 ಕಿಮೀ ದೂರವನ್ನು ರೈಲು ಕೇವಲ 6 ಗಂಟೆ 30 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ತಲುಪುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+