ಗೃಹಲಕ್ಷ್ಮಿ ಹಣ ಬರುತ್ತೆ ಎಂದು ಜೀವ ಬಿಟ್ಟ ಮಗ: ತಾಯಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಳಗಾವಿ ಜಿಲ್ಲೆಯ ಸವದತ್ತಿಯ ಮರಕುಂಬಿ ಗ್ರಾಮದಲ್ಲಿ ಅನಾರೋಗ್ಯದಿಂದ ವಿಶ್ವನಾಥ ಗುರಕ್ಕನವರ (34) ಸಾವನ್ನಪ್ಪಿದ್ದು, ಸಾಯುವ ಮುನ್ನ ತಾಯಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಚಿಂತೆ ಮಾಡಬೇಡ ಎಂದು ಹೇಳಿದ್ದ. ಮಗನ ಚಿತೆಗೆ ಅಗ್ನಿ ಸ್ಪರ್ಶ ಮಾಡುವಾಗ ಮಗ ಹೇಳಿದ್ದ ಮಾತುಗಳನ್ನು ತಾಯಿ ನೀಲವ್ವ ನೆನಪು ಮಾಡಿಕೊಂಡಿದ್ದರು.
ಮಗನ ಸಾವಿನ ನೋವಿನ ನಡುವೆಯೂ ತಾಯಿ ನೀಲವ್ವ ಆಡಿದ್ದ ಮಾತುಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲ್ ಆಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘಟನೆಯನ್ನು ಗಮನಿಸಿ, ತಾಯಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದರು. ಒಂದೇ ಗಂಟೆಯಲ್ಲಿ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆ ಹಣವನ್ನು ತಾಯಿ ಖಾತೆಗೆ ವರ್ಗಾಯಿಸಲಾಗಿತ್ತು.

ಈಗ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಮಗನ ಆತ್ಮಕ್ಕೆ ಶಾಂತಿ ಕೋರಿರುವ ಅವರು, ಗೃಹಲಕ್ಷ್ಮಿ ಯೋಜನೆಯನ್ನು ಇಂತಹವರಿಗಾಗಿ ರೂಪಿಸಿದ್ದೇವೆ ಎಂದು ಟೀಕಾಕಾರರಿಗೆ ಉತ್ತರ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
ಅನಾರೋಗ್ಯದಿಂದ ಅಕಾಲಿಕ ಮರಣಕ್ಕೆ ತುತ್ತಾದ ಈ ಬಡತಾಯಿಯ ಮಗನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. 'ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ' ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು. ಯಾವ ತಾಯಿಗೂ ಎದೆಯೆತ್ತರಕ್ಕೆ ಬೆಳೆದ ಮಗನ ಚಿತೆಗೆ ಅಗ್ನಿಸ್ಪರ್ಶ ಮಾಡುವ ಸ್ಥಿತಿ ಬಾರದಿರಲಿ ಎಂದು ಮರುಕ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದಿಂದ ಅಕಾಲಿಕ ಮರಣಕ್ಕೆ ತುತ್ತಾದ ಈ ಬಡತಾಯಿಯ ಮಗನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
— Siddaramaiah (@siddaramaiah) February 19, 2024
'ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ' ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು.
ಯಾವ ತಾಯಿಗೂ ಎದೆಯೆತ್ತರಕ್ಕೆ… pic.twitter.com/vEfwMyEX0M
ನಾವು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ ದಿನದಿಂದ ಇಂದಿನವರೆಗೆ ಕೆಲವರಿಂದ ಅಪಪ್ರಚಾರ, ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಲೇ ಇದೆ, ಇದಾವುದಕ್ಕೂ ನಾನು ತಲೆಕೆಡಿಕೊಂಡಿಲ್ಲ. ಕಾರಣ ಇಂತಹ ಲಕ್ಷಾಂತರ ಬಡತಾಯಂದಿರಿಗೆ ನಮ್ಮ ಯೋಜನೆ ಮೂರು ಹೊತ್ತು ನೆಮ್ಮದಿಯ ಅನ್ನ ನೀಡಿ ಬದುಕಿಗೆ ಆಧಾರವಾಗಿದೆ ಎಂದು ಹೇಳಿದ್ದಾರೆ.
ಬಡತನ, ಹಸಿವು, ಅನಾಥಭಾವ ಅನುಭವಿಸಿದವರಿಗಷ್ಟೇ ಅದರ ನೋವು, ಹತಾಶೆ ಅರಿವಾಗಲು ಸಾಧ್ಯ. ಈ ತಾಯಿಯ ಜೊತೆ ನಮ್ಮ ಸರ್ಕಾರ ಇದೆ, ಮಗನ ಸಾವಿನ ದುಃಖದಿಂದ ಆದಷ್ಟು ಬೇಗ ಹೊರಬರಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications