ಬ್ರುಸೆಲ್ಸ್ : ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ರಾಕೇಶ್ ಗೆ ಚಿಕಿತ್ಸೆ
ಬೆಂಗಳೂರು, ಜುಲೈ 27: ಬೆಲ್ಜಿಯಂನಲ್ಲಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅಸ್ವಸ್ಥರಾಗಿರುವ ಸುದ್ದಿ ಬಂದಿದೆ. ಸಿದ್ದರಾಮಯ್ಯ ಅವರು ಈ ವಿಷಯದಲ್ಲಿ ನೆರವು ಕೋರಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿದ್ದಾರೆ. ಸದ್ಯದ ಮಾಹಿತಿಯಂತೆ ಇಬ್ಬರು ತಜ್ಞ ವೈದ್ಯರು, ರಾಕೇಶ್ ಅವರ ಪತ್ನಿ ಹಾಗೂ ಸಿಎಂ ಪತ್ನಿ ಪಾರ್ವತಮ್ಮ ಅವರು ಬೆಲ್ಜಿಯಂಗೆ ತೆರಳಿದ್ದಾರೆ.
ಇದೀಗ ಬಂದ ಸುದ್ದಿಯಂತೆ ಮಗನನ್ನು ನೋಡಲು ಬೆಲ್ಜಿಯಂಗೆ ಬುಧವಾರ ಸಂಜೆ ವೇಳೆಗೆ ಬೆಂಗಳೂರಿನಿಂದ ಸಿಎಂ ಸಿದ್ದರಾಮಯ್ಯ ಅವರು ಹೊರಡಲಿದ್ದಾರೆ. ಬ್ರೆಲ್ಜಿಯಂನ ಬ್ರುಸೆಲ್ಸ್ ನ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ರಾಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. [ರಾಕೇಶ್ ಅಸ್ವಸ್ಥ, ಕರ್ನಾಟಕ 'ಸಿಎಂ' ಟ್ವೀಟ್ ಬಗ್ಗೆ ಆಕ್ಷೇಪ]
ಸಿದ್ದರಾಮಯ್ಯ ಅವರ ಕರೆಗೆ ಓಗೊಟ್ಟಿರುವ ಸುಷ್ಮಾ ಸ್ವರಾಜ್ ಅವರು ಬೆಲ್ಜಿಯಂನಲ್ಲಿರುವ ಭಾರತೀಯ ರಾಯಭಾರಿಕ ಕಚೇರಿಗೆ ವಿಷಯ ತಿಳಿಸಿದ್ದಾರೆ.ಆದರೆ, ರಾಕೇಶ್ ಅವರು ಬೆಲ್ಜಿಯಂಗೆ ತೆರಳಿರುವ ಬಗ್ಗೆ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಯಲ್ಲಿ ಯಾವುದೇ ಮಾಹಿತಿ ಸಿಕ್ಕಿಲ್ಲ. [ಪ್ರಾಮಾಣಿಕ ರಾಜಕಾರಣಿ ಸಿಎಂ ಸಿದ್ದರಾಮಯ್ಯ ವ್ಯಕ್ತಿಚಿತ್ರ]

ಸಿದ್ದರಾಮಯ್ಯ ಅವರ ಮಗ ರಾಕೇಶ್ ಅವರು ಈ ಹಿಂದೆ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟು, ಹೀರೋ ಅಗಲು ಯತ್ನಿಸಿ ವಿಫಲರಾಗಿದ್ದರು. ನಂತರ ಅಪ್ಪ ಸಿದ್ದರಾಮಯ್ಯ ಪರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರು.
ಇದರಿಂದ ರಾಜಕೀಯ ರಂಗದ ಬಗ್ಗೆ ಅವರ ಒಲವು ಹೆಚ್ಚಾಗಿ, ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯುವ ಹುಮ್ಮುಸ್ಸು ಉಕ್ಕಿತ್ತು ಎಂದು ಆಪ್ತ ವಲಯದಿಂದ ಮಾಹಿತಿ ಬಂದಿದೆ.
I have informed Chief Minister Karnataka about this. @Sushantha1
— Sushma Swaraj (@SushmaSwaraj) July 27, 2016
ರಾಕೇಶ್ ಅವರಿಗೆ ಏನಾಗಿದೆ?: ಸದ್ಯ ಬೆಲ್ಜಿಯಂನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅಮೆರಿಕ ಅಥವಾ ಸಿಂಗಾಪುರದಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಸಿಎಂ ಕುಟುಂಬ ಮುಂದಾಗಿದೆ. ಆದರೆ, ರಾಕೇಶ್ ಅವರ ಅನಾರೋಗ್ಯ ಉಲ್ಬಣವಾಗಲು ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
@mt_shaf karnataka cm son Sri rakesh was on foreign tour and had suffered from pancreatic issues so enquired @SushmaSwaraj about same
— Sushantha (@Sushantha1) July 27, 2016
ಆದರೆ, ವಿದೇಶಾಂಗ ಸಚಿವಾಲಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ರಾಕೇಶ್ ಹಾಗೂ ನಾಲ್ವರು ಗೆಳೆಯರು ಫ್ರಾನ್ಸ್ ಹಾಗೂ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ರಾತ್ರಿ ಅವರಿಗೆ ಪ್ಯಾಂಕ್ರಿಯಾಟೈಟಿಸ್ ತೊಂದರೆ ಹೆಚ್ಚಾಗಿ ಅಸ್ವಸ್ಥರಾಗಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications