1,777 ಎಕರೆ ಭೂಸ್ವಾಧೀನ ಇಲ್ಲ ಎಂದ ಸಿ.ಎಂ ಸಿದ್ದರಾಮಯ್ಯ: ಷರತ್ತುಗಳು ಅನ್ವಯ!
ಬೆಂಗಳೂರು: ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿರುವ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ಸುತ್ತಲಿನ ಗ್ರಾಮಗಳಲ್ಲಿನ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಇದು ಸುದೀರ್ಘ ಹೋರಾಟವಾಗಿತ್ತು. ರೈತರ ಹೋರಾಟಕ್ಕೆ ಮಣಿದಿರುವ ಕರ್ನಾಟಕ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿರುವುದಾಗಿ ಹೇಳಿದೆ. ಆದರೆ, ಇದರೊಂದಿಗೆ ಷರತ್ತುಗಳು ಅನ್ವಯಿಸಲಿವೆ ಎಂದು ಹೇಳಲಾಗಿದೆ.
1,777 ಎಕರೆ ಭೂಸ್ವಾಧೀನ ಮಾಡಿಕೊಳ್ಳುವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ವಿರೋಧಿಸಿ ಬರೋಬ್ಬರಿ 1198 ದಿನಕ್ಕೂ ಹೆಚ್ಚು ಕಾಲ ಹೋರಾಟ ಮಾಡಲಾಗಿತ್ತು. 15 ದಿನಗಳ ಕಾಲ ಅವಕಾಶ ನೀಡಬೇಕು ಎಂದು ಸರ್ಕಾರ ಕೇಳಿತ್ತು. ಅದರಂತೆ ಇದು ರೈತರೊಂದಿಗೆ ಸಭೆ ನಡೆದಿದ್ದು. ಸಂಧಾನ ಸಭೆ ಫಲಪ್ರದವಾಗಿದೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಆದರೆ, ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಷರತ್ತನ್ನು ಸಹ ವಿಧಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭೂ ಸ್ವಾಧೀನ ಕೈ ಬಿಟ್ಟಿದ್ದೇವೆ. ಆದರೆ, ರೈತರು ಸ್ವಯಂ ಪ್ರೇರಿತರಾಗಿ ಭೂಮಿ ಕೊಡುವುದಕ್ಕೆ ಮುಂದೆ ಬಂದರೆ ಒಪ್ಪಂದ ಮೇಲೆ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ಅದನ್ನು ಯಾರು ತಡೆಯೋಕೆ ಆಗುವುದಿಲ್ಲ. ನಮಗೆ ಕೈಗಾರಿಕೆಯೂ ಬೆಳೆಯಬೇಕು. ಹೀಗಾಗಿ ಆ ರೈತರಿಗೆ ಸೂಕ್ತವಾದ ಪರಿಹಾರವನ್ನು ಕೊಡುತ್ತೇವೆ. ಯಾವ ರೈತರು ಕೊಡೋಕೆ ಒಪ್ಪಲ್ಲ ಅವರ ಭೂಮಿಯನ್ನು ಕೈ ಬಿಡುತ್ತೇವೆ. ಆ ಅಧಿಸೂಚನೆಯನ್ನು ರದ್ದು ಮಾಡ್ತೀವಿ. ಈ ನಿರ್ಧಾರವನ್ನು ರೈತರು ಹಾಗೂ ಹೋರಾಟಗಾರರು ಸ್ವಾಗತಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅಧಿಸೂಚನೆಯನ್ನು ರದ್ದು ಪಡಿಸಲು ತೀರ್ಮಾನಿಸಲಾಗಿದೆ. ಆದರೆ ಇದು ದೇವನಹಳ್ಳಿ ಅಧಿಸೂಚನೆಗೆ ಮಾತ್ರ ಸೀಮಿತವಾಗಿ ರದ್ದು ಆಗಲಿದೆ. ಬೆಂಗಳೂರಿಗೆ ಹತ್ತಿರವಾಗಿರೋದರಿಂದ ಹಾಗೂ ಕೃಷಿ ಭೂಮಿ ಇರುವ ಕಾರಣಕ್ಕೆ ಅಧಿಸೂಚನೆ ರದ್ದು ಮಾಡುತ್ತಿದ್ದೇವೆ. ಎಲ್ಲದಕ್ಕೂ ಈ ತೀರ್ಮಾನ ಅನ್ವಯವಾಗುವುದಿಲ್ಲ ಎಂದಿದ್ದಾರೆ. ಇನ್ನು ಭೂ ಮಾಲೀಕರು ಸ್ವಯಂ ಪ್ರೇರಣೆ ಇಂದ ಮುಂದೆ ಬಂದಲ್ಲಿ. ಹೆಚ್ಚಿನ ಪರಿಹಾರ ನೀಡಲಾಗುವುದು. ಹೆಚ್ಚಿನ ಪರಿಹಾರಕ್ಕೆ ಒಪ್ಪದ ರೈತರ ಜಮೀನು ಹಾಗೇ ಬಿಡಲಾಗುವುದು.
ಕೈಗಾರಿಕಾ ಜಮೀನು ವಶಕ್ಕೆ ನೋಟಿಫಿಕೇಷನ್ ನೀಡಲಾಗಿತ್ತು. ರೈತರು ಮತ್ತು ಸಂಘಟನೆಗಳು ಹೋರಾಟ ಮಾಡಿದ್ದರು. ವ್ಯವಸಾಯವೇ ನಮ್ಮ ಮುಖ್ಯ ಕಸುಬು. ಅದೇ ನಮ್ಮ ಆಧಾರ. ಏರ್ಪೋರ್ಟ್ ಹಾಗೂ ಬೆಂಗಳೂರಿಗೆ ಹತ್ತಿರವಿದೆ. ಗ್ರೀನ್ ಬೆಲ್ಟ್ ಇರುವುದರಿಂದ ಸ್ವಾಧೀನ ಬೇಡ ಅಂತ ವಿರೋಧ ಮಾಡಿದ್ದರು.
ಸರ್ಕಾರ ಐದಾರು ಸಭೆ ಮಾಡಿತ್ತು. ರೈತರು ಹಾಗೂ ಹೋರಾಟಗಾರರ ಅಹವಾಲು ಕೇಳಿದ್ದೆವು. ಜನಪ್ರತಿನಿಧಿಗಳ ಅಭಿಪ್ರಾಯ ಕೂಡ ಕೇಳಿದ್ದೆವು. ರೈತರ ಹೋರಾಟದಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳು ಭಾಗಿಯಾಗಿದ್ದರು. ಸರ್ಕಾರವು ಎಲ್ಲವನ್ನೂ ವಿಚಾರ ಮಾಡಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಅವರು, ಇದೊಂದು ಸಂಘಟಿತ ಹೋರಾಟವಾಗಿತ್ತು. ಎಲ್ಲರು ಒಗ್ಗಟ್ಟಿನಿಂದ ಹೋರಾಟ ಮಾಡಿದ್ವಿ. ನಮ್ಮ ಐತಿಹಾಸಿಕ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ. ಆ ಮೂಲಕ ಅಧಿಸೂಚನೆಯನ್ನು ರದ್ದು ಮಾಡಿದೆ. ಭೂಮಿಯನ್ನು ಬಲವಂತವಾಗಿ ಯಾರೇ ಕಸಿಯಲು ಬಂದರೂ ಅವರ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.
ಭೂಮಿಯನ್ನು ಬಲಾತ್ಕಾರವಾಗಿ ಕಿತ್ತುಕೊಳ್ಳೋದಕ್ಕೆ ನಮ್ಮ ವಿರೋಧ ಇದೆ. ಜನ ಚಳವಳಿ ಪರಂಪರೆಯಾಗಿದೆ. ಸಾವಿರಾರು ಮನಸ್ಸುಗಳು ಒಟ್ಟಾಗಿವೆ. ಭೂಮಿ ಉಳಿಸಿಕೊಳ್ಳಲು ಮಹಿಳೆಯರು ಮಾಡಿದ ಹೋರಾಟ. ಎಲ್ಲಾ ವಿಚಾರದಲ್ಲೂ ಇಷ್ಟೇ ಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.
-
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications