SC/ST ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು ಆ 21: ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಪಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದ್ದು, ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು.

ವಿವಿಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಇನ್ನೂ ರಾಜ್ಯದ ವಿವಿಗಳಲ್ಲಿ ಮಂಜೂರಾದ ಹುದ್ದೆಗಳ ಶೇ. 50 ಕ್ಕೂ ಹೆಚ್ಚು ಖಾಲಿ ಇದ್ದು, 1882 ಹುದ್ದೆಗಳಷ್ಟೇ ಭರ್ತಿಯಾಗಿವೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸುವ ಕಾರಣ, ಅವರಿಗೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕುಲಪತಿಗಳು ಮತ್ತು ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದರು.
ನಿವೃತ್ತಿ ವೇತನ ವಿತರಣೆಯಲ್ಲಿ ಹಳೆಯ ವಿವಿಗಳು ವಿಭಜನೆಯಾದರೂ ಹಳೆಯ ವಿವಿಗಳು ಮಾತ್ರ ನಿವೃತ್ತಿ ವೇತನ ಪಾವತಿಸುತ್ತಿದ್ದಾರೆ. ಇದರಿಂದ ಹಳೆಯ ವಿವಿಗಳ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರಸಕ್ತ ಆಯವ್ಯಯದಲ್ಲಿ ಒಟ್ಟಾರೆಯಾಗಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ 5470 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, 2474 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಗಳಿಗೆ ಸಮಸ್ಯೆ ಹೇಳಿಕೊಂಡರು.
ಆಯವ್ಯಯ ಹಂಚಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ನಾವು ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಇದಲ್ಲದೆ ಉನ್ನತ ಶಿಕ್ಷಣ ಇಲಾಖೆಯ ಆಯವ್ಯಯದಲ್ಲಿ ಶೇ. 88 ರಷ್ಟು ಅನುದಾನ ವೇತನಕ್ಕೆ ಬಳಕೆಯಾಗುತ್ತಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications