BS Yediyurappa: ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯ ರಾಜೀನಾಮೆ: ಭವಿಷ್ಯ ನುಡಿದ ಯಡಿಯೂರಪ್ಪ

ಬೆಂಗಳೂರು, ಆಗಸ್ಟ್‌ 03: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಒತ್ತಾಯಿಸಿದರು. ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಕೆಂಗೇರಿಯಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಕುಂಟುನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ಬಿ ಎಸ್‌ ಯಡಿಯೂರಪ್ಪ ಅವರು ಹೇಳಿದ್ದಾರೆ.

CM Siddaramaiah To Resign By End Of Padayatra Says BS Yediyurappa

ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ; 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು.ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ; ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ. ಬಾಬಾಸಾಹೇಬ ಡಾ.ಅಂಬೇಡ್ಕರರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಗಾರಿ ಬಾರಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟನೆ ಮಾಡಲಾಯಿತು. ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ, ಧಿಕ್ಕಾರ, ಧಿಕ್ಕಾರ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಘೋಷಣೆಗಳನ್ನು ಕೂಗಲಾಯಿತು.

ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರಕಾರವು ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ ಎಂದು ಟೀಕಿಸಿದರು.

ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ಬೆಂಬಲ, ರಕ್ಷಣೆ ಕೊಡುತ್ತಿದ್ದಾರೆ. ಭ್ರಷ್ಟಾಚಾರ ತಮ್ಮ ಬುಡಕ್ಕೆ ಬರುವ ಆತಂಕದಿಂದ ಮುಖ್ಯಮಂತ್ರಿಗಳೇ ಅಧಿಕಾರಿಗಳಿಗೆ ಬೆಂಬಲ ನೀಡುತ್ತಿದ್ದಾರೆ.

ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ನೀಡಲು ಎಟಿಎಂ ಸರಕಾರ ಬರುತ್ತಿದೆ ಎಂದು ಚುನಾವಣೆ ವೇಳೆ ಹೇಳಿದ್ದೆವು. ಮುಡಾ ಹಗರಣ ನಡೆದುದಾಗಿ ಸಿದ್ದರಾಮಯ್ಯನವರೇ ನೇಮಿಸಿದ ಮುಡಾ ಅಧ್ಯಕ್ಷ ಮರಿಗೌಡರೇ ಹೇಳಿದ್ದಾರೆ. ಪರಿ಼ಶಿಷ್ಟ ಸಮುದಾಯಕ್ಕೆ ನಿರಂತರ ಅನ್ಯಾಯ ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಪಕ್ಷ. ಅಂಥ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕಲಿದ್ದೇವೆ ಎಂದು ವಿಜಯೇಂದ್ರ ಪ್ರಕಟಿಸಿದರು.

ಕಾಂಗ್ರೆಸ್ಸಿಗರು ಬಿಜೆಪಿಯ ಭ್ರಷ್ಟಾಚಾರದ ಕಟ್ಟು ಕಥೆ ಹೇಳುತ್ತಿದೆ. ನಮಗೆ ಧಮ್ಕಿ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರಕಾರವನ್ನು ಕಿತ್ತು ಹಾಕಲಿದ್ದೇವೆ. ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ. ನಮ್ಮ ಹೋರಾಟ ವ್ಯಕ್ತಿಯ ವಿರುದ್ಧ ಅಲ್ಲ. ಭ್ರಷ್ಟ ವ್ಯವಸ್ಥೆ ವಿರುದ್ಧ; ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಇದು. ಇದೊಂದು ರಣಕಹಳೆ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ಅವರು ಮಾತನಾಡಿ, ರಾಹುಲ್ ಗಾಂಧಿಯವರ ಸೂಚನೆಯಂತೆ ಈ ಹಗರಣ ನಡೆದಿದೆ. ಹಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ. ಚುನಾವಣಾ ಭ್ರಷ್ಟಾಚಾರಕ್ಕೆ ಹಣ ಬಳಸಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಭ್ರಷ್ಟರು; ಅವರ ಅಕ್ರಮ ಹಣ ಈ ಹಿಂದೆ ಸಿಕ್ಕಿತ್ತು ಎಂದು ವಿವರಿಸಿದರು. ಸರಕಾರಕ್ಕೆ ನೋಟಿಸ್ ಕೊಟ್ಟ ಮಾನ್ಯ ರಾಜ್ಯಪಾಲರಿಗೆ ಧನ್ಯವಾದ ಸಲ್ಲಿಸಿದರು.

ಬಿಜೆಪಿ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ಮಾತನಾಡಿ, ಇದು ಜನರ ಪಾದಯಾತ್ರೆ. ವಿಜಯೇಂದ್ರ- ಕುಮಾರಸ್ವಾಮಿ ಅವರು ಕೃಷ್ಣಾರ್ಜುನರಂತೆ ಇದನ್ನು ಮುನ್ನಡೆಸುತ್ತಿದ್ದಾರೆ. ಕಾಂಗ್ರೆಸ್ ಎಂದರೆ ಭ್ರಷ್ಟರ ಸರಕಾರ, ಸುಳ್ಳರ ಸರಕಾರ ಎಂದು ಟೀಕಿಸಿದರು. ಸಂವಿಧಾನವನ್ನು ಅವಮಾನ ಮಾಡಿದ ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ಕೊಡಬೇಕಿದೆ ಎಂದು ಆಗ್ರಹಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಕಾಂಗ್ರೆಸ್ಸಿನ ಡಿಎನ್‌ಎಯಲ್ಲೇ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿತ್ತು. ಆದರೆ, ವಾಜಪೇಯಿ, ನರೇಂದ್ರ ಮೋದಿಯವರ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪಗಳಿಲ್ಲ ಎಂದರು. ಕಲ್ಲಿದ್ದಲು, 2 ಜಿ ಸೇರಿ ಅನೇಕ ಹಗರಣಗಳು ಆಗ ನಡೆದಿದ್ದವು. ಈಗ ಸಿದ್ದರಾಮಯ್ಯನವರು ಇಂಥ ಹಗರಣಗಳನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+