ತಮಿಳು ಭಾಷೆಯಲ್ಲಿ ಟ್ವೀಟ್ ಮಾಡಿದ ಸಿ.ಎಂ ಸಿದ್ದರಾಮಯ್ಯ: ಕರ್ನಾಟಕ - ತಮಿಳುನಾಡು ನಡುವೆ ಹೊಸ ಭಾಷಾ ಬಾಂಧವ್ಯ!
ಸದಾ ಭಾಷೆ ಹಾಗೂ ಜಲವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಕರ್ನಾಟಕ ಮತ್ತು ತಮಿಳುನಾಡಿನ ಸಂಬಂಧ ಕಳೆದ ಎರಡು ದಿನಗಳಿಂದ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ಇದರಲ್ಲಿ ಮೊದಲನೆಯದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದು. ಇದೀಗ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳು ಭಾಷೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಭಾಷಾ ಸಾಮರಸ್ಯಕ್ಕೆ ಕರ್ನಾಟಕ ಮತ್ತು ತಮಿಳುನಾಡು ಇದೀಗ ಸಾಕ್ಷಿಯಾಗಿದೆ. ಕರ್ನಾಟಕ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು ಮಾಡಿರುವ ಟ್ವೀಟ್ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಅವರೇ, ನಿಮ್ಮ ಆತ್ಮೀಯ ಶುಭಾಶಯಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಸಾಮಾಜಿಕ ನ್ಯಾಯ ಮತ್ತು ಒಕ್ಕೂಟ ವ್ಯವಸ್ಥೆಗಾಗಿ ಈ ಸವಾಲಿನ ಸಮಯದಲ್ಲಿ ನಿಮ್ಮ ಧ್ವನಿ ಶ್ಲಾಘನೀಯ. ನಮ್ಮ ದೇಶದ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಮತ್ತು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವಲ್ಲಿ ಕರ್ನಾಟಕ ಮತ್ತು ತಮಿಳುನಾಡು ಒಗ್ಗಟ್ಟಿನಿಂದ ನಿಲ್ಲುತ್ತವೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇನ್ನು ಭಾನುವಾರವಷ್ಟೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ಗಮನ ಸೆಳೆದಿದ್ದರು. ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ತಿರು (ಶ್ರೀ) ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ.
ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ; ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವುದಾಗಿ ಅವರು ಹೇಳಿದ್ದರು. ಇದರ ಬೆನ್ನಲ್ಲೇ ಸಿ.ಎಂ ಸಿದ್ದರಾಮಯ್ಯ ಅವರು ಸಹ ಸೋಮವಾರ (ಆಗಸ್ಟ್ 04)ರಂದು ತಮಿಳು ಭಾಷೆಯಲ್ಲಿ ತಮಿಳುನಾಡಿನ ಸಿಎಂ ಎಂ.ಕೆ ಸ್ಟಾಲಿನ್ ಅವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications