ಹೊಸ ಕನ್ನಡ ಧ್ವಜ ರೆಡಿ, ಕೇಂದ್ರ ಒಪ್ಪುವುದಷ್ಟೆ ಬಾಕಿ
Recommended Video

ಬೆಂಗಳೂರು, ಮಾರ್ಚ್ 08: ಪ್ರತ್ಯೇಕ ಧ್ವಜ ಸಮಿತಿಯ ಶಿಫಾರಿಸಿನಂತೆ ವಿನ್ಯಾಸ ಮಾಡಲಾಗಿರುವ ನೂತನ ನಾಡ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅನಾವರಣ ಮಾಡಿದರು.
ಈ ಮುಂಚೆ ಇದ್ದ ಹಳದಿ ಮತ್ತು ಕೆಂಪು ಬಣ್ಣದ ಜೊತೆಗೆ ಹೊಸ ಧ್ವಜದಲ್ಲಿ ಬಿಳಿ ಬಣ್ಣವನ್ನೂ ಸೇರಿಸಲಾಗಿದ್ದು, ಜೊತೆಗೆ ಸರ್ಕಾರದ ಲಾಂಛನದ ಚಿತ್ರವೂ ಧ್ವಜದಲ್ಲಿದೆ ಆದರೆ ಧ್ವಜವನ್ನು ಹಿಂದೆ ಮುಂದೆ ಹಿಡಿದಾಗ ಅಕ್ಷರಗಳು ಉಲ್ಟಾ ಕಾಣುತ್ತವಾದ್ದರಿಂದ 'ಸತ್ಯ ಮೇವ ಜಯತೆ' ಧ್ಯೇಯ ವಾಕ್ಯವನ್ನು ಕೈಬಿಡಲಾಗಿದೆ. ನೂತನ ಧ್ವಜನವನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಅನಾವರಣ ಮಾಡಿದರು.
ಧ್ವಜ ಅನಾವರಣದ ನಂತರ ಮಾತನಾಡಿದ ಸಿದ್ದರಾಮಯ್ಯ ಅವರು ಬಹಳ ದಿನದಿಂದ ರಾಜ್ಯಕ್ಕೆ ನಾಡಧ್ವಜ ಬೇಕೆಂಬ ಚರ್ಚೆ ನಡೆದಿತ್ತು ನಡೆದಿತ್ತು. ಇದೇ ವಿಚಾರವಾಗಿ ಹಿರಿಯ ಸಾಹಿತಿಗಳಾದ ಪಾಟೀಲ್ ಪುಟ್ಟಪ್ಪ ಅವರು ಕೂಡ ಪತ್ರ ಬರೆದಿದ್ದರು. ಹಾಗಾಗಿ ಎಸ್.ಜಿ.ಸಿದ್ದರಾಮಯ್ಯ ನೇತೃತ್ವದಲ್ಲಿ ಒಂದು ಸಮಿತಿ ಕೂಡ ರಚನೆ ಮಾಡಲಾಗಿತ್ತು. ಸಮಿತಿಯು ಕೂಲಂಕುಷವಾಗಿ ಚರ್ಚಿಸಿ, ವರದಿ ಕೊಟ್ಟಿದೆ. ಕನ್ನಡದ ಇತಿಹಾಸ, ಬಾವುಟ, ಸಂವಿಧಾನದಲ್ಲಿ ತೊಡಕಿನ ಬಗ್ಗೆ ಅಧ್ಯಯನ ಮಾಡಿದ ಬಳಿಕ ಈ ಬಾವುಟವನ್ನು ತಯಾರಿಸಲಾಗಿದೆ' ಎಂದು ಅವರು ಹೇಳಿದರು.

ಧ್ವಜ ಸಮಿತಿಯ ವರದಿಗೆ ಸಂಪುಟ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ದೊರೆತಿದೆ. ಆದರೆ ನಾವಿದನ್ನು ಘೋಷಣೆ ಮಾಡುತ್ತಿಲ್ಲ, ಇದಕ್ಕೆ ಕೇಂದ್ರದ ಒಪ್ಪಿಗೆಯೂ ಬೇಕಿರುವ ಕಾರಣ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಷ್ಟ್ರಧ್ವಜದ ಅಡಿಯಲ್ಲಿಯೇ ನಾಡಧ್ವಜ ಹಾರಲಿದೆ ಎಂದು ಕೇಂದ್ರಕ್ಕೆ ಭರವಸೆ ಸಹ ನಿಡಿದ್ದೇವೆ ಎಂದ ಅವರು ಇದೊಂದು ಐತಿಹಾಸಿಕ ನಿರ್ಣಯ ಎಂದು ಬಣ್ಣಿಸಿದರು.
ನಾಡ ಧ್ವಜದ ಮಾದರಿ ಹಾಗೂ ಪ್ರಸ್ತಾವನೆ ಹಾಗೂ ವರದಿ ಪ್ರತಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿದ್ದು, ಕೇಂದ್ರದ ಒಪ್ಪಿಗೆ ದೊರೆತ ನಂತರವಷ್ಟೆ ಅಧಿಕೃತವಾಗಿ ಕನ್ನಡ ಧ್ವಜ ಅಸ್ಥಿತ್ವಕ್ಕೆ ಬರಲಿದೆ. ದೇಶದಲ್ಲಿ ಜಮ್ಮು ಕಾಶ್ಮೀರ ಹೊರತು ಪಡಿಸಿದರೆ ಇನ್ನಾವ ರಾಜ್ಯಕ್ಕೂ ಪ್ರತ್ಯೇಕ ಧ್ವಜ ಇಲ್ಲ.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ











Click it and Unblock the Notifications