ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 5: ಮಹರ್ಷಿ ವಾಲ್ಮೀಕಿ ಜಯಂತಿಯ ದಿನ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
In Pics:ಸಿದ್ದರಾಮಯ್ಯ ಅನಾವರಣಗೊಳಿಸಿದ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಚಿತ್ರಗಳು
ಶಾಸಕರ ಭವನದಲ್ಲಿ ಆವರಣದಲ್ಲಿ ಮನಮೋಹಕ ವಾಲ್ಮೀಕಿ ತಪೋವನ ನಿರ್ಮಿಸಲಾಗಿದ್ದು ಈ ತಪೋವನದಲ್ಲಿ ಈ ಪ್ರತಿಮೆ ಸ್ಥಾಪನೆ ಮಾಡಲಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ವಾಲ್ಮೀಕಿ ಜಯಂತಿ ಸಮಾರಂಭವನ್ನು ಪಕ್ಷದ ಕಚೇರಿಯಲ್ಲಿ ದೀಪ ಬೆಳಗುವ ಮೂಲಕ ಆಚರಿಸಿದರು.

12 ಅಡಿ ಎತ್ತರದ ಕಪ್ಪು ಶಿಲೆ ವಿಗ್ರಹ
ಸಿದ್ದರಾಮಯ್ಯ ಅನಾವರಣ ಮಾಡಿದ ಭವ್ಯ ವಾಲ್ಮೀಕಿ ಪ್ರತಿಮೆಯನ್ನು ವಾಲ್ಮೀಕಿ ಜನಾಂಗದವರು 50 ಲಕ್ಷ ರೂ. ವೆಚ್ಚದಲ್ಲಿ ಕೆತ್ತನೆ ಮಾಡಿದ್ದಾರೆ. 25 ಟನ್ ತೂಕದ 12 ಅಡಿ ಎತ್ತರದ ಕಪ್ಪು ಶಿಲೆ ವಿಗ್ರಹವನ್ನು ತಮಿಳುನಾಡಿನ ಮಹಾಬಲಿಪುರಂನಲ್ಲಿ ಕೆತ್ತಿಸಲಾಗಿದೆ.

ಒಂದು ಕೋಟಿ ವೆಚ್ಚದಲ್ಲಿ ತಪೋವನ ನಿರ್ಮಾಣ
ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವಾಲ್ಮೀಕಿ ತಪೋವನದಲ್ಲಿ ಈ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಪುಥ್ಥಳಿ ಸುತ್ತಲೂ ತೋಟಗಾರಿಕೆ ಇಲಾಖೆ 30 ಲಕ್ಷ ರೂಪಾಯಿ ವೆಚ್ಚದಲ್ಲಿ ಉದ್ಯಾನ ಅಭಿವೃದ್ಧಿಗೊಳಿಸಿದೆ. ಸೀತೆ, ಲವ-ಕುಶ ಹಾಗೂ ಕೆಲವು ಪ್ರಾಣಿ-ಪಕ್ಷಿಗಳ ಪ್ರತಿಕೃತಿಯನ್ನು ಇಲ್ಲಿ ಅಳವಡಿಸಲಾಗಿದೆ.

ವಾಲ್ಮೀಕಿ ಜಯಂತ್ಯೋತ್ಸವ ಉದ್ಘಾಟನೆ
ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣದ ನಂತರ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ವಾಲ್ಮೀಕಿ ಪ್ರಶಸ್ತಿ ಪ್ರದಾನ
ಈ ಸಂದರ್ಭ ಮಾಜಿ ಸಚಿವ ತಿಪ್ಪೇಸ್ವಾಮಿ ಅವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಳ್ಳಕೆರೆ ಮೂಲದ ತಿಪ್ಪೇಸ್ವಾಮಿಯವರು ವಾಲ್ಮೀಕಿ ಜನಾಂಗಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಬಿಜೆಪಿ ಕಚೇರಿಯಲ್ಲೂ ವಾಲ್ಮೀಕಿ ಜಯಂತಿ
ಪಕ್ಷದ ಕೇಂದ್ರ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ, "ಭಾರತೀಯ ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ ಸಂಸ್ಕೃತದ ಆದಿ ಕವಿ ವಾಲ್ಮೀಕಿಗಳ ಕೊಡುಗೆ ಅನನ್ಯ," ಎಂದು ಹೇಳಿದರು.
ರಾಮರಾಜ್ಯದ ಪರಿಕಲ್ಪನೆಯನ್ನು ನಮಗೆ ನೀಡಿರುವುದೇ ಮಹರ್ಷಿ ವಾಲ್ಮೀಕಿ ಎಂದು ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಬಣ್ಣಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications