ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹೈಕಮಾಂಡ್ ಬುಲಾವ್?
ಬೆಂಗಳೂರು, ಡಿಸೆಂಬರ್ 02: ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಎಂ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕದನ ವಿರಾಮ ಘೋಷಿಸಿದ್ದರು.
ಇದೀಗ ಬೆಂಗಳೂರಿನ ಸದಾಶಿವ ನಗರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ಈ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಬೆಳಗಾವಿ ಅಧಿವೇಶನ, ಸಚಿವ ಸಂಪುಟ ಪುನಾರಚನೆ ಹಾಗೂ ನಿಗಮ ಮಂಡಳಿ ವಿಚಾರವಾಗಿಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಇನ್ನೂ ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ದೃಷ್ಟಿಕೋನದಡಿಯಲ್ಲಿ ಉತ್ತಮ ಆಡಳಿತ ಮತ್ತು ನಮ್ಮ ರಾಜ್ಯದ ನಿರಂತರ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಇಂದು ನನ್ನ ನಿವಾಸದಲ್ಲಿ ಮುಖ್ಯಮಂತ್ರಿಗಳಿಗೆ ಉಪಾಹಾರ ಕೂಟವನ್ನು ಆಯೋಜಿಸಿದೆ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಶಿವಕುಮಾರ್ ಮತ್ತು ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಸ್ವಾಗತಿಸಿದರು. ಮುಖ್ಯಮಂತ್ರಿಗಳು ಆಗಮಿಸಿದಾಗ ಶಿವಕುಮಾರ್ ಅವರ ಸಂಬಂಧಿಯಾಗಿರುವ ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಉಪಸ್ಥಿತರಿದ್ದರು.
ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಬ್ಬರು ನಾಯಕರು ನಡೆಸಿದ ಇದೇ ರೀತಿಯ ಸಭೆಯ ನಂತರ ನಂತರ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಅಧಿಕಾರ ಹಂಚಿಕೆ ಕುರಿತು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ನಡೆದ ಸಭೆಯ ನಂತರ, ಇಬ್ಬರೂ ನಾಯಕರು ಮುಂದೆ ಯಾವುದೇ ಗೊಂದಲ ಉಂಟಾಗುವುದಿಲ್ಲ. ನಾವು ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ್ದರು.
ಇನ್ನೂ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು, ನಾನು ಮತ್ತು ಮುಖ್ಯಮಂತ್ರಿಗಳು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕರ್ನಾಟಕಕ್ಕೆ ನಮ್ಮ ಭರವಸೆಗಳನ್ನು ಈಡೇರಿಸಲು ನಮ್ಮ ಸಾಮೂಹಿಕ ಪ್ರಯತ್ನಗಳನ್ನು ಚರ್ಚಿಸಲು ಮತ್ತು ಬಲಪಡಿಸಲು ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಉಪಾಹಾರಕ್ಕೆ ಆಹ್ವಾನಿಸಿದ್ದೇನೆ ಎಂದು ಸೋಮವಾರ ಡಿ ಕೆ ಶಿವಕುಮಾರ್ ಹೇಳಿದರು.
-
ಆರ್ಟಿಐನಡಿ ಮಾಹಿತಿ ನೀಡದೆ ನಿರ್ಲಕ್ಷ್ಯ: ಬಿಡಿಎ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿದ ಮಾಹಿತಿ ಆಯೋಗ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications