'ಅನ್ನ' ಸಿನಿಮಾ ನೋಡಿ ಅನ್ನಭಾಗ್ಯ ನೆನೆದ ಸಿಎಂ
ಸಿಎಂ ಸಿದ್ದರಾಮಯ್ಯ ಅವರು ರಾಜಕೀಯದ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಿಸಿ ಜಾಲಿ ಮೂಡ್ಗೆ ತೆರಳಿದ್ದಾರೆ. ನಿನ್ನೆ ಮೈಸೂರಿಗೆ ತೆರಳಿದ್ದ ಅವರು, ಡಿ.ಆರ್.ಸಿ ಚಿತ್ರಮಂದಿರದಲ್ಲಿ "ಅನ್ನ" ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ಅನ್ನದ ಮಹತ್ವದ ಕುರಿತಾಗಿ ಬೆಳಕು ಚೆಲ್ಲಿರುವ ಈ ಸಿನಿಮಾವನ್ನು ಕೊಂಡಾಡಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಿದ್ದಾರೆ. ಅನ್ನ ಸಿನಿಮಾ ನೋಡುತ್ತಾ ತಮ್ಮ ಬಾಲ್ಯದ ಘಟನೆಗಳನ್ನು ಮೆಲುಕು ಹಾಕಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಬಗ್ಗೆಯೂ ಸ್ಮರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಿನ್ನೆ ಮೈಸೂರಿನ ಡಿ.ಆರ್.ಸಿ ಚಿತ್ರಮಂದಿರದಲ್ಲಿ "ಅನ್ನ" ಸಿನಿಮಾ ವೀಕ್ಷಿಸಿದೆ. ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ಸಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು ಎಂದು ಮೆಲುಕು ಹಾಕಿದ್ದಾರೆ.
ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನೂ ಬಾಧಿಸದಿರಲಿ ಎಂದು 2013ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ, ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನೆಮಾ ಬೆಳಕು ಚೆಲ್ಲಿದೆ. ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದ್ದಾರೆ.

ಹನೂರು ಚನ್ನಪ್ಪ ಅವರ ಕಥಾಸಂಕನದಲ್ಲಿರುವ 'ಅನ್ನ' ಎಂಬ 22 ಪುಟಗಳ ಕಥೆ ಆಧರಿಸಿ ಈ ಸಿನಿಮಾವನ್ನು ಎನ್.ಎಸ್.ಇಸ್ಲಾಹುದ್ದೀನ್ ಆಕ್ಷನ್ ಕಟ್ ಹೇಳಿದ್ದಾರೆ. ಇದು 80ರ ದಶಕದಲ್ಲಿ ನಡೆಯುವ ಕಥೆ ಎನ್ನಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಹಬ್ಬದ ದಿನ ಮಾತ್ರವೇ ಅನ್ನ ಮಾಡುವ ಪದ್ಧತಿ ಇತ್ತು. ಈ ವಿಚಾರ ಕುರಿತಾಗಿಯೇ ಈ ಸಿನಿಮಾ ಬೆಳಕು ಚೆಲ್ಲಿದೆ.
ಮುಖ್ಯವಾಗಿ ಹಳ್ಳಿಯೊಂದರಲ್ಲಿ ಹುಟ್ಟಿ ಬೆಳೆದ ಬಡ ಹುಡುಗನೊಬ್ಬ ಜಾತ್ರೆಯಲ್ಲಿ ನಾಪತ್ತೆಯಾಗುತ್ತಾನೆ. ಬಳಿಕ ಅವನ ಜೀವನದಲ್ಲಿ ಎದುರಾಗುವ ಘಟನೆಗಳು ಹಾಗೂ ಅನ್ನದ ಬಗ್ಗೆ ಅರಿವು ಮೂಡಿಸುತ್ತಾ ಕಥೆ ಸಾಗುತ್ತದೆ ಎಂದು ವಿಮರ್ಶಕರು ಹೇಳಿದ್ದಾರೆ. ಚಿತ್ರದ ಮುಖ್ಯಭೂಮಿಕೆಯಲ್ಲಿ ಮಾಸ್ಟರ್ ನಂದನ್ ನಟಿಸಿದ್ದು, ಪದ್ಮಶ್ರೀ, ಬಲ ರಾಜವಾಡಿ, ಸಿದ್ದು ಪ್ರಸನ್ನ, ಸಂಪತ್ ಮತ್ತಿತರರ ತಾರಾಗಣವಿದೆ.

ಸಿದ್ದರಾಮಯ್ಯ ಅವರು ಈ ಹಿಂದೆ ಅನ್ನ ಚಿತ್ರದ ಪೋಸ್ಟರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸೆಪ್ಟೆಂಬರ್ 6ರಂದು ಅನ್ನ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.
ಸಿದ್ದರಾಮಯ್ಯ ಅವರು ಹಲವು ವೇದಿಕೆಗಳಲ್ಲಿ ಅನ್ನದ ಮಹತ್ವವನ್ನು ಸಾರಿದ್ದರು. ಹಸಿದವರಿಗೆ ಮಾತ್ರ ಊಟದ ಮಹತ್ವ ತಿಳಿದಿರುತ್ತದೆ. ಬಡಜನರು ಇನ್ನೊಬ್ಬರ ಮನೆಯಿಂದ ತುತ್ತು ಅನ್ನ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದೆ. ಈ ಕಾರಣದಿಂದಲೇ ಯಾರೂ ಸಹ ತುತ್ತು ಅನ್ನಕ್ಕಾಗಿ ಬೇರೊಬ್ಬರ ಮನೆ ಬಾಗಿಲಿಗೆ ಹೋಗದಂತೆ ಮಾಡಬೇಕು ಎಂದು ಶಪಥ ಮಾಡಿದ್ದೆ ಎಂದು ಹೇಳಿದ್ದರು. ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದಲೇ ರೂಪಿಸಿದ ಯೋಜನೆಯೇ ಅನ್ನಭಾಗ್ಯ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು.
-
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications