TB Dam: ಗೇಟ್ ತುಂಡಾದ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರು, ಆಗಸ್ಟ್ 13: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ರಾಜ್ಯದ ಎರಡನೇ ಅತೀ ದೊಡ್ಡ ಜಲಾಶಯವಾದ ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಮುರಿದು ಕೊಚ್ಚಿ ಹೋಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ವಿಪಕ್ಷ ನಾಯಕರು ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇವತ್ತು ಮಂಗಳವಾರ (ಆಗಸ್ಟ್ 13) ಸಿಎಂ ಸಿದ್ದರಾಮಯ್ಯ ಅವರು ಖುದ್ದ ಟಿಬಿ ಡ್ಯಾಂಗೆ ಬೇಟಿ ನೀಡಿ ಸದಸ್ಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಸದ್ಯ ತುಂಗಭದ್ರಾ ಜಲಾಶಯದ ಗೇಟ್ ಒಂದು ವೇಳೆ ಕೊಚ್ಚಿ ಹೋಗಿರದಿದ್ದರೆ ಇಂದು ಮಂಗಳವಾರ ನಿಗದಿಯಂತೆ ಸಿಎಂ ಸಿದ್ದರಾಮಯ್ಯ ಅವರು ಇದೇ ಡ್ಯಾಂಗೆ ಬಾಗಿನ ಅರ್ಪಿಸಲಿದ್ದರು. ರಾಜ್ಯ ಸರ್ಕಾರ ಅದಕ್ಕೆಲ್ಲ ಸಿದ್ಧತೆ ಮಾಡಿಕೊಂಡಿತ್ತು ಎನ್ನಲಾಗಿದೆ. ಅಷ್ಟರಲ್ಲಾಗಲೇ ಈ ಸಮಸ್ಯೆ ಸೃಷ್ಟಿಯಾಗಿದೆ.

ಇಂದು ಮಧ್ಯಾಹ್ನ 12ಗಂಟೆಗೆ ಅವರು ಡ್ಯಾಂ ವೀಕ್ಷಣೆ ಮಾಡಲಿದ್ದಾರೆ. ನಂತರ ಅವರು ಜಲಾಶಯದ ಸಮೀಪವೇ ಇರುವ ಅತಿಥಿಗೃಹದಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಡ್ಯಾಂ ಸುರಕ್ಷತೆ, ಡ್ಯಾಂ ಕೆಳಭಾಗದ ಗ್ರಾಮದ ಜನರು, ರೈತರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.
ಅಲ್ಲದೇ, ಟಿಬಿ ಡ್ಯಾಂ ಗೇಟ್ ಅಳವಡಿಕೆ ಕಾರ್ಯಕ್ಕೆ ಎಷ್ಟು ದಿವಸ ಹಿಡಿಬಹುದು. ಅಧಿಕಾರಿಗಳು ಮತ್ತು ತಜ್ಞರಿಂದ ಮಾಹಿತಿ ಪಡೆಯಲಿದ್ದಾರೆ. ಕೆಲವು ಅಗತ್ಯ ಸೂಚನೆಗಳನ್ನು ಅವರು ಅಧಿಕಾರಿಗಳಿಗೆ ಈ ವೇಳೆ ನೀಡಲಿದ್ದಾರೆ.
ಈ ಕುರಿತು ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕರು ಸ್ಥಳಕ್ಕೆ ಹೋಗಿ ಏನು ಮಾಡಬೇಕೆಂದು ತಿಳಿಸಿದ್ದಾರೆ. ಮಂಗಳವಾರ ನಾನು ಸಹ ತೆರಳಲಿದ್ದೇನೆ ಎಂದು ತಿಳಿಸಿದ್ದಾರೆ.
ಎಲ್ಲ ಡ್ಯಾಂ ಪರಿಶೀಲಿಸಿ ವರದಿ ನೀಡಲು ಸೂಚನೆ
ಟಿಬಿ ಡ್ಯಾಂ ಗೇಟಿನ ಚೈನ್ ಲಿಂಕ್ ತುಂಡಾಗಿ ಕೊಚ್ಚಿ ಹೋಗಿದೆ. ಸರ್ಕಾರದ ಸೂಚನೆ ಮೇರೆಗೆ ವಿಜಯನಗರದಲ್ಲಿ ಹೊಸ ಗೇಟ್ ಸಿದ್ಧಪಡಿಸಲಾಗುತ್ತಿದೆ. ಇದಷ್ಟೇ ಅಲ್ಲದೇ, ರಾಜ್ಯದ ಇತರ ಎಲ್ಲ ಜಲಾಶಯಗಳ ಸುರಕ್ಷತೆ, ಇಂದಿನ ಸ್ಥಿತಿಗತಿ ಪರಿಶೀಲಿಸಲು ಸರ್ಕಾರ ಪರಿಶೀಲನಾ ಸಮಿತಿ ರಚನೆ ಮಾಡಿದೆ. ಸಮಿತಿ ಸದಸ್ಯರು ಕೂಡಲೇ ಪರಿಶೀಲಿಸಿ ವರದಿ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications