ಕನ್ನಡ ರಾಜ್ಯೋತ್ಸವ; 64 ಪ್ರಶಸ್ತಿಗೆ 1,700 ಅರ್ಜಿಗಳು!
ಬೆಂಗಳೂರು, ಅಕ್ಟೋಬರ್ 25 : ನವೆಂಬರ್ ತಿಂಗಳು ಹತ್ತಿರ ಬಂತು. ಕನ್ನಡ ರಾಜ್ಯೋತ್ಸವದಂದು ಸರ್ಕಾರ ವಿವಿಧ ಕ್ಷೇತ್ರದ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಈ ಬಾರಿ 64 ಗಣ್ಯರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು, 1,700 ಅರ್ಜಿಗಳು ಬಂದಿವೆ.
ಅಕ್ಟೋಬರ್ 26ರ ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಿ. ಟಿ. ರವಿ ನೇತೃತ್ವದ ಸಮಿತಿ ಅರ್ಹರನ್ನು ಆಯ್ಕೆ ಮಾಡಲಿದೆ.

ಈ ಬಾರಿ 64ನೇ ಕನ್ನಡ ರಾಜ್ಯೋತ್ಸವ ಆದ್ದರಿಂದ, 64 ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಶಸ್ತಿಗಾಗಿ 1,700 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಇವುಗಳಲ್ಲಿ 64 ಗಣ್ಯರನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.
ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಅಕ್ಟೋಬರ್ 31ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ.
ನವೆಂಬರ್ 1ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾರೆ. 2018ರಲ್ಲಿ 63 ಗಣ್ಯರಿಗೆ ಪಶಸ್ತಿಯನ್ನು ಪ್ರಧಾನ ಮಾಡಲಾಗಿತ್ತು.
2018ರಲ್ಲಿ ನವೆಂಬರ್ 1ರ ಬದಲಾಗಿ ನವೆಂಬರ್ 29ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು.












Click it and Unblock the Notifications