ಕನ್ನಡ ರಾಜ್ಯೋತ್ಸವ; 64 ಪ್ರಶಸ್ತಿಗೆ 1,700 ಅರ್ಜಿಗಳು!
ಬೆಂಗಳೂರು, ಅಕ್ಟೋಬರ್ 25 : ನವೆಂಬರ್ ತಿಂಗಳು ಹತ್ತಿರ ಬಂತು. ಕನ್ನಡ ರಾಜ್ಯೋತ್ಸವದಂದು ಸರ್ಕಾರ ವಿವಿಧ ಕ್ಷೇತ್ರದ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಈ ಬಾರಿ 64 ಗಣ್ಯರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು, 1,700 ಅರ್ಜಿಗಳು ಬಂದಿವೆ.
ಅಕ್ಟೋಬರ್ 26ರ ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಿ. ಟಿ. ರವಿ ನೇತೃತ್ವದ ಸಮಿತಿ ಅರ್ಹರನ್ನು ಆಯ್ಕೆ ಮಾಡಲಿದೆ.
ಕನ್ನಡ ಶಾಲೆ ಮುಚ್ಚದಂತೆ ಕನ್ನಡಪರ ಹೋರಾಟಗಾರರ ಪ್ರತಿಭಟನೆ
ಈ ಬಾರಿ 64ನೇ ಕನ್ನಡ ರಾಜ್ಯೋತ್ಸವ ಆದ್ದರಿಂದ, 64 ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಶಸ್ತಿಗಾಗಿ 1,700 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಇವುಗಳಲ್ಲಿ 64 ಗಣ್ಯರನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.
ಕನ್ನಡ ನಾಮಫಲಕ ಇಲ್ಲದಿದ್ದರೆ ಉದ್ದಿಮೆ, ಅಂಗಡಿ ಪರವಾನಗಿ ರದ್ದು
ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಅಕ್ಟೋಬರ್ 31ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ.
ನವೆಂಬರ್
1ರಂದು
ಸಂಜೆ
ರವೀಂದ್ರ
ಕಲಾಕ್ಷೇತ್ರದಲ್ಲಿ
ನಡೆಯುವ
ಕಾರ್ಯಕ್ರಮದಲ್ಲಿ
ಮುಖ್ಯಮಂತ್ರಿಗಳು
ಪ್ರಶಸ್ತಿಯನ್ನು
ಪ್ರಧಾನ
ಮಾಡುತ್ತಾರೆ.
2018ರಲ್ಲಿ
63
ಗಣ್ಯರಿಗೆ
ಪಶಸ್ತಿಯನ್ನು
ಪ್ರಧಾನ
ಮಾಡಲಾಗಿತ್ತು.
2018ರಲ್ಲಿ
ನವೆಂಬರ್
1ರ
ಬದಲಾಗಿ
ನವೆಂಬರ್
29ರಂದು
ರಾಜ್ಯೋತ್ಸವ
ಪ್ರಶಸ್ತಿ
ಪ್ರಧಾನ
ಮಾಡಲಾಗಿತ್ತು.