Get Updates
Get notified of breaking news, exclusive insights, and must-see stories!

ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಸರಣಿ ಟ್ವೀಟ್ ಮಾಡಿದ ಯಡಿಯೂರಪ್ಪ

ಬೆಂಗಳೂರು, ಜನವರಿ 18: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸ್ಥಾಪನೆಯಾಗಲಿರುವ ಕ್ಷಿಪ್ರ ಕಾರ್ಯ ಪಡೆ(Rapid Action Force)ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಹಿಂದಿ ಹೇರಿಕೆಯಾಗಿದ್ದು, ಕನ್ನಡತನ ನಾಶಗೊಳಿಸುವ ವ್ಯವಸ್ಥಿತ ದಾಳಿ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಯಡಿಯೂರಪ್ಪ ಅವರು ಸರಣಿ ಟ್ವೀಟ್ಸ್ ಹೀಗಿದೆ:
'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

CM Yediyurappa hits out at CM Uddhav’s demand of wanting the Marathi speaking land from Karnataka

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ' : ಮುಖ್ಯಮಂತ್ರಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+