ಕೊನೆಗೂ ಲಿಂಗಾಯತ ಸಮುದಾಯದ ಒತ್ತಡಕ್ಕೆ ಮಣಿದ ಯಡಿಯೂರಪ್ಪ!
ಬೆಂಗಳೂರು, ನ. 17: ತಮ್ಮದೇ ಸಮುದಾಯದ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊನೆಗೂ ಮಣಿದಿದ್ದಾರೆ. ಕಳೆದ ಹಲವು ವರ್ಷಗಳಿಂದ ಈಡೇರದ ಲಿಂಗಾಯತ ಸಮುದಾಯದ ಬೇಡಿಕೆ ಬಸವಕಲ್ಯಾಣ ಉಪ ಚುನಾವನೆ ಹಿನ್ನೆಲೆಯಲ್ಲಿ ಈಡೇರಿದೆ. ಇತ್ತೀಚೆಗಷ್ಟೆ ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದ ಸಿಎಂ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮರಾಠ ಸಮುದಾಯದ ನಾಯಕರ ಸಭೆಯನ್ನು ನಡೆಸಿದ್ದರು. ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ಅಕಾಲಿನ ನಿಧನದಿಂದ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಇದೇ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರು ಕ್ಷೇತ್ರಕ್ಕೆ ಪ್ರವಾಸ ತೆರಳಿದ್ದರು ಎನ್ನಲಾಗಿತ್ತು.
ವಿಜಯೇಂದ್ರ ಅವರ ಬಸವಕಲ್ಯಾಣಕ್ಕೆ ಭೇಟಿ, ಅಲ್ಲಿ ಮರಾಠ ಸಮುದಾಯದ ನಾಯಕರೊಂದಿಗಿನ ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಅವರು ಮಹತ್ವವ ಘೋಷಣೆ ಮಾಡಿದ್ದರು. ಮರಾಠ ಸಮುದಾಯದ ಸಮಗ್ರ ಅಭಿವೃದ್ಧಿಗೆ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಹಾಗೂ 50 ಕೋಟಿ ರೂ.ಗಳನ್ನು ಕಾಯ್ದಿರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ಮಾಡಿದ್ದರು.
ಆ ಆದೇಶಕ್ಕೆ ಇಡೀ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿನ ಲಿಂಗಾಯತ ನಾಯಕರೂ ಕೂಡ ಯಡಿಯೂರಪ್ಪ ಎದುರು ಮಹತ್ವದ ಬೇಡಿಕೆ ಇಟ್ಟಿದ್ದರು. ಅದಕ್ಕೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಲಿಂಗಾಯತ ಸಚಿವರೂ ಧ್ವನಿ ಗೂಡಿಸಿದ್ದರು. ಇದೀಗ ಎಲ್ಲರ ಒತ್ತಡಕ್ಕೆ ಮಣಿದು ಯಡಿಯೂರಪ್ಪ ಆದೇಶ ಮಾಡಿದ್ದಾರೆ.

ಲಿಂಗಾಯತ ಸಮುದಾಯದ ಬೇಡಿಕೆ
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡುತ್ತಿದ್ದಂತೆಯೆ ಪ್ರಬಲ ಲಿಂಗಾಯತ ಸಮುದಾಯ ಬೇಡಿಕೆ ಇಟ್ಟಿತ್ತು. ರಾಜ್ಯದಲ್ಲಿ ಹೆಚ್ಚಿನ ಜನಸಂಖ್ಯೆಯಲ್ಲಿರುವ ಲಿಂಗಾಯತರಲ್ಲಿಯೂ ಕಡು ಬಡವರಿದ್ದಾರೆ ಎಂದಿದ್ದರು. ಆದರೆ ಮರಾಠ ಪ್ರಾಧಿಕಾರ ರಚನೆ ಮಾಡಿದ್ದಕ್ಕೆ ಕನ್ನಡ ಪರ ಸಂಘಟನೆಗಳಿಂದಲೂ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಹೀಗಾಗಿ ಗಲಿಬಿಲಿಗೊಂಡಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದೆ.

ಸಿಎಂ ಯಡಿಯೂರಪ್ಪ ಆದೇಶ
ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸುವುದು ಅಗತ್ಯವಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮವನ್ನು ಸ್ಥಾಪಿಸಲು ಆದೇಶ ಮಾಡಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯರ್ಶಿಗೆ ಸಿಎಂ ಯಡಿಯೂರಪ್ಪ ಆದೇಶ ಮಾಡಿದ್ದಾರೆ.
ಆ ಮೂಲಕ ತಮ್ಮದೇ ಸಮಾಜದಿಂದ ಎದುರಾಗಿದ್ದ ಆಕ್ಷೇಪವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಣಿಸಿದ್ದಾರೆ. ಆದರೆ ಲಿಂಗಾಯತ ಸಮುದಾಐದ ಮತ್ತೊಂದು ಬಹುದೊಡ್ಡ ಬೇಡಿಕೆ ಕುರಿತು ಯಾವುದೇ ಮಾತನ್ನು ಯಡಿಯೂರಪ್ಪ ಅವರು ಆಡಿಲ್ಲ. ಅದು ಮೀಸಲಾತಿ ವಿಚಾರ.

ಮೀಸಲಾತಿಗೆ ಲಿಂಗಾಯತರ ಆಗ್ರಹ!
ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಬದಲು ನಮ್ಮ ಸಮುದಾಯಕ್ಕೆ ಮಹಾರಾಷ್ಟ್ರ ಮಾದರಿಯಲ್ಲಿ ಶೇಕಡಾ 16 ರಿಂದ 18ರಷ್ಟು ಉದ್ಯೋಗ, ಶೈಕ್ಷಣಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಮೀಸಲಾತಿ ಒಡಿ ಎಂದು ಲಿಂಗಾಯತ ಸಮುದಾಯದ ನಾಯಕರಾದ ಮಾಜಿ ಸಚಿವರಾದ ಜೆಡಿಎಸ್ ಪಕ್ಷದ ಬಸವರಾಜ್ ಹೊರಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಎಂ.ಬಿ. ಪಾಟೀಲ್ ಅವರು ಒತ್ತಾಯಿಸಿದ್ದಾರೆ. ಅದಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಬಿ.ಸಿ. ಪಾಟೀಲ್ ಅವರೂ ಧ್ವನಿಗೂಡಿಸಿದ್ದರು. ಹೀಗಾಗಿ ಬರಿ ಪ್ರಾಧಿಕಾರ ರಚನೆಯಿಂದ ಲಿಂಗಾಯತ ಸಮುದಾಯ ತೃಪ್ತಿಗೊಳ್ಳುತ್ತದೆಯಾ ಎಂಬುದು ಈಗಿನ ಪ್ರಶ್ನೆ.
Recommended Video

ಉಪ ಚುನಾವಣೆ ಗೆಲ್ಲುವ ತಂತ್ರ
ಲಿಂಗಾಯತ ಸಮುದಾಯದ ಬೇಡಿಕೆ ಈಡೇರಿಸುವ ಮೂಲಕ ತಕ್ಷಣದ ವಿರೋಧದಿಂದ ಯಡಿಯೂರಪ್ಪ ಸರ್ಕಾರ ಬಚಾವಾಗಿದೆ. ಆದರೆ ಮತ್ತೊಂದೆಡೆ ವೀರಶೈವ-ಲಿಂಗಾಯತ ಮೀಸಲಾತಿ ಕೂಗು ಉಪ ಚುನಾವಣೆ ಹಿನ್ನೆಲೆಯಲ್ಲಿಯೇ ಜೋರಾಗುವ ಸಾಧ್ಯತೆಗಳೂ ಇವೆ. ಜೊತೆಗೆ ಕನ್ನಡ ಪರ ಸಂಘಟನೆಗಳು ಭಾಷಾ ಅಲ್ಪಸಂಖ್ಯಾತರ ಅಭಿವೃದ್ಧಿಗೆ, ಅದರಲ್ಲೂ ಆಗಾಗ ಬೆಳಗಾವಿಯಲ್ಲಿ ಗಡಿ ತಂಟೆ ತೆಗೆಯುವ ಮರಾಠಿ ಭಾಷಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿವೆ.
ಇದೆಲ್ಲವನ್ನೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಗೆ ಎದುರಿಸಿ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಗೆಲವು ಸಾಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications