ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕೌಶಲ್ಯ ಕರ್ನಾಟಕ ಮಾಸಪತ್ರಿಕೆ ಬಿಡುಗಡೆ ಮಾಡಿದ ಯಡಿಯೂರಪ್ಪ!
ಬೆಂಗಳೂರು, ನ. 30: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಹೊರ ತರುವ ಕೌಶಲ್ಯ ಕರ್ನಾಟಕ ಮಾಸ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಕೌಶಲ್ಯ ಅಭಿವೃದ್ಧಿ , ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮುಂದಿನ ಸಚಿವ ಸಂಪುಟದಲ್ಲಿ ಎನ್ಇಪಿ ಜಾರಿಗೆ ಅನುಮೋದನೆ
ಈ ಮಾಸ ಪತ್ರಿಕೆಯು ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳು, ಜಾಬ್ ರೋಲ್ಸ್, ಅಗತ್ಯ ಅರ್ಹತೆ, ಅವಧಿ, ವೃತ್ತಿಪರ ತರಬೇತಿ ಪಾಲುದಾರರು ಮತ್ತು ಉದ್ಯೋಗದಾತರು ಇತ್ಯಾದಿಗಳ ಮಾಹಿತಿ ಒದಗಿಸಲಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳು, ವೃತ್ತಿಪರ ತರಬೇತಿ ಸಂಸ್ಥೆಗಳು, ಉದ್ಯೋಗದಾತರು ಮತ್ತು ಶಿಕ್ಷಣ ಸಂಸ್ಥೆಗಳ ನಡುವಿನ ಕೊಂಡಿಯಾಗಿ ಕಾರ್ಯ ನಿರ್ವಹಿಸಲಿದೆ
Comments
English summary
Chief Minister B.S.Yediyurappa released the first edition of ‘Koushalya Karnataka’, a monthly magazine being brought out by the Skill Development, Entrepreneurship and Livelihood
Story first published: Monday, November 30, 2020, 23:28 [IST]