ಗ್ರಾಮ ಪಂಚಾಯತಿ ಸದಸ್ಯರೂ ಅಲ್ಲದ ಸಿಎಂ ಪುತ್ರ ವಿಜಯೇಂದ್ರಗೆ ಸರಕಾರದಲ್ಲಿ ಏನು ಕೆಲಸ?
ಬೆಂಗಳೂರು, ಸೆ 16: ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸರಕಾರದ ದೈನಂದಿನ ಆಗುಹೋಗುಗಳಲ್ಲಿ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇಂದು ನಿನ್ನೆಯದಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್, ಸಿಎಂ ಪುತ್ರನನ್ನು ತರಾಟೆಗೆ ತೆಗೆದುಕೊಂಡಿದೆ.
ಕೊರೊನಾ ಹಾವಳಿಯ ಈ ಸಮಯದಲ್ಲಿ ವಿಜಯೇಂದ್ರ, ವೈದ್ಯಾಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದು, ಕಾಂಗ್ರೆಸ್ ಕೆಂಗಣ್ಣಿಗೆ ಕಾರಣವಾಗಿದೆ. ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇರದ ವಿಜಯೇಂದ್ರ, ಅಧಿಕಾರಿಗಳ ಸಭೆಯನ್ನು ಹೇಗೆ ನಡೆಸಿದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ, " @BYVijayendra ತಾವು ಮುಖ್ಯಮಂತ್ರಿ ಅಲ್ಲ, ಮಂತ್ರಿಯಲ್ಲ, ಸಂಸದರಲ್ಲ, ಶಾಸಕರಲ್ಲ, ಗ್ರಾಮಪಂಚಾಯ್ತಿ ಸದಸ್ಯ ಕೂಡ ಅಲ್ಲ, ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿರದ ತಾವು ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದೇಕೆ".

"ಆ ಅಧಿಕಾರ ಕೊಟ್ಟವರಾರು? ಆಡಳಿತ ಯಂತ್ರದಲ್ಲಿ ಮೂಗು ತೂರಿಸಿದ ಈ "ದಲ್ಲಾಳಿತನ" ಪ್ರಜಾಪ್ರಭುತ್ವದ ಪವಿತ್ರತೆಗೆ ಧಕ್ಕೆ ತಂದಿದೆ"ಎಂದು ಕಾಂಗ್ರೆಸ್, ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದೆ.
ಈ ಹಿಂದೆ ಕೂಡಾ, ಹಲವು ಸರಕಾರೀ ಮಟ್ಟದ ಸಭೆಗಳಲ್ಲಿ ಸಚಿವರುಗಳ ಜೊತೆ ವಿಜಯೇಂದ್ರ ಭಾಗವಹಿಸಿದ್ದರು. ಇದಕ್ಕೆ, ಬಿಜೆಪಿಯಲ್ಲೂ ಆಕ್ಷೇಪ ವ್ಯಕ್ತವಾಗಿತ್ತು. ಈ ವಿಚಾರ ದೆಹಲಿ ವರಿಷ್ಠರ ಬಾಗಿಲನ್ನೂ ತಟ್ಟಿತ್ತು.
,@BYVijayendra ತಾವು
— Karnataka Congress (@INCKarnataka) September 15, 2020
ಮುಖ್ಯಮಂತ್ರಿ ಅಲ್ಲ
ಮಂತ್ರಿಯಲ್ಲ
ಸಂಸದರಲ್ಲ
ಶಾಸಕರಲ್ಲ
ಗ್ರಾಮಪಂಚಾಯ್ತಿ ಸದಸ್ಯ ಕೂಡ ಅಲ್ಲ,
ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿರದ ತಾವು ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದೇಕೆ,
ಆ ಅಧಿಕಾರ ಕೊಟ್ಟವರಾರು?
ಆಡಳಿತ ಯಂತ್ರದಲ್ಲಿ ಮೂಗು ತೂರಿಸಿದ ಈ "ದಲ್ಲಾಳಿತನ" ಪ್ರಜಾಪ್ರಭುತ್ವದ ಪವಿತ್ರತೆಗೆ ಧಕ್ಕೆ ತಂದಿದೆ pic.twitter.com/iLstDPBUWI
ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ವಿಚಾರವನ್ನು ಬಿ.ವೈ.ವಿಜಯೇಂದ್ರ ನಿರಾಕರಿಸುತ್ತಲೇ ಬಂದಿದ್ದಾರೆ. ಈಗ ವೈದ್ಯರ ಜೊತೆಗಿನ ಫೋಟೋ ಮಾಧ್ಯಮಗಳಲ್ಲಿ ಸುದ್ದಿಯಾದ ಬೆನ್ನಲ್ಲೇ, ಕಾಂಗ್ರೆಸ್, ಸಿಎಂ ಪುತ್ರನ ವಿರುದ್ದ ಕಿಡಿಕಾರಿದೆ.












Click it and Unblock the Notifications