ಪ್ರಧಾನಿ ಮೋದಿಗೆ ರಾಜ್ಯದಿಂದ ಹೋದ ಉಡುಗೊರೆ ಏನು ಗೊತ್ತಾ?
ಬೆಂಗಳೂರು, ಆ. 05: ಇಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮಮಂದಿರ ನಿರ್ಮಾಣ ಭೂಮಿ ಪೂಜಾ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಉಡುಗೊರೆಯನ್ನು ಕೊಟ್ಟರು. ಆ ಉಡುಗೊರೆಯಲ್ಲಿ ಒಂದು ವಿಶೇಷತೆ ಇತ್ತು. ಯಾಕೆಂದರೆ ಆ ಉಡುಗೊರೆ ಕರ್ನಾಟಕದಿಂದಲೇ ಹೋಗಿತ್ತು. ಸಿಎಂ ಯೋಗಿ ಆದಿತ್ಯನಾಥ ಅವರು ಕೊಟ್ಟ ಉಡುಗೊರೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರೂ ಖುಷಿಯಾಗಿದ್ದರು.
Recommended Video
ಹೌದು, ರಾಜ್ಯದಲ್ಲಿ ತಯಾರಾಗಿರುವ ಉಡುಗೊರೆಯನ್ನು ಉತ್ತರ ಪ್ರದೇಶ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯೋಗಿ ಆದಿತ್ಯನಾಥ ಅವರು ಕೊಟ್ಟಿದ್ದಾರೆ. ಅದು ಯಾವ ಉಡುಗೊರೆ? ಎಲ್ಲಿ ತಯಾರಿಸಲಾಗಿತ್ತು? ಯಾರು ನಿರ್ಮಾಣ ಮಾಡಿದ್ದು? ಎಲ್ಲ ವಿವರ ಇಲ್ಲಿದೆ.

ಪ್ರಧಾನಿಗೆ ಉಡುಗೊರೆ
ಇಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾನ ಸಮಾರಂಭ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಶ್ರೀರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದವರನ್ನು ಸ್ಮರಿಸಿದರು. ಅದಾದ ಬಳಿಕ ಸುಂದರವಾದ ಶ್ರೀ ಕೋದಂಡರಾಮ ಮೂರ್ತಿಯನ್ನು ಸಿಎಂ ಯೋಗಿ ಆದಿತ್ಯನಾಥ ಅವರು ಪ್ರಧಾನಿ ಮೋದಿ ಅವರಿಗೆ ಉಡುಗೊರೆ ನೀಡಿದರು.
ಕಟ್ಟಿಗೆಯಲ್ಲಿ ತಯಾರಿಸಲಾಗಿರುವ ಶ್ರೀ ಕೋದಂಡರಾಮನ ಮೂರ್ತಿಯನ್ನು ತಯಾರಿಸಲು ಶಿಲ್ಪಿ ಸುಮಾರು 6 ತಿಂಗಳುಗಳ ಶ್ರಮಿಸಿದ್ದಾರೆಂದು ವೇದಿಕೆಯಲ್ಲಿ ಘೋಷಣೆ ಮಾಡಲಾಯ್ತು. ನಂತರ ಕೋದಂಡರಾಮನ ಮೂರ್ತಿಯನ್ನು ಪ್ರಧಾನಿ ಮೋದಿ ಅವರಿಗೆ ಸಿಎಂ ಯೋಗಿ ಆದಿತ್ಯನಾಥ ಅವರು ನೀಡಿದರು.

ತೇಗದ ಕಟ್ಟಿಗೆ ಮೂರ್ತಿ
ಪ್ರಧಾನಿ ಮೋದಿ ಅವರಿಗೆ ಉಡುಗೊರೆ ಕೊಡಲಾದ ಕಟ್ಟಿಗೆ ಮೂರ್ತಿ ತಯಾರಾಗಿದ್ದು ತೇಗದ ಕಟ್ಟಿಗೆಯಲ್ಲಿ. ದಕ್ಷಿಣ ಭಾರತದ ಶೈಲಿಯಲ್ಲಿ ಮೂರ್ತಿಯನ್ನು ಕೆತ್ತನೆ ಮಾಡಲಾಗಿದೆ.
ಬೆಂಗಳೂರಿನ ನಿವಾಸಿ ಶಿಲ್ಪಿ ಪಿ. ರಾಮಮೂರ್ತಿ ಅವರು ಎರಡೂವರೆ ತಿಂಗಳುಗಳ ಅವಧಿಯಲ್ಲಿ 3 ಅಡಿಗಳ ಎತ್ತರದ ಶ್ರೀಕೋದಂಡರಾಮನ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ. ಈ ಮೊದಲು 7.5 ಅಡಿ ಎತ್ತರದ ಕೋದಂಡರಾಮನ ಮೂರ್ತಿಯನ್ನು ಕೆತ್ತನೆ ಮಾಡಿದ್ದರು. ಅದಕ್ಕಾಗಿ ರಾಷ್ಟ್ರಮಟ್ಟದ ಪ್ರಶಸ್ತಿಗೂ ಭಾಜನರಾಗಿದ್ದರು. ಆ ಕೊನೆಗೆ ಮೂರ್ತಿಯನ್ನು ಅಯೋಧ್ಯಾ ಸಂಸ್ಥಾನ ಖರೀದಿಸಿತ್ತು. ಹೀಗಾಗಿ ಪ್ರಧಾನಿ ಅವರಿಗೆ ಉಡುಗೊರೆ ಕೊಡಲು ಅಂಥದ್ದೆ ಮೂರ್ತಿ ಕೆತ್ತನೆ ಮಾಡಿಕೊಡಲು ಉತ್ತರ ಪ್ರದೇಶ ಸರ್ಕಾರ ಮನವಿ ಮಾಡಿಕೊಂಡಿತ್ತು.

ತುಂಬಾ ಖುಷಿಯಾಗಿದೆ
ನಾನು ಕೆತ್ತನೆ ಮಾಡಿರುವ ಶ್ರೀ ಕೋದಂಡರಾಮನ ಮೂರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ಕೊಟ್ಟಿರುವುದು ತುಂಬಾ ಖುಷಿಯಾಗಿದೆ ಎಂದು ಶಿಲ್ಪಿ ಪಿ. ರಾಮಮೂರ್ತಿ ಸಂತಸವನ್ನು ಹಂಚಿಕೊಂಡಿದ್ದಾರೆ.
ಕಳೆದ 6 ತಿಂಗಳುಗಳ ಹಿಂದೆ ಒಟ್ಟು ಮೂರು ಮೂರ್ತಿಗಳನ್ನು ತಯಾರಿಸಿ ಕೊಡಲು ಉತ್ತರ ಪ್ರದೇಶ ಆರ್ಡರ್ ಕೊಟ್ಟಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರಿಗೆ ಉಡುಗೊರೆ ಕೊಡಲು ಮೂರ್ತಿಗಳು ಬೇಕು ಎಂದು ತಿಳಿಸಿದ್ದರು. ಪ್ರಧಾನಿಗಳಿಗೆ ಕೊಟ್ಟಿರುವ ಮೂರ್ತಿಯೂ ಸೇರಿದಂತೆ ಮೂರು ಮೂರ್ತಿಗಳನ್ನು ದಕ್ಷಿಣ ಭಾರತದ ಶೈಲಿಯಲ್ಲಿ ನಿರ್ಮಿಸಿ ಕಳುಹಿಸಿದ್ದರು.

ಮೊದಲೇ ಗೊತ್ತಿತ್ತು
ಆರ್ಡರ್ ಕೊಡುವಾಗ ಉಡುಗೊರೆಯನ್ನು ಯಾರಿಗೆ ಕೊಡಲು ಎಂದು ಅವರು ತಿಳಿಸಿರಲಿಲ್ಲ. ನಂತರ ಶ್ರೀ ಕೋದಂಡರಾಮನ ಮೂರ್ತಿಯನ್ನು ಪ್ರಧಾನಿ ಮಂತ್ರಿಗಳಿಗೆ ಉಡುಗೊರೆ ಕೊಡಲಾಗುವುದು ಎಂದು ನನಗೆ ತಿಳಿಸಲಾಗಿತ್ತು. ಆಗಷ್ಟ್ 5ಕ್ಕೆ ಪ್ರಧಾನಿಗಳಿಗೆ ಉಡುಗೊರೆ ಕೊಡಲು ಬೇಕು ಎಂದು ಆರ್ಡರ್ ಕೊಟ್ಟವರು ತಿಳಿಸಿದ್ದರು. ಆಗಷ್ಟ್ 1 ರಂದು ಅಯೋಧ್ಯೆಗೆ ಕೋದಂಡರಾಮನ ಮೂರ್ತಿಯನ್ನು ಕಳುಹಿಸಿದ್ದೆ ಎಂದು ಶಿಲ್ಪಿ ಪಿ. ರಾಮಮೂರ್ತಿ ಹೇಳಿದರು.
ಇಂದು ನಾನು ನಿರ್ಮಿಸಿದ್ದ ಮೂರ್ತಿಯನ್ನು ಪ್ರಧಾನಿಗಳಿಗೆ ಉಡುಗೊರೆ ರೂಪದಲ್ಲಿ ಕೊಟ್ಟಿರುವುದು ಖುಷಿಯಾಗಿದೆ ಎಂದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications