ಕೇಂದ್ರ ಬಜೆಟ್ ಕುರಿತು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಪ್ರತಿಕ್ರಿಯೆ!

ಬೆಂಗಳೂರು, ಫೆ. 01: ಕೇಂದ್ರ ಬಜೆಟ್ ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. "ದೇಶ ಮೊದಲು" ಎಂಬ ಸಂಕಲ್ಪವೇ ಸಾಕಲ್ಲವೇ ದೇಶವನ್ನು ಸಬಲೀಕರಣದತ್ತ ಕೊಂಡೊಯ್ಯಲು? ಅದಕ್ಕಾಗಿಯೇ ಆತ್ಮನಿರ್ಭರ ಭಾರತಕ್ಕೆ ಒತ್ತು ಕೊಡಲಾಗುತ್ತಿದೆ. ಈ ಮೂಲಕ ರೈತರು, ಯುವಕರು, ಮಹಿಳೆಯರಿಗೆ ಆರ್ಥಿಕ ಬಲ ತುಂಬುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಇದಕ್ಕೆ ಪೂರಕವಾಗುವಂತೆ ರಾಜ್ಯ ಸರ್ಕಾರ ಹಾಗೂ ನಮ್ಮ ಸಹಕಾರ ಇಲಾಖೆ ಕೆಲಸ ಮಾಡಲಿದೆ. ಇಂತಹ ಒಂದು ಪರಿಣಾಮಕಾರಿ ಬಜೆಟ್ ಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನನ್ನ ಅಭಿನಂದನೆ ಎಂದು ಸಹಕಾರಿ ಸಚಿವ ಎಸ್‌.ಟಿ. ಸೋಮಶೇಖರ್ ಅವರು ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಕೃಷಿ ಹಾಗೂ ರೈತರ ಅಭ್ಯುದಯ, ಉನ್ನತೀಕರಣಕ್ಕೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ. ಇದು ಈ ಸಾಲಿನ ಬಜೆಟ್ ನಲ್ಲಿ ಗೋಚರಿಸಿದೆ. ರೈತರಿಗೆ ಆರ್ಥಿಕ ಬಲ, ಶಕ್ತಿ ತುಂಬಲು ಕನಿಷ್ಠ ಬೆಂಬಲ ಬೆಲೆ ನೀಡಲು ಬದ್ಧವಿದೆ ಎಂದು ಕೇಂದ್ರ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆಹಾರ ಧಾನ್ಯಗಳ ಖರೀದಿಗೆ 1,72,752 ರೂಪಾಯಿ ಮೀಸಲಿಡಲಾಗಿದೆ. ಸಾಮಾನ್ಯವಾಗಿ 1,41,930 ಕೋಟಿ ರೂಪಾಯಿಯನ್ನು ಆಹಾರ ಧಾನ್ಯಗಳ ಖರೀದಿಗೆ ಮೀಸಲಿಡಲಾಗುತ್ತಿತ್ತು ಎಂದು ಸಚಿವ ಸೋಮಶೇಖರ್ ಅವರು ಹೇಳಿದ್ದಾರೆ.

ಹೆಚ್ಚು ಬೆಂಬಲ ಬೆಲೆ

ಹೆಚ್ಚು ಬೆಂಬಲ ಬೆಲೆ

ಈ ಬಾರಿ ಹೆಚ್ಚಿನ ಹಣ ಮೀಸಲಿಟ್ಟಿದ್ದರಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ, ಎಲ್ಲ ಬೆಳೆಗಳಿಗೆ ಒಂದೂವರೆ ಪಟ್ಟು ಹೆಚ್ಚು ಬೆಂಬಲ ಬೆಲೆ ಘೋಷಣೆ ಮಾಡಿರುವುದು ಐತಿಹಾಸಿಕ ಕ್ರಮವಾಗಿದೆ. ಇದರಿಂದ ದೇಶದ 1.54 ಕೋಟಿ ರೈತರಿಗೆ ನೇರ ಉಪಯೋಗವಾಗಲಿದೆ. 2013-14ರ ಸಾಲಿಗೆ ಇದನ್ನು ಹೋಲಿಸಿದರೆ ಶೇ. 40ಕ್ಕಿಂತ ಹೆಚ್ಚು ರೈತರಿಗೆ ಇದರಿಂದ ಅನುಕೂಲವಾದಂತಾಗಿದೆ. ಈ ಮೂಲಕ ನಮ್ಮ ಮೂಲಮಂತ್ರವಾದ ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ನಮ್ಮ ಸರ್ಕಾರಗಳು ತೆಗೆದುಕೊಳ್ಳುತ್ತುವೆ ಎಂಬುದನ್ನು ಎತ್ತಿ ತೋರಿಸಿದಂತಾಗಿದೆ ಎಂದು ಸಚಿವ ಸೋಮಶೇಖರ್ ಅವರು ಹೇಳಿದ್ದಾರೆ.

Budget 2021 Live Updates : ರಕ್ಷಣಾ ಕ್ಷೇತ್ರಕ್ಕೆ ಶೇಕಡಾ 20ರಷ್ಟು ಅನುದಾನ ಹೆಚ್ಚಳ

ಎಪಿಎಂಸಿಗಳ ಉನ್ನತೀಕರಣ

ಎಪಿಎಂಸಿಗಳ ಉನ್ನತೀಕರಣ

ಎಪಿಎಂಸಿಗಳ ಉನ್ನತೀಕರಣಕ್ಕಾಗಿ ಹಾಗೂ ಮೂಲಸೌಕರ್ಯ ವೃದ್ಧಿಸುವ ಬಗ್ಗೆಯೂ ಕೇಂದ್ರ ಸರ್ಕಾರ ಘೋಷಣೆ ಮಾಡುವ ಮೂಲಕ ರೈತರ ಪರ ನಮ್ಮ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. 1 ಸಾವಿರ ಎಪಿಎಂಸಿ ಮಂಡಿಗಳಿಗೆ ಇನಾಮ್ ವಿಸ್ತರಣೆ ಮಾಡಲಾಗಿದ್ದು, ಇದರಡಿ ನಮ್ಮ ಎಪಿಎಂಸಿಗಳು ಬರಲಿವೆ ಎಂಬುದನ್ನು ಪರಿಶೀಲನೆ ಮಾಡಲಾಗುವುದು. ನಮ್ಮ ರಾಜ್ಯದ ಎಪಿಎಂಸಿ ಮಂಡಿಗಳು ಆಯ್ಕೆಯಾಗಿದ್ದರೆ ತ್ವರಿತ ಫಲ ಸಿಕ್ಕುವಂತೆ ನೋಡಿಕೊಳ್ಳಲಾಗುವುದು ಎಂದರು.

ಕೃಷಿ ಸಾಲಕ್ಕೆ ಆದ್ಯತೆ

ಕೃಷಿ ಸಾಲಕ್ಕೆ ಆದ್ಯತೆ

ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಆರ್ಥಿಕ ಬಲ ತುಂಬಲು ಕೃಷಿ ಸಾಲವಾಗಿ 16.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆಗೆ ಸಹ ಕೇಂದ್ರ ಸರ್ಕಾರವು ಅನುದಾನವನ್ನು ಮೀಸಲಿಡುತ್ತಿರುವುದು ಸಹ ಸ್ವಾಗತಾರ್ಹ ಕ್ರಮವಾಗಿದ್ದು, ಇವುಗಳಲ್ಲಿ ರಾಜ್ಯಕ್ಕೆ ಬರುಬಹುದಾದ ಅನುದಾನಗಳಿಗೆ ಕ್ರಮವಹಿಸಲಾಗುವುದು.

ಕೃಷಿ ಉತ್ಪನ್ನಗಳ ರಪ್ತಿಗೆ ಕೇಂದ್ರ ಸರ್ಕಾರ ಆದ್ಯತೆ ಕೊಟ್ಟಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಸೋಮಶೇಖರ್ ಅವರು ಮನವಿ ಮಾಡಿದ್ದಾರೆ.

ಬೆಂಗಳೂರು ಅಭಿವೃದ್ಧಿಗೆ ಒತ್ತು

ಬೆಂಗಳೂರು ಅಭಿವೃದ್ಧಿಗೆ ಒತ್ತು

ಬೆಂಗಳೂರು ಅಭಿವೃದ್ಧಿಗೂ ಸಹ ಕೇಂದ್ರ ಸರ್ಕಾರ ಗಮನಹರಿಸುವ ಮೂಲಕ ಬೆಂಗಳೂರು ಮೆಟ್ರೋಗಾಗಿ 14788 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಹೆಮ್ಮೆಯ ವಿಚಾರ. ಈ ಮೂಲಕ ರಾಜಧಾನಿಯ ಅಭಿವೃದ್ಧಿ ಜೊತೆಗೆ ನನ್ನ ಕ್ಷೇತ್ರದ ಜನರಿಗೂ ಉಪಯೋಗವಾಗಲಿದೆ ಎಂಬುದು ಸಂತಸದ ವಿಚಾರ.

ಉತ್ಪಾದನಾ ಕ್ಷೇತ್ರಕ್ಕೂ ಸಹ ಆತ್ಮನಿರ್ಭರ ಭಾರತ ಅಡಿ ಅನುದಾನಗಳನ್ನು ಮೀಸಲಿಟ್ಟಿದೆ. ಒಟ್ಟಾರೆಯಾಗಿ 27 ಲಕ್ಷ ಕೋಟಿ ರೂಪಾಯಿಯನ್ನು ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದು, 5 ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅನುದಾನ ನೀಡಿ ಆರ್ಥಿಕ ಸ್ಥಿತಿಯನ್ನು ಚೇತರಿಸುವ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸಹಕಾರ ಇಲಾಖೆ ಮೂಲಕ ಇದರ ಅನುಷ್ಠಾನ ಮಾಡುವಲ್ಲಿ ನಾವು ನೂರಕ್ಕೆ ನೂರು ಶ್ರಮವಹಿಸುತ್ತೇವೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ನಾಗರಿಕರ ಅನುಕೂಲಕ್ಕಾಗಿ ಈ ಸಾಲಿನ ಆಯವ್ಯಯದಲ್ಲಿ ಮೀಸಲಿಟ್ಟ ಎಲ್ಲ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಹಾಗೂ ಕಾರ್ಯಗತಕ್ಕೆ ನಮ್ಮ ರಾಜ್ಯ ಸರ್ಕಾರ ಕಟಿಬದ್ಧವಾಗಿದೆ ಎಂದು ಸೋಮಶೇಖರ್ ಹೇಳಿದ್ದಾರೆ.

Recommended Video

      ಒಂಟಿ ಸಲಗಕ್ಕೆ ಸಾಥ್ ಕೊಟ್ಟಿದ್ದು ಯಾರು ಗೊತ್ತಾ?? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+