ಕೊಡಗು ಪ್ರವಾಹ ಹಿನ್ನೆಲೆ ಸಮನ್ವಯ ಸಮಿತಿ ಮುಂದಕ್ಕೆ: ಪರಮೇಶ್ವರ್
ಬೆಂಗಳೂರು, ಆಗಸ್ಟ್ 22: ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಕಾರಣ, ಮುಖ್ಯಮಂತ್ರಿಗಳು, ಸಚಿವರು ಅಲ್ಲಿನ ಜನರ ಪರಿಸ್ಥಿತಿ ಸುಧಾರಣೆಗೆ ಹೆಚ್ಚಿನ ಗಮನ ನೀಡುವ ಈ ಸಮಯದಲ್ಲಿ ಸಮನ್ವಯ ಸಮಿತಿ ಸಭೆ ನಡೆಸುವುದು ಬೇಡವೆಂದು ತೀರ್ಮಾನಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.
ಕೊಡಗಿನಲ್ಲಿ ಭಾರಿ ಅನಾಹುತ ಸಂಭವಿಸಿದ್ದು ಈ ಹಂತದಲ್ಲಿ ಸಭೆ ನಡೆಸುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಸಮನ್ವಯ ಸಮಿತಿಯ ಸಭೆಯನ್ನು ಮುಂದೂಡಲಾಗಿದ್ದು, ಕೊಡಗಿನ ಪರಿಸ್ಥಿತಿ ಸುಧಾರಿಸಿದ ನಂತರ ಸಭೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಸದಾಶಿವನಗರದ ತಮ್ಮ ಮನೆಯಲ್ಲಿ ಧಿಡೀರ್ ಸುದ್ದಿಗೋಷ್ಟಿ ನಡೆಸಿ ಈ ವಿಷಯವನ್ನು ಅವರು ಮಾಧ್ಯಮಗಳಿಗೆ ತಿಳಿಸಿದರು. ಜೊತೆಗೆ ಕೊಡಗು ಪ್ರಸ್ತುತ ಸ್ಥಿತಿ ಮತ್ತು ಕೊಡಗಿನ ಪುನರ್ ನಿರ್ಮಾಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದರು.

ಸಿದ್ದರಾಮಯ್ಯ ಅಧ್ಯಕ್ಷರಾಗಿರುವ ಸಮನ್ವಯ ಸಮಿತಿ
ಸಿದ್ದರಾಮಯ್ಯ ಅಧ್ಯಕ್ಷರಾಗಿರುವ ಸಮನ್ವಯ ಸಮಿತಿಯ ಸಭೆ ಈ ತಿಂಗಳು ನಡೆಯಬೇಕಿತ್ತು. ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆ, ಶಾಧಿ ಭಾಗ್ಯಕ್ಕೆ ಅನುದಾನ ಕಡಿತ, ನಿಗಮ ಮಂಡಳಿಗಳ ನೇಮಕ, ಸಂಪುಟ ವಿಸ್ತರಣೆ, ಸ್ಥಳೀಯ ಸಂಸ್ಥೆ ಚುನಾವಣೆ, ಲೋಕಸಭೆ ಚುನಾವಣೆಗಳ ಬಗ್ಗೆ ಚರ್ಚೆ ನಡೆಯುವ ಭರವಸೆ ಇತ್ತು.

ಕುಮಾರಸ್ವಾಮಿ ಮೇಲೆ ಹರಿಹಾಯಲಿದ್ದ ಸಿದ್ದರಾಮಯ್ಯ
ಈ ಬಾರಿಯ ಸಮನ್ವಯ ಸಮಿತಿಯಲ್ಲಿ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿ ಅವರ ಮೇಲೆ ಮುರಿದು ಬೀಳಲಿದ್ದಾರೆ ಎಂದು ಎಣಿಸಲಾಗಿತ್ತು. ಅಧಿಕಾರಿಗಳ ವರ್ಗಾವಣೆ, ತಮ್ಮ ಆಪ್ತರಿಗೆ ಮನ್ನಣೆ ನೀಡದಿರುವುದು, ಜೆಡಿಎಸ್ ಪಕ್ಷದ ಶಾಸಕರಿಗೆ ಉತ್ತರ ಕರ್ನಾಟಕದಲ್ಲಿ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಿರುವುದು, ಉಚಿತ ಬಸ್ ಪಾಸ್ ವಿತರಣೆ, ಇನ್ನೂ ಹಲವು ವಿಷಯಗಳ ಬಗ್ಗೆ ಅವರು ಕುಮಾರಸ್ವಾಮಿ ವಿರುದ್ಧ ಹರಿಹಾಯಲಿದ್ದಾರೆ ಎಂದು ಎಣಿಸಲಾಗಿತ್ತು.

ಎಚ್ಡಿಕೆ-ಪರಮೇಶ್ವರ್ ಅಲ್ಪ ನಿರಾಳ
ಈಗ ಸಮನ್ವಯ ಸಮಿತಿ ಸಭೆ ಮುಂದೂಡಲ್ಪಟ್ಟಿರುವುದರಿಂದ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ವಿರುದ್ಧ ಕೆಂಪು ಬಾವುಟ ಹಾರಿಸಿರುವ ಪರಮೇಶ್ವರ್ ಅವರಿಗೂ ಸ್ವಲ್ಪ ಕಾಲ ನಿರಾಳ ಭಾವ ದೊರಕಲಿದೆ.

ಕೊಡಗಿನ ಪರಿಸ್ಥಿತಿ ಬಗ್ಗೆ ಪ್ರಸ್ತುತ ಮಾಹಿತಿ
ಕೊಡಗಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ನೀಡಿದ ಪರಮೇಶ್ವರ್ ಅವರು, ಪ್ರವಾಹದಿಂದಾಗಿ ಈವರೆಗೆ 8 ಜನ ಮೃತಪಟ್ಟಿದ್ದು, ಹಲವರು ನಿರಾಶ್ರಿತರಾಗಿದ್ದಾರೆ ಎಂದರು. 40 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ, ಸರ್ಕಾರದ ನೆರವಿನೊಂದಿಗೆ ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications