ಕಾಮೆಡ್–ಕೆ ಫಲಿತಾಂಶ : ಕರ್ನಾಟಕಕ್ಕೆ ಮೊದಲ 10 ರ್ಯಾಂಕ್
ಬೆಂಗಳೂರು, ಮೇ : ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ಕಾಮೆಡ್-ಕೆ 2017 ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಮೊದಲ 10 ರ್ಯಾಂಕ್ ನಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ಒಟ್ಟು 58,932 ವಿದ್ಯಾರ್ಥಿಗಳು ಇದೇ 14ರಂದು ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದವರಲ್ಲಿ ಕರ್ನಾಟಕದ 19,601 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 1,423 ವಿದ್ಯಾರ್ಥಿಗಳು ಮೊದಲ 2,000 ರ್ಯಾಂಕ್ ಪಡೆದು ಶೇ 70ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. [ಸಿಇಟಿ ಫಲಿತಾಂಶ ವಿಳಂಬ, ಕಾಮೆಡ್ ಕೆಗೆ ಲಾಭ]

ಜೆ.ಪಿ. ನಗರದ ಮಾಯಾಂಕ್ ಬರನ್ವಾಲ್ 180 ಅಂಕಗಳಿಗೆ 165 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಉತ್ತರಕನ್ನಡ ಜಿಲ್ಲೆ ಶಿರಸಿಯ ವಿಶ್ವಜಿತ್ ಪ್ರಕಾಶ್ ಹೆಗಡೆ (164 ಅಂಕ) ಎರಡನೇ ರ್ಯಾಂಕ್ ಪಡೆದಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಸೋಮೇಶ್ವರ ಲೇಔಟ್ನ ರುದ್ರಪಟ್ಟಣ ವಲ್ಲಭ್ ರಮಾಕಾಂತ್, ಸಹಕಾರ ನಗರದ ಸಿ.ವಿ. ಸಿದ್ಧಾರ್ಥ ಮತ್ತು ವಿಜಯ ಬ್ಯಾಂಕ್ ಲೇಔಟ್ನ ಎನ್. ಸಹನಾ ಈ ಮೂವರು ವಿದ್ಯಾರ್ಥಿಗಳು ತಲಾ 163 ಅಂಕ ಪಡೆದು ಮೂರನೇ ರ್ಯಾಂಕ್ ಪಡೆದಿದ್ದಾರೆ.
ಉಳಿದ 577 ವಿದ್ಯಾರ್ಥಿಗಳು ಶೇ 67ರಿಂದ ಶೇ 70ರಷ್ಟು ಅಂಕಗಳನ್ನು ಪಡೆದಿದ್ದಾರೆ. 7,427 ವಿದ್ಯಾರ್ಥಿಗಳು ಶೇ 50ರಿಂದ ಶೇ 60ರಷ್ಟು ಅಂಕಗಳನ್ನು ಗಳಿಸಿದ್ದಾರೆ.
ಮೊದಲ 100 ರ್ಯಾಂಕ್ ಗಳಲ್ಲಿ ಕರ್ನಾಟಕದ 70 ವಿದ್ಯಾರ್ಥಿಗಳು ಇದ್ದಾರೆ. ಅದೇ ರೀತಿ ಮೊದಲ 1,000 ರ್ಯಾಂಕ್ ನಲ್ಲಿ ಕರ್ನಾಟಕದ 398 ವಿದ್ಯಾರ್ಥಿಗಳು ಇದ್ದಾರೆ.
ವಿದ್ಯಾರ್ಥಿಗಳ ವೈಯಕ್ತಿಕ ಅಂಕ ಮತ್ತು ವಿವರಗಳು ವೆಬ್ಸೈಟ್ನಲ್ಲಿ (www.comedk.org) ಲಭ್ಯವಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications