E Khata: ಇ-ಖಾತಾ ಮಹತ್ವದ ಮಾಹಿತಿ ನೀಡಿದ ಆಯುಕ್ತರಾದ ಡಾ ರಾಜೇಂದ್ರ
ಬೆಂಗಳೂರು, ನವೆಂಬರ್26: ಬಾಕಿ ಉಳಿದಿರುವ ಎಲ್ಲಾ ಇ-ಖಾತಾ ಅರ್ಜಿಗಳನ್ನು ವಾರಾಂತ್ಯದೊಳಗೆ ವಿಲೇವಾರಿ ಮಾಡಲು ಆಯುಕ್ತರಾದ ಡಾ ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ಅರ್ಜಿಯನ್ನು ಸೂಕ್ತ ಕಾರಣವಿಲ್ಲದೆ ತಿರಸ್ಕರಿಸುವಂತಿಲ್ಲ. ನಾಗರಿಕರಿಗೆ ಇ-ಖಾತಾ ಪಡೆಯುವಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ-1 ರ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯನ್ನು ನಡೆಸಿ, ತೆರಿಗೆ ಸಂಗ್ರಹ, ಇ-ಖಾತಾ ಹಾಗೂ ಮತದಾರರ ಪಟ್ಟಿಯ ಸಕಾಲಿಕ ಕಾರ್ಯಗತಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಸ್ ವರ್ಕರ್ಸ್, ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಆಲಿಸಿ, ಜಿಬಿಎ ತಾಂತ್ರಿಕ ತಂಡದೊಂದಿಗೆ ಚರ್ಚಿಸಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಪಶ್ವಿಮ ನಗರ ಪಾಲಿಕೆಯ ವಲಯ-1 ರಲ್ಲಿ ಆಸ್ತಿ ತೆರಿಗೆ ವಸೂಲಿಗೆ ಕ್ರಮವಹಿಸಲು ಆಯುಕ್ತರಾದ ಡಾ ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು, ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರು ಪರಿಣಾಮಕಾರಿ ತೆರಿಗೆ ವಸೂಲಿಗೆ ಮುಂದಾಗಲು ಸೂಚನೆ ನೀಡಿದರು. ಪರಿಷ್ಕರಣೆ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು.
ಬೇಡಿಕೆ ನೋಟಿಸ್ಗಳನ್ನು ತಕ್ಷಣ ಜಾರಿಗೊಳಿಸಿ ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದರು. ತೆರಿಗೆ ಬಾಕಿದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಪ್ರಮುಖ ತೆರಿಗೆ ಬಾಕಿದಾರರ ಆಸ್ತಿಗಳಿಗೆ ಅಗತ್ಯವಿದ್ದಲ್ಲಿ ಮುಚ್ಚುವಿಕೆ ಕ್ರಮ ಜರುಗಿಸಲು ಸೂಚಿಸಿದರು. ಕರಡು ಮತದಾರರ ಪಟ್ಟಿ ಸಕಾಲದಲ್ಲಿ ಪೂರ್ಣಗೊಳಿಸಿ, ಅಂತಿಮ ಪಟ್ಟಿ ಸಿದ್ಧಪಡಿಸುವ ಕೆಲಸವನ್ನು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಕೈಗೆತ್ತಿಕೊಳ್ಳಲು ಸೂಚಿಸಿದರು.
ಬೂತ್ ಮಟ್ಟದ ಅಧಿಕಾರಿಗಳಿಗೆ ಸಮರ್ಪಕ ತರಬೇತಿ ನೀಡಲು ಸೂಚಿಸಿದರು. ಇನ್ನೂ ಬೂತ್ ಮಟ್ಟದ ಅಧಿಕಾರಿಗಳ ಕರ್ತವ್ಯಗಳನ್ನು ಯಾವುದೇ ಖಾಸಗಿ ವ್ಯಕ್ತಿಗಳ ಮೂಲಕ ನಡೆಸುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು. ಶಿಕ್ಷಕರ ಕ್ಷೇತ್ರ ಚುನಾವಣೆಯು ಸಮೀಪಿಸುತ್ತಿರುವುದರಿಂದ ಹಾಗೂ ನಗರ ಪಾಲಿಕೆ ಚುನಾವಣೆಗಳು ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ, ಚುನಾವಣಾ ಸಂಬಂಧಿತ ಎಲ್ಲಾ ಕಾರ್ಯಗಳನ್ನು ನಿಖರವಾಗಿ ಯೋಜಿಸಿ ಅದನ್ನು ಅನುಷ್ಠಾನಕ್ಕೆ ತರಬೇಕೆಂದು ಆಯುಕ್ತರು ನಿರ್ದೇಶಿಸಿದರು.
-
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ಒಕ್ಕೂಟ ವ್ಯವಸ್ಥೆ ಸಂವಿಧಾನದ ಮೂಲಭೂತ ರಚನೆಯ ಭಾಗ: ತಮಿಳುನಾಡು ಸಿಎಂ ಸ್ಟಾಲಿನ್ ಪತ್ರಕ್ಕೆ ಸಿದ್ದರಾಮಯ್ಯ ಉತ್ತರ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications