E Khata: ಇ-ಖಾತಾ ಮಹತ್ವದ ಮಾಹಿತಿ ನೀಡಿದ ಆಯುಕ್ತರಾದ ಡಾ ರಾಜೇಂದ್ರ
ಬೆಂಗಳೂರು, ನವೆಂಬರ್26: ಬಾಕಿ ಉಳಿದಿರುವ ಎಲ್ಲಾ ಇ-ಖಾತಾ ಅರ್ಜಿಗಳನ್ನು ವಾರಾಂತ್ಯದೊಳಗೆ ವಿಲೇವಾರಿ ಮಾಡಲು ಆಯುಕ್ತರಾದ ಡಾ ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ಅರ್ಜಿಯನ್ನು ಸೂಕ್ತ ಕಾರಣವಿಲ್ಲದೆ ತಿರಸ್ಕರಿಸುವಂತಿಲ್ಲ. ನಾಗರಿಕರಿಗೆ ಇ-ಖಾತಾ ಪಡೆಯುವಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ-1 ರ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆಯನ್ನು ನಡೆಸಿ, ತೆರಿಗೆ ಸಂಗ್ರಹ, ಇ-ಖಾತಾ ಹಾಗೂ ಮತದಾರರ ಪಟ್ಟಿಯ ಸಕಾಲಿಕ ಕಾರ್ಯಗತಗೊಳಿಸುವಿಕೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಸ್ ವರ್ಕರ್ಸ್, ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಆಲಿಸಿ, ಜಿಬಿಎ ತಾಂತ್ರಿಕ ತಂಡದೊಂದಿಗೆ ಚರ್ಚಿಸಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಪಶ್ವಿಮ ನಗರ ಪಾಲಿಕೆಯ ವಲಯ-1 ರಲ್ಲಿ ಆಸ್ತಿ ತೆರಿಗೆ ವಸೂಲಿಗೆ ಕ್ರಮವಹಿಸಲು ಆಯುಕ್ತರಾದ ಡಾ ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು, ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರು ಪರಿಣಾಮಕಾರಿ ತೆರಿಗೆ ವಸೂಲಿಗೆ ಮುಂದಾಗಲು ಸೂಚನೆ ನೀಡಿದರು. ಪರಿಷ್ಕರಣೆ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು.
ಬೇಡಿಕೆ ನೋಟಿಸ್ಗಳನ್ನು ತಕ್ಷಣ ಜಾರಿಗೊಳಿಸಿ ಬಾಕಿ ತೆರಿಗೆ ವಸೂಲಿ ಮಾಡಲು ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದರು. ತೆರಿಗೆ ಬಾಕಿದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಪ್ರಮುಖ ತೆರಿಗೆ ಬಾಕಿದಾರರ ಆಸ್ತಿಗಳಿಗೆ ಅಗತ್ಯವಿದ್ದಲ್ಲಿ ಮುಚ್ಚುವಿಕೆ ಕ್ರಮ ಜರುಗಿಸಲು ಸೂಚಿಸಿದರು. ಕರಡು ಮತದಾರರ ಪಟ್ಟಿ ಸಕಾಲದಲ್ಲಿ ಪೂರ್ಣಗೊಳಿಸಿ, ಅಂತಿಮ ಪಟ್ಟಿ ಸಿದ್ಧಪಡಿಸುವ ಕೆಲಸವನ್ನು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಕೈಗೆತ್ತಿಕೊಳ್ಳಲು ಸೂಚಿಸಿದರು.
ಬೂತ್ ಮಟ್ಟದ ಅಧಿಕಾರಿಗಳಿಗೆ ಸಮರ್ಪಕ ತರಬೇತಿ ನೀಡಲು ಸೂಚಿಸಿದರು. ಇನ್ನೂ ಬೂತ್ ಮಟ್ಟದ ಅಧಿಕಾರಿಗಳ ಕರ್ತವ್ಯಗಳನ್ನು ಯಾವುದೇ ಖಾಸಗಿ ವ್ಯಕ್ತಿಗಳ ಮೂಲಕ ನಡೆಸುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು. ಶಿಕ್ಷಕರ ಕ್ಷೇತ್ರ ಚುನಾವಣೆಯು ಸಮೀಪಿಸುತ್ತಿರುವುದರಿಂದ ಹಾಗೂ ನಗರ ಪಾಲಿಕೆ ಚುನಾವಣೆಗಳು ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ, ಚುನಾವಣಾ ಸಂಬಂಧಿತ ಎಲ್ಲಾ ಕಾರ್ಯಗಳನ್ನು ನಿಖರವಾಗಿ ಯೋಜಿಸಿ ಅದನ್ನು ಅನುಷ್ಠಾನಕ್ಕೆ ತರಬೇಕೆಂದು ಆಯುಕ್ತರು ನಿರ್ದೇಶಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ












Click it and Unblock the Notifications