ಕೋಮು ಗಲಭೆಗಳಲ್ಲಿ ಕರ್ನಾಟಕ ದಕ್ಷಿಣದ ನಂ.1
ಬೆಂಗಳೂರು, ಅ. 26 : ಆಡಳಿತ ನಡೆಸುತ್ತಿರುವ ಪಕ್ಷ ಯಾವುದೇ ಇರಲಿ, ಪೊಲೀಸ್ ವರಿಷ್ಠಾಧಿಕಾರಿ ಯಾರೇ ಇರಲಿ ಕರ್ನಾಟಕದಲ್ಲಿ ಕೋಮು ಗಲಭೆಗಳನ್ನು ಹತ್ತಿಕ್ಕಲು, ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ಯಾರಿಂದಲೂ ಸಾಧ್ಯವಾಗಿಲ್ಲ ಎನ್ನುವುದಕ್ಕೆ ಕೇಂದ್ರ ಗೃಹ ಮಂತ್ರಾಲಯ ನೀಡಿರುವ ಅಂಕಿಅಂಶಗಳು ಕನ್ನಡಿ ಹಿಡಿದಿವೆ.
ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ಒಟ್ಟು 222 ಕೋಮು ಗಲಭೆಗಳು ನಡೆದಿದ್ದು, ದಕ್ಷಿಣ ಭಾರತದಲ್ಲಿ ಕರ್ನಾಟಕ ಮೊದಲನೇ ಸ್ಥಾನ ಕಬಳಿಸಿದೆ ಮತ್ತು ಇಡೀ ಭಾರತದಲ್ಲಿ ನಾಲ್ಕನೇ ಸ್ಥಾನ ಆಕ್ರಮಿಸಿಕೊಂಡಿದೆ. ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಕೋಮು ಗಲಭೆಗಳಾಗಿರುವುವುದು ನಮ್ಮ ಕರ್ನಾಟಕದಲ್ಲೇ.
2010ರ ಜನವರಿಯಿಂದ 2013ರ ಮಾರ್ಚ್ ಒಳಗೆ ರಾಜ್ಯದಲ್ಲಿ ಒಟ್ಟು 22 ಕೋಮು ಗಲಭೆಗಳಾಗಿವೆ ಎಂದು ಸಚಿವಾಲಯದ ವರದಿ ಹೇಳಿದೆ. ಕೇರಳ (126), ಆಂಧ್ರಪ್ರದೇಶ (114) ಮತ್ತು ತಮಿಳುನಾಡು (86) ಪ್ರಕರಣಗಳು ವರದಿಯಾಗಿವೆ. ಕರ್ನಾಟಕದಲ್ಲಿ 2010ರಲ್ಲಿ 71, 2011ರಲ್ಲಿ 70, 2012ರಲ್ಲಿ 69 ಪ್ರಕರಣಗಳು ದಾಖಲಾಗಿದ್ದರೆ 2013ರ ಮೊದಲ ಮೂರು ತಿಂಗಳಲ್ಲಿ 12 ಕೋಮು ಗಲಭೆಗಳು ನಡೆದಿವೆ.

ಯಾವ ಪ್ರದೇಶಗಳಲ್ಲಿ ಹೆಚ್ಚು ಕೋಮು ಗಲಭೆಗಳು ನಡೆದಿವೆ ಎಂದು, ವರದಿ ಸಿದ್ಧಪಡಿಸುವ ಜವಾಬ್ದಾರಿ ಹೊತ್ತಿದ್ದ ಆಲ್ಟರ್ನೇಟಿವ್ ಲಾ ಫೋರಂನ ಕ್ಲಿಫ್ಟನ್ ರೋಜಾರಿಯೋ ಸ್ಪಷ್ಟವಾಗಿ ತಿಳಿಸಿಲ್ಲ. ಆದರೆ, ರಾಜ್ಯದ ಕರಾವಳಿಯಲ್ಲಿ ಹೆಚ್ಚು ಪ್ರಕರಣಗಳು (ಹೆಚ್ಚಾಗಿ ಚರ್ಚ್ ದಾಳಿಗಳು) ದಾಖಲಾಗಿವೆ ಎಂದು ತಿಳಿಸಿದ್ದಾರೆ.
"ಬರೀ ಪ್ರಕರಣ ದಾಖಲಾಗುವುದರಿಂದ ಶಿಕ್ಷೆ ಆಗುತ್ತದೆಂದು ಹೇಳಲಾಗುವುದಿಲ್ಲ. ಹಿಂದಿನ (ಬಿಜೆಪಿ) ಸರಕಾರವನ್ನೇ ನೋಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀರಾಮ ಸೇನೆ ವಿರುದ್ಧ ಹಾಕಿದ್ದ ಕೋಮು ಗಲಭೆ ಪ್ರಕರಣಗಳನ್ನು ಹಿಂತೆಗೆದುಕೊಂಡಿದೆ" ಎಂದು ಕ್ಲಿಫ್ಟನ್ ರೋಜಾರಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಮು ಗಲಭೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, "ಹೆಚ್ಚು ಪ್ರಕರಣ ದಾಖಲಾಗಿರುವುದು ರಾಜ್ಯ ಪೊಲೀಸ್ ಇಲಾಖೆ ಎಷ್ಟು ಕ್ಷಮತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇತರ ರಾಜ್ಯಗಳಲ್ಲಿ ಕಡಿಮೆ ಕೇಸುಗಳು ದಾಖಲಾಗಿವೆಯೆಂದರೆ ಅಲ್ಲಿ ಕಡಿಮೆ ಗಲಭೆ ನಡೆದಿದೆ ಎಂದು ಅರ್ಥವಲ್ಲ. ಆದರೆ, ರಾಜ್ಯ ಪೊಲೀಸರು ಹೆಚ್ಚು ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ" ಎಂದು ಹೇಳಿದ್ದಾರೆ.
ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ಪಚಾವೋ ಅವರು, "ಇತ್ತೀಚೆಗೆ ಜರುಗಿದ ದಸರಾ, ಬಕ್ರೀದ್ ಉತ್ಸವ ಸಂದರ್ಭದಲ್ಲಿ ರಾಜ್ಯ ಪೊಲೀಸರು ಯಾವುದೇ ಗಲಭೆಗಳಾಗದಂತೆ ಎಚ್ಚರದಿಂದ ಕಾರ್ಯ ನಿರ್ವಹಿಸಿದ್ದಾರೆ. ಕೇಂದ್ರ ಇಂಟೆಲಿಜೆನ್ಸ್ ನೀಡುವ ವರದಿಯ ಆಧಾರದ ಮೇಲೆ ಕ್ರಮ ತೆಗೆದುಕೊಂಡು ಕೋಮು ಗಲಭೆಗಳನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದೇವೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications