ಹಿಂದಿ, ಇಂಗ್ಲಿಷ್ ಭಾಷೆಯಿಂದ ರಾಜ್ಯದ ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆ ಅಯೋಮಯ; ಜೆಡಿಎಸ್ ಆರೋಪ
'ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ನಡೆಸುವುದರಿಂದಾಗಿ ಕರ್ನಾಟಕದ ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆ ಅಯೋಮಯವಾಗಿದೆ. ಗ್ರಾಮಗಳ ಜನರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ'.
ಬೆಂಗಳೂರು, ಫೆಬ್ರವರಿ. 08: ಕನ್ನಡಿಗರದ್ದೇ ಆದ ವಿಜಯಾ ಬ್ಯಾಂಕ್ ಮುಳುಗಿಸಿದ್ದಾಯ್ತು. ಈಗ ಅಲ್ಲಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿದೆ ಎಂದು ಜಾತ್ಯಾತೀತ ಜನತಾದಳ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಹಿಂದೆಯು ಕನ್ನಡದಲ್ಲಿಯೇ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸಬೇಕು, ರಾಜ್ಯದ ಯುವಕರಿಗೆ ಉದ್ಯೋಗ ನೀಡಬೇಕು ಎಂಬ ಬೇಡಿಕೆ ಇಡಲಾಗಿತ್ತು. ಜೊತೆಗೆ ಬ್ಯಾಂಕ್ನಲ್ಲಿ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆ ಬಲಸುವ ಕಾರಣ ಜನರಿಗೆ ಬ್ಯಾಂಕಿಂಗ್ ಸೇವೆ ಸರಿಯಾಗಿ ತಲುಪುತ್ತಿಲ್ಲ ಎಂದು ಜೆಡಿಎಸ್ ಆರೋಪಿಸಿದೆ.
"ಬ್ಯಾಂಕಿಂಗ್ ಕ್ಷೇತ್ರದ ಪರೀಕ್ಷೆಗಳು ಕನ್ನಡದಲ್ಲಿ ನಡೆಯದ ಕಾರಣ ಹಾಗೂ ಅನ್ಯ ರಾಜ್ಯಗಳಿಂದ ಆಯ್ಕೆಯಾಗುವ ಸಿಬ್ಬಂದಿಗಳು ಕನ್ನಡ ಕಲಿಯದೇ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ನಡೆಸುವುದರಿಂದಾಗಿ ಕರ್ನಾಟಕದ ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆ ಅಯೋಮಯವಾಗಿದೆ. ಗ್ರಾಮಗಳ ಜನರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ" ಎಂದು ಹೇಳಿದೆ.

"ಸೇವಾ ಕ್ಷೇತ್ರದ ಅನುಕೂಲಗಳನ್ನು ಪಡೆಯಲು ಭಾಷೆಯ ಕಾರಣದಿಂದ ಜನರು ವಂಚಿತರಾಗುವ ಪರಿಸ್ಥಿತಿ ಮನಸ್ಸಿಗೆ ನೋವು ತರುತ್ತದೆ. ಸರ್ಕಾರದ ನೀತಿ-ನಿಯಮಾವಳಿಗಳು ಜನರ ಅಶೋತ್ತರಗಳಿಗೆ ದನಿಯಾಗಬೇಕು. ಅದು ಬಿಟ್ಟು, ಸೇವಾ ಕ್ಷೇತ್ರಗಳಿಂದ ಗ್ರಾಮಗಳ ಜನರು ದೂರಾಗುವಂತೆ ಮಾಡಬಾರದು" ಎಂದಿದೆ.
"ಪ್ರಾದೇಶಿಕ ಭಾಷೆ, ಅಧಿಕಾರ, ಬೇಡಿಕೆಗಳನ್ನು ಕತ್ತು ಹಿಸುಕಿ ಸಂತಸಪಡುವ ವಿಕೃತ ನಡೆಯು ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರಕ್ಕಂತೂ ಅಭ್ಯಾಸವಾಗಿ ಹೋಗಿದೆ. ಕನ್ನಡಿಗರದ್ದೇ ಆದ ವಿಜಯಾ ಬ್ಯಾಂಕ್ ಮುಳುಗಿಸಿದ್ದಾಯ್ತು. ಬ್ಯಾಂಕಿಂಗ್ ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆ ಮಾಡಿದ ಕಾರಣ, ಅಲ್ಲಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿವೆ" ಎಂದು ಕಿಡಿಕಾರಿದೆ.
ಪ್ರಾದೇಶಿಕ ಭಾಷೆ, ಅಧಿಕಾರ, ಬೇಡಿಕೆಗಳನ್ನು ಕತ್ತು ಹಿಸುಕಿ ಸಂತಸಪಡುವ ವಿಕೃತ ನಡೆಯು @BJP4India ನೇತೃತ್ವದ ಒಕ್ಕೂಟ ಸರ್ಕಾರಕ್ಕಂತೂ ಅಭ್ಯಾಸವಾಗಿ ಹೋಗಿದೆ. ಕನ್ನಡಿಗರದ್ದೇ ಆದ ವಿಜಯಾ ಬ್ಯಾಂಕ್ ಮುಳುಗಿಸಿದ್ದಾಯ್ತು. ಬ್ಯಾಂಕಿಂಗ್ ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆ ಮಾಡಿದ ಕಾರಣ, ಅಲ್ಲಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿವೆ. 3/5
— Janata Dal Secular (@JanataDal_S) February 8, 2023
"ಬ್ಯಾಂಕ್ ಗಳು ಸ್ಥಳೀಯ ಭಾಷೆಗಳಲ್ಲೇ ಸಂವಹನ ಮಾಡಬೇಕೆಂದು ಆದೇಶಿಸಿದರೆ ನಡೆಯುವುದಿಲ್ಲ. ಅದು ಕಾರ್ಯಗತ ಆಗಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲೇಬೇಕಿದೆ. ಇಲ್ಲದಿದ್ದರೆ ನಮ್ಮ ಗ್ರಾಮೀಣ ಭಾಗದ ಜನತೆ ಬ್ಯಾಂಕಿಂಗ್ ನ ಎಲ್ಲ ಸೇವೆಗಳನ್ನು ಪಡೆಯಲು ಹರಸಾಹಸ ಪಡಬೇಕಾಗುತ್ತದೆ" ಎಂದು ವಿವರಿಸಿದೆ.
'ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಲು ಹಲವು ಬಾರಿ ವಿನಂತಿ ಮಾಡಿಕೊಳ್ಳಲಾಗಿದೆ. ಅವರು ನಮ್ಮ ಬೇಡಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ. ನಮ್ಮ ರಾಜ್ಯದ ತೆರಿಗೆ, ಅಧಿಕಾರ ಮಾತ್ರ ಅವರಿಗೆ ಬೇಕಿರುವುದು. ಇಂತಹ ಹೀನ ಮನಸ್ಥಿತಿಯವರನ್ನು ಜನತೆ ಅಧಿಕಾರದಿಂದ ಕಿತ್ತೊಗೆಯಲೇಬೇಕಿದೆ' ಎಂದು ಜನರಿಗೆ ಆಗ್ರಹಿಸಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications