ಹಿಂದಿ, ಇಂಗ್ಲಿಷ್ ಭಾಷೆಯಿಂದ ರಾಜ್ಯದ ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆ ಅಯೋಮಯ; ಜೆಡಿಎಸ್ ಆರೋಪ
'ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ನಡೆಸುವುದರಿಂದಾಗಿ ಕರ್ನಾಟಕದ ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆ ಅಯೋಮಯವಾಗಿದೆ. ಗ್ರಾಮಗಳ ಜನರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ'.
ಬೆಂಗಳೂರು, ಫೆಬ್ರವರಿ. 08: ಕನ್ನಡಿಗರದ್ದೇ ಆದ ವಿಜಯಾ ಬ್ಯಾಂಕ್ ಮುಳುಗಿಸಿದ್ದಾಯ್ತು. ಈಗ ಅಲ್ಲಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿದೆ ಎಂದು ಜಾತ್ಯಾತೀತ ಜನತಾದಳ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಹಿಂದೆಯು ಕನ್ನಡದಲ್ಲಿಯೇ ಬ್ಯಾಂಕಿಂಗ್ ಪರೀಕ್ಷೆಗಳನ್ನು ನಡೆಸಬೇಕು, ರಾಜ್ಯದ ಯುವಕರಿಗೆ ಉದ್ಯೋಗ ನೀಡಬೇಕು ಎಂಬ ಬೇಡಿಕೆ ಇಡಲಾಗಿತ್ತು. ಜೊತೆಗೆ ಬ್ಯಾಂಕ್ನಲ್ಲಿ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆ ಬಲಸುವ ಕಾರಣ ಜನರಿಗೆ ಬ್ಯಾಂಕಿಂಗ್ ಸೇವೆ ಸರಿಯಾಗಿ ತಲುಪುತ್ತಿಲ್ಲ ಎಂದು ಜೆಡಿಎಸ್ ಆರೋಪಿಸಿದೆ.
"ಬ್ಯಾಂಕಿಂಗ್ ಕ್ಷೇತ್ರದ ಪರೀಕ್ಷೆಗಳು ಕನ್ನಡದಲ್ಲಿ ನಡೆಯದ ಕಾರಣ ಹಾಗೂ ಅನ್ಯ ರಾಜ್ಯಗಳಿಂದ ಆಯ್ಕೆಯಾಗುವ ಸಿಬ್ಬಂದಿಗಳು ಕನ್ನಡ ಕಲಿಯದೇ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ನಡೆಸುವುದರಿಂದಾಗಿ ಕರ್ನಾಟಕದ ಗ್ರಾಮೀಣ ಬ್ಯಾಂಕಿಂಗ್ ವ್ಯವಸ್ಥೆ ಅಯೋಮಯವಾಗಿದೆ. ಗ್ರಾಮಗಳ ಜನರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ" ಎಂದು ಹೇಳಿದೆ.

"ಸೇವಾ ಕ್ಷೇತ್ರದ ಅನುಕೂಲಗಳನ್ನು ಪಡೆಯಲು ಭಾಷೆಯ ಕಾರಣದಿಂದ ಜನರು ವಂಚಿತರಾಗುವ ಪರಿಸ್ಥಿತಿ ಮನಸ್ಸಿಗೆ ನೋವು ತರುತ್ತದೆ. ಸರ್ಕಾರದ ನೀತಿ-ನಿಯಮಾವಳಿಗಳು ಜನರ ಅಶೋತ್ತರಗಳಿಗೆ ದನಿಯಾಗಬೇಕು. ಅದು ಬಿಟ್ಟು, ಸೇವಾ ಕ್ಷೇತ್ರಗಳಿಂದ ಗ್ರಾಮಗಳ ಜನರು ದೂರಾಗುವಂತೆ ಮಾಡಬಾರದು" ಎಂದಿದೆ.
"ಪ್ರಾದೇಶಿಕ ಭಾಷೆ, ಅಧಿಕಾರ, ಬೇಡಿಕೆಗಳನ್ನು ಕತ್ತು ಹಿಸುಕಿ ಸಂತಸಪಡುವ ವಿಕೃತ ನಡೆಯು ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರಕ್ಕಂತೂ ಅಭ್ಯಾಸವಾಗಿ ಹೋಗಿದೆ. ಕನ್ನಡಿಗರದ್ದೇ ಆದ ವಿಜಯಾ ಬ್ಯಾಂಕ್ ಮುಳುಗಿಸಿದ್ದಾಯ್ತು. ಬ್ಯಾಂಕಿಂಗ್ ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆ ಮಾಡಿದ ಕಾರಣ, ಅಲ್ಲಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿವೆ" ಎಂದು ಕಿಡಿಕಾರಿದೆ.
ಪ್ರಾದೇಶಿಕ ಭಾಷೆ, ಅಧಿಕಾರ, ಬೇಡಿಕೆಗಳನ್ನು ಕತ್ತು ಹಿಸುಕಿ ಸಂತಸಪಡುವ ವಿಕೃತ ನಡೆಯು @BJP4India ನೇತೃತ್ವದ ಒಕ್ಕೂಟ ಸರ್ಕಾರಕ್ಕಂತೂ ಅಭ್ಯಾಸವಾಗಿ ಹೋಗಿದೆ. ಕನ್ನಡಿಗರದ್ದೇ ಆದ ವಿಜಯಾ ಬ್ಯಾಂಕ್ ಮುಳುಗಿಸಿದ್ದಾಯ್ತು. ಬ್ಯಾಂಕಿಂಗ್ ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆ ಮಾಡಿದ ಕಾರಣ, ಅಲ್ಲಿನ ಹುದ್ದೆಗಳು ಅನ್ಯ ರಾಜ್ಯದವರ ಪಾಲಾಗುತ್ತಿವೆ. 3/5
— Janata Dal Secular (@JanataDal_S) February 8, 2023
"ಬ್ಯಾಂಕ್ ಗಳು ಸ್ಥಳೀಯ ಭಾಷೆಗಳಲ್ಲೇ ಸಂವಹನ ಮಾಡಬೇಕೆಂದು ಆದೇಶಿಸಿದರೆ ನಡೆಯುವುದಿಲ್ಲ. ಅದು ಕಾರ್ಯಗತ ಆಗಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲೇಬೇಕಿದೆ. ಇಲ್ಲದಿದ್ದರೆ ನಮ್ಮ ಗ್ರಾಮೀಣ ಭಾಗದ ಜನತೆ ಬ್ಯಾಂಕಿಂಗ್ ನ ಎಲ್ಲ ಸೇವೆಗಳನ್ನು ಪಡೆಯಲು ಹರಸಾಹಸ ಪಡಬೇಕಾಗುತ್ತದೆ" ಎಂದು ವಿವರಿಸಿದೆ.
'ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಲು ಹಲವು ಬಾರಿ ವಿನಂತಿ ಮಾಡಿಕೊಳ್ಳಲಾಗಿದೆ. ಅವರು ನಮ್ಮ ಬೇಡಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ. ನಮ್ಮ ರಾಜ್ಯದ ತೆರಿಗೆ, ಅಧಿಕಾರ ಮಾತ್ರ ಅವರಿಗೆ ಬೇಕಿರುವುದು. ಇಂತಹ ಹೀನ ಮನಸ್ಥಿತಿಯವರನ್ನು ಜನತೆ ಅಧಿಕಾರದಿಂದ ಕಿತ್ತೊಗೆಯಲೇಬೇಕಿದೆ' ಎಂದು ಜನರಿಗೆ ಆಗ್ರಹಿಸಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications