ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ರೈತರಿಗೆ 35-40 ಲಕ್ಷ ಪ್ರತಿ ಎಕರೆಗೆ ಪರಿಹಾರ: ಡಿ ಕೆ ಶಿವಕುಮಾರ್
ಹಾವೇರಿ: ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಅವರದೇ ಆದ ಲೆಕ್ಕಾಚಾರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರವಾಗಿ ಎಕರೆಗೆ 25 ಲಕ್ಷ ದರ ನಿಗದಿ ಮಾಡಲಾಗಿತ್ತು. ನಮ್ಮ ಸರ್ಕಾರದ ಸಚಿವರು ಸೇರಿ ಇತ್ತೀಚೆಗೆ ಸಭೆ ಮಾಡಿ ರೈತರಿಗೆ 35-40 ಲಕ್ಷ ಪ್ರತಿ ಎಕರೆಗೆ ಪರಿಹಾರ ನೀಡಲು ತೀರ್ಮಾನಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ನಾವು ನಿಮಗೆ ಐದು ಗ್ಯಾರಂಟಿ ಯೋಜನೆ ನೀಡುವುದಾಗಿ ಹೇಳಿದ್ದೆವು. ನೀವು ನಮಗೆ 6 ಶಾಸಕರನ್ನು ಕೊಟ್ಟಿದ್ದಕ್ಕೆ ನಾವು ಪ್ರತಿ ವರ್ಷ 54 ಸಾವಿರ ಕೋಟಿ ವೆಚ್ಚ ಮಾಡಿ ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಈ ಯೋಜನೆಗಳ ಜಾರಿ ಸಾಧ್ಯವೇ ಎಂದು ಬಸವರಾಜ ಬೊಮ್ಮಾಯಿ ಅವರು, ಯಡಿಯೂರಪ್ಪ ಅವರು ಕೇಳಿದರು. ಒಂದು ಕಾಳು ಕಮ್ಮಿ ಕೊಟ್ಟರೂ ಒಪ್ಪುವುದಿಲ್ಲ ಎಂದರು. ಚುನಾವಣೆಗೆ ಸಮಯದಲ್ಲಿ ಬಂದಾಗ ನಾನು ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಅಧಿಕಾರದಲ್ಲಿ ಇದ್ದದ್ದಕ್ಕೆ ಐದು ಗ್ಯಾರಂಟಿ ನೀಡಿ ನಿಮ್ಮ ಬದುಕಿನಲ್ಲಿ ಬದಲಾವಣೆ ಮಾಡುತ್ತಿದೆ. ಬೆಲೆ ಏರಿಕೆ ಸಮಸ್ಯೆ ಹೊರೆ ಇಳಿಸಲು ಈ ಯೋಜನೆ ನೀಡಿದೆವು. ಇಂತಹ ತೀರ್ಮಾನವನ್ನು ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಮಾಡಲಿಲ್ಲ ಎಂದರು.

ಈ ಹಿಂದೆ ರೈತರ ಪಂಪ್ ಸೆಟ್ ಗಳಿಗೆ 10 ಹೆಚ್ ಪಿ ವಿದ್ಯುತ್ ಉಚಿತ ನೀಡುತ್ತಾ ಬಂದಿದ್ದೇವೆ. ಇದಕ್ಕಾಗಿ ಸರ್ಕಾರ ಪ್ರತಿ ವರ್ಷ 20 ಸಾವಿರ ಕೋಟಿ ವೆಚ್ಚ ನೀಡುತ್ತಿದೆ. ಅನೇಕ ರಾಜ್ಯಗಳಲ್ಲಿ ಇಂತಹ ಯೋಜನೆ ಇಲ್ಲ. ನಮ್ಮ ಸರ್ಕಾರ ವಿವಿಧ ಕಾರ್ಯಕ್ರಮಗಳ ಮೂಲಕ ಸಬ್ಸಿಡಿ ರೂಪದಲ್ಲಿ ರಾಜ್ಯದ ಜನರ ಜೇಬಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದೆ. ಇನ್ನು ನಮ್ಮ ಸರ್ಕಾರ ರಾಜ್ಯದಲ್ಲಿ 500 ಕೆಪಿಎಸ್ ಶಾಲೆ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ.
ನಮ್ಮ ರಾಜ್ಯದಲ್ಲಿ ಸುಮಾರು 8 ಸಾವಿರ ಕೋಟಿ ಹಣ ಸಿಎಸ್ಆರ್ ನಿಧಿ ಮೂಲಕ ಸಂಗ್ರಹವಾಗುತ್ತದೆ. ಈ ಹಣವನ್ನು ಬಳಸಿಕೊಂಡು ಈ ನಿಧಿಯನ್ನು ಶಾಲೆಗಳ ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಗ್ರಾಮೀಣ ಭಾಗದ ಮಕ್ಕಳು ವಿದ್ಯಾಭ್ಯಾಸಕ್ಕೆ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಪ್ರತಿ ಮೂರು ಪಂಚಾಯ್ತಿಗೆ ಸೇರಿ ಒಂದು ಕೆಪಿಎಸ್ ಶಾಲೆ ನಿರ್ಮಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಿಗುವ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗಬೇಕು ಎಂಬುದು ನಮ್ಮ ಉದ್ದೇಶ. ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದರು.
ನರೇಗಾ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾಕೆ ಈ ನಿರ್ಧಾರಕ್ಕೆ ಬಂದಿದೆ ಗೊತ್ತಿಲ್ಲ. ಇಷ್ಟು ದಿನ ಈ ಯೋಜನೆಯಲ್ಲಿ 90% ಅನುದಾನ ನೀಡುತ್ತಿದ್ದ ಕೇಂದ್ರ ಈಗ ಇದರ ಪಾಲನ್ನು 60:40 ಅನುಪಾತಕ್ಕೆ ಇಳಿಸಿದೆ. ಈ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. ಈ ಬಗ್ಗೆ ನಾವು ಜನರಿಗೆ ಮನವರಿಕೆ ಮಾಡಬೇಕು. ನಮ್ಮ ಸರ್ಕಾರ ಉದ್ಯೋಗ, ಆಹಾರ, ಆರೋಗ್ಯ ಭದ್ರತೆ ನೀಡಿದೆ. ರೈತರಿಗೆ ಭೂಮಿ, ಬ್ಯಾಂಕುಗಳ ರಾಷ್ಟ್ರೀಕರಣ, ಮಧ್ಯಾಹ್ನ ಬಿಸಿಯೂಟ, ಸ್ತ್ರೀಶಕ್ತಿ, ಅನ್ನಭಾಗ್ಯ ಯೋಜನೆ ಸೇರಿದಂತೆ ಜನಪರ ಕಾರ್ಯಕ್ರಮಗಳನ್ನು ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ. ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ, ಈ ಜಿಲ್ಲೆಯ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುತ್ತಿರುವ ಈ ಆರು ಶಾಸಕರನ್ನು ಮತ್ತೆ ವಿಧಾನಸೌಧಕ್ಕೆ ಕಳುಹಿಸಬೇಕು ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications